ಬೆಂಗಳೂರು: ಡಿಕೆ ಶಿವಕುಮಾರ್ ಜೊತೆ ಸೇರಿ ರಮೇಶ್ ಜಾರಕಿಹೊಳಿ ಅವರ ಸಿಡಿ ಮಾಡಿಸಿದ್ದೇ ವಿಜಯೇಂದ್ರ (BY Vijayendra) ಅಂತ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.
ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆಗೊಂಡ ಬಳಿಕ ಮತ್ತೆ ಬಿಎಸ್ವೈ ಕುಟುಂಬದ ವಿರುದ್ಧ ಗುಡುಗಿದ್ದಾರೆ. ನಾನು ಮನೆಯಲ್ಲಿ ಸುಮ್ಮನೆ ಕೂರಲ್ಲ. ಬೀದರ್ ನಿಂದ ಚಾಮರಾಜನಗರ, ಕೋಲಾರದಿಂದ ಕೊಡಗಿನವರೆಗೆ ಪ್ರವಾಸ ಮಾಡ್ತೇನೆ. ಇವರ ವಿರುದ್ಧ ಹೋರಾಟ ನಿಲ್ಲಿಸಲ್ಲ, ಹಿಂದೂಗಳ ರಕ್ಷಣೆಗೆ ರಾಜ್ಯ ಪ್ರವಾಸ. ಅಪ್ಪಮಕ್ಕಳ ಕುಟುಂಬವನ್ನು ರಾಜಕೀಯದಿಂದ ದೂರ ಮಾಡ್ತೇನೆ ಶಪಥ ಮಾಡಿದ್ದಾರೆ. ಇದನ್ನೂ ಓದಿ: ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್ – ಪ್ರಭಾವಿಯನ್ನ ನೀವೇ ಹುಡುಕಿ, ನಿಮಗೆ ಸಿಕ್ಕೇ ಸಿಕ್ತಾರೆ: ಸತೀಶ್ ಜಾರಕಿಹೊಳಿ
ದೆಹಲಿಯಲ್ಲಿ ಇರುವ ನಮ್ಮ ಸಂಸದರು ಎಲ್ರೂ ವಿಜಯೇಂದ್ರ ವಿರುದ್ಧ ಇದ್ದಾರೆ, ವಿಜಯೇಂದ್ರನನ್ನ ತೆಗೀರಿ ಅಂತಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಹಗರಣ ಮಾಡಿದ್ದೇ ವಿಜಯೇಂದ್ರ ಮತ್ತು ಡಿಕೆಶಿ (DK Shivakumar). ಡಿಕೆಶಿ ಜೊತೆ ಸೇರಿ ವಿಜಯೇಂದ್ರ ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ರು. ಈಗ ಎದ್ದಿರುವ ಹನಿಟ್ರ್ಯಾಪ್ ಹಗರಣದಲ್ಲೂ ಇದೇ ಟೀಮ್ ಇದೆ ಅಂತ ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: ಲಿಂಗಾಯತರು ಯಡಿಯೂರಪ್ಪ ಜೊತೆಗಿಲ್ಲ, ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡ್ತಿದ್ದಾರೆ – ಯತ್ನಾಳ್
ನನ್ನ ಉಚ್ಛಾಟನೆಗೆ ಒತ್ತಡ ಹಾಕಿದ್ದು ವಿಜಯೇಂದ್ರ:
ಮುಂದುವರಿದು ಮಾತನಾಡಿದ ಯತ್ನಾಳ್, ಯಡಿಯೂರಪ್ಪ, ಮಗ ವಿಜಯೇಂದ್ರ ಕೂಡಿ ನನ್ನ ಉಚ್ಚಾಟನೆಗೆ ಹೈಕಮಾಂಡ್ ಮೇಲೆ ಒತ್ತಡ ಹಾಕಿಸಿದ್ರು. ಉಚ್ಚಾಟನೆ ಮಾಡಿದ್ರೆ ಬಿಜೆಪಿ ಬಿಟ್ ಹೋಗ್ತಾರೆ ಅಂತ ಮಾಡಿಸಿದ್ದಾರೆ. ವೀರಶೈವ ಲಿಂಗಾಯತ ಸಮುದಾಯ ಯಡಿಯೂರಪ್ಪ, ವಿಜಯೇಂದ್ರ ಜೊತೆಯಿಲ್ಲ. ಮಹಾಭಾರತ, ರಾಮಾಯಣ ಕಾಲದಿಂದಲೂ ಈಥರದ ಅನ್ಯಾಯ ನಡೆದುಕೊಂಡು ಬರ್ತಿದೆ. ಆದ್ರೆ ನಾನು ಉಚ್ಛಾಟನೆ ಮರುಪರಿಶೀಲನೆಗೆ ಮನವಿ ಮಾಡಲ್ಲ, ನಮ್ಮ ತಂಡದವ್ರು ಮನವಿ ಮಾಡ್ತಾರೆ ಅಂತ ಹೇಳಿದ್ದಾರೆ.
ಈ ಹಿಂದೆ ಅನಂತಕುಮಾರ್ ಹೆಗಡೆ, ಈಶ್ವರಪ್ಪಗೂ ಇದೇ ಅನ್ಯಾಯ ಆಯ್ತು. ಯಡಿಯೂರಪ್ಪ ಚೇಲಾನನ್ನ ನಿಲ್ಲಿಸಿ, ಸಿ.ಟಿ ರವಿಯನ್ನ ಸೋಲಿಸಿದ್ರು. ಈಗ ಹಿಂದೂ ನಾಯಕರನ್ನು ತುಳಿಯುವ ಕೆಲಸ ಆಗ್ತಿದೆ. ಉಚ್ಛಾಟನೆ ಯಿಂದ ಮುಜುಗರ ಆಗಿಲ್ಲ, ಹಿನ್ನಡೆ ಆಗಿಲ್ಲ. ಇದಕ್ಕೆ ಕಾರಣಕರ್ತರಾದವರು ನಾಶ ಆಗ್ತಾರೆ. ಯಾರ ಮನವರಿಕೆಯೂ ನಾನು ಮಾಡಲ್ಲ ಅಂತ ಯತ್ನಾಳ್ ಕೆಂಡಾಮಂಡಲವಾಗಿದ್ದಾರೆ. ಇದನ್ನೂ ಓದಿ: ಉಚ್ಚಾಟಿತ ಶಾಸಕ ಯತ್ನಾಳ್ ರಕ್ಷಣೆಗೆ ಧಾವಿಸಿದ ಸಂಗಡಿಗರು; ಬೆಂಗಳೂರಲ್ಲಿ ಭಿನ್ನರಿಂದ ಯತ್ನಾಳ್ ಜತೆ ಹೈವೋಲ್ಟೇಜ್ ಸಭೆ