– ಭಯೋತ್ಪಾದಕರಿಗೆ ಕರ್ನಾಟಕ ಸುರಕ್ಷಿತ ತಾಣ ಅನ್ನಿಸಿದೆ ಎಂದ ಶಾಸಕ
ವಿಜಯಪುರ: ರಾಮನ (Lard Rama) ಹೆಸರು ಇರೋದಕ್ಕೆ ರಾಮೇಶ್ವರಂ ಹೋಟೆಲ್ನ ಟಾರ್ಗೆಟ್ ಮಾಡಿದ್ದಾರೆ, ಅದು ಶುಕ್ರವಾರವೇ ಬಾಂಬ್ ಸ್ಫೋಟ ಮಾಡಿದ್ದಾರೆ. ಇದೆಲ್ಲವನ್ನ ಗಮನಿಸಿದ್ರೆ ಉದ್ದೇಶಪೂರ್ವಕವಾಗಿಯೇ ನಡೆಸಿರುವ ಕೃತ್ಯ ಅನ್ನಿಸುತ್ತೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮನ ಹೆಸರು ಇರುವ ರಾಮೇಶ್ವರಂ ಹೋಟೆಲ್ನ ಟಾರ್ಗೆಟ್ ಮಾಡಿದ್ದಾರೆ. ಶುಕ್ರವಾರವೇ ಈ ಕೃತ್ಯ ಎಸಗಿದ್ದಾರೆ. ರಾಮಮಂದಿರ ನಿರ್ಮಾಣ ಆದ ಮೇಲೆ ಎಲ್ಲಾದರೂ ತಮ್ಮ ಅಸ್ತಿತ್ವ ತೋರಿಸಬೇಕು ಅಂತ ಕೆಲ ಸಂಘಟನೆಗಳು ಉದ್ದೇಶಪೂರ್ವಕವಾಗಿ ಇಂತಹ ಕೆಲಸ ಮಾಡ್ತಿದ್ದಾರೆ. ಅವರೆಲ್ಲರಿಗೂ ವಿನಾಶ ಕಾಲ ಬಂದಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕರ ದರ್ಶನಕ್ಕೆ ತೆರೆದ ಅಬುಧಾಬಿ ಹಿಂದೂ ದೇವಾಲಯ- ಡ್ರೆಸ್ ಕೋಡ್, ಟೈಮಿಂಗ್ಸ್ ವಿವರ ಇಲ್ಲಿದೆ
ಸಿಎಂ ರಾಜೀನಾಮೆಗೆ ಆಗ್ರಹ:
ಈ ಹಿಂದೆ ಯಾರೋ ಒಬ್ಬರು ಬ್ರ್ಯಾಡ್ ಬೆಂಗಳೂರು ಮಾಡ್ತೀನಿ ಅಂತ ಹೇಳ್ದಾಗ, ಬಾಂಬ್ ಬೆಂಗಳೂರು ಮಾಡ್ತಾರೆ ಅಂತ ಹೇಳಿದ್ದೆ. ಈಗ ಅದು ನಿಜವಾಗುತ್ತಿದೆ. ಸಿದ್ದರಾಮಯ್ಯ (Siddaramaiah) ಅವರೇ ಭಯೋತ್ಪಾದನೆ ನಿಲ್ಲಿಸಲು ಆಗದಿದ್ದರೆ, ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಕೇವಲ ಗ್ಯಾರಂಟಿ, ಗ್ಯಾರಂಟಿ ಅಂದು, ಜನರ ಜೀವಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಭಯೋತ್ಪಾದಕರು ಇಲ್ಲಿ ಮಾಡೋದೇನಿಲ್ಲ, ಇಲ್ಲೇ ಭಯೋತ್ಪಾದರನ್ನ ಸೃಷ್ಟಿಸಿದ್ದಾರೆ: ಸೂಲಿಬೆಲೆ
ಇನ್ನೂ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿ, ಭಯೋತ್ಪಾದಕರಿಗೆ ಕರ್ನಾಟಕ ಅತ್ಯಂತ ಸುರಕ್ಷಿತ ತಾಣ ಅಂತ ಅನ್ನಿಸಿದೆ. ಘೋಷಣೆ ಕೂಗಿದ್ದವನ ಪರೀಕ್ಷೆಗೆ ಕಳುಹಿಸುವ ಅವಶ್ಯಕತೆಯಿಲ್ಲ ಅಂತ ಆವಾಗಲೆ ಹೇಳಿದ್ದೆ. ಏಕೆಂದರೆ ಮಾಧ್ಯಮಗಳಲ್ಲಿ ಸ್ಪಷ್ಟವಾಗಿ ಬಿತ್ತರಿಸಿದ್ದರು. ಈಗ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದರೂ ಬಹಿರಂಗಪಡಿಸಿಲ್ಲ. ಈಗ ಬಾಂಬ್ ಬ್ಲಾಸ್ಟ್ ಪ್ರಕರಣ ನೋಡಿದ್ರೆ ಈ ರಾಜ್ಯದಲ್ಲಿ ಭಯೋತ್ಪಾದನೆ ಚಟುವಟಿಗೆ ಇಂಬು ಕೊಡ್ತಾ ಇದೆ ಅನ್ನೋದು ಸ್ಪಷ್ಟವಾಗ್ತಿದೆ. ಇದನ್ನ ಮಾಡಿದ್ದು ಯಾರೋ ಹಿಂದೂ ಅಲ್ಲ, ಮುಸ್ಲಿಂ ವ್ಯಕ್ತಿಯೇ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.