ವಿಜಯಪುರ: ಹಿಜಾಬ್, ಶಿವಮೊಗ್ಗ ಹತ್ಯೆ ಮರೆಮಾಚಲು ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಚುನಾವಣೆಯ ಸಾಹಸವಾಗಿದೆ ಎಂದು ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದರು.
ಮೇಕೆದಾಟು ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಉದ್ಯೋಗ ಇಲ್ಲ. ಚುನಾವಣೆ ಸಲುವಾಗಿ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ಪವಿತ್ರತೆಯೇ ಎಂದರು. ಇದನ್ನೂ ಓದಿ: ಅಲಿಯಾಗೆ ನನ್ನ ಮೇಲೆ ಕೈ ಮಾಡಲು 20 ಟೇಕ್ ತೆಗೆದುಕೊಂಡಿದ್ರು: ‘ಗಂಗೂಬಾಯಿ’ನಲ್ಲಿ ಶಂತನು
ಈ ಹಿಂದೆ ಮೈತ್ರಿ ಸರ್ಕಾರದಲ್ಲಿ ಡಿಕೆಶಿ, ಎಂಬಿಪಿ ನೀರಾವರಿ ಸಚಿವರಿದ್ದರು. ಆವಾಗ ಯಾಕೆ ಮೇಕೆದಾಟು ಯೋಜನೆ ಜಾರಿಗೆ ಯಾಕೇ ಮಾಡಲಿಲ್ಲ ಎಂದು ಗುಡುಗಿದರು.