ವಿಜಯಪುರ: ಕೊರೊನಾ ಎಮರ್ಜೆನ್ಸಿ ಹಿನ್ನೆಲೆ ಜನರ ಸಂಕಷ್ಟಕ್ಕೆ ಸಹಯ ಮಾಡಲು ರಾಜ್ಯ ಸರ್ಕಾರದ ಮನವಿ ಮಾಡಿದೆ. ಪ್ರಕೃತಿ ವಿಕೋಪ ನಿಧಿಗೆ ಧನ ಸಹಾಯ ಮಾಡಲು ಸೂಚಿಸಿದೆ. ಇದಕ್ಕೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಂದಿಸಿದ್ದಾರೆ.
ಕೊರೊನಾ ಎಮರ್ಜೆನ್ಸಿಗೆ ತಮ್ಮ ತಿಂಗಳ ವೇತನವನ್ನ ಸರ್ಕಾರಕ್ಕೆ ನೀಡಲು ಯತ್ನಾಳ್ ನಿರ್ಧರಿಸಿದ್ದಾರೆ. ತಮ್ಮ ಮೂರು ತಿಂಗಳ ವೇತನವನ್ನ ಪ್ರಕೃತಿ ವಿಕೋಪ ನಿಧಿಗೆ ಪಡೆಯುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಯತ್ನಾಳ್ ಪತ್ರ ಬರೆದಿದ್ದಾರೆ.
ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ, ಅವರಿಗೆ ಸಹಾಯಕವಾಗಲಿ. ಕೊರೊನಾದಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಈ ಸಮಯದಲ್ಲಿ ನಾವು ಆರ್ಥಿಕವಾಗಿ ಸರ್ಕಾರದ ಬೆಂಬಲಕ್ಕೆ ನಿಲ್ಲಬೇಕಿದೆ. ಅದಕ್ಕೆ ನನ್ನ ಮೂರು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಪಡೆಯಬೇಕೆಂದು ಪತ್ರದಲ್ಲಿ ಯತ್ನಾಳ್ ಮನವಿ ಮಾಡಿಕೊಂಡಿದ್ದಾರೆ. ಸಿಎಂಗೆ ಬರೆದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಯತ್ನಾಳ್ ಹಂಚಿಕೊಂಡಿದ್ದಾರೆ.