Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ, ಆನಂದ್ ಸಿಂಗ್ ಭೇಟಿ ನನಗೂ ಕುತೂಹಲ ಮೂಡಿಸಿದೆ: ಯತ್ನಾಳ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಡಿಕೆಶಿ, ಆನಂದ್ ಸಿಂಗ್ ಭೇಟಿ ನನಗೂ ಕುತೂಹಲ ಮೂಡಿಸಿದೆ: ಯತ್ನಾಳ್

Districts

ಡಿಕೆಶಿ, ಆನಂದ್ ಸಿಂಗ್ ಭೇಟಿ ನನಗೂ ಕುತೂಹಲ ಮೂಡಿಸಿದೆ: ಯತ್ನಾಳ್

Public TV
Last updated: February 1, 2022 2:43 pm
Public TV
Share
2 Min Read
bgk yatnal 2
SHARE

ವಿಜಯಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಆನಂದ್ ಸಿಂಗ್ ಭೇಟಿ ನನಗೂ ಕುತೂಹಲ ಮೂಡಿಸಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

dks 2 3

ಸೋಮವಾರ ಡಿಕೆಶಿ ನಿವಾಸಕ್ಕೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಭೇಟಿ ನೀಡಿದ್ದರು. ಈ ಕುರಿತಂತೆ ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯತ್ನಾಳ್ ಅವರು, ಸಚಿವ ಆನಂದ್ ಸಿಂಗ್ ನೇರಾ, ನೇರ ವ್ಯಕ್ತಿತ್ವ ಉಳ್ಳವರು. ಅಭಿವೃದ್ದಿ ವಿಚಾರವಾಗಿ ಹೋಗಿದ್ದಾರೋ ಏನೋ ಎಂಬುದು ನನಗೆ ಗೊತ್ತಿಲ್ಲ. ಆನಂದ್ ಸಿಂಗ್ ಡಿಕೆಶಿ ಭೇಟಿ ಕುರಿತು ನನಗೆ ಏನೂ ತಿಳಿದಿಲ್ಲ. ವಿಜಯನಗರ ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ಆನಂದ್ ಸಿಂಗ್ ಬೇಸರಗೊಂಡಿದ್ದಾರೆ. ನೂತನ ಜಿಲ್ಲೆಯಲ್ಲಿ ಮೊದಲ ಬಾರಿಗೆ ಧ್ವಜಾರೋಹಣ ಮಾಡಬೇಕೆಂದು ಆಸೆ ಹೊಂದಿದ್ದರು. ಪಕ್ಷದ ಚೌಕಟ್ಟಿನಲ್ಲಿ ಆಯಾ ಜಿಲ್ಲೆಯ ಸಚಿವರು ಜಿಲ್ಲಾ ಉಸ್ತುವಾರಿ ಬೇಡವೆಂದು ಪಕ್ಷ ತೀರ್ಮಾನಿಸಿದೆ. ಆ ಕಾರಣದಿಂದ ವಿಜಯನಗರ ಉಸ್ತುವಾರಿ ಸ್ಥಾನ ಆನಂದ್ ಸಿಂಗ್ ಅವರಿಗೆ ತಪ್ಪಿದೆ ಎಂದು ತಿಳಿಸಿದ್ದಾರೆ.

DKSHI 3

ಅವರ ಬಗ್ಗೆ ಗೌರವಿದೆ, ಅವರೊಬ್ಬ ಒಳ್ಳೆಯ ಮನುಷ್ಯ. ಹಿಂದೆ ಮುಂದೆ ಮಾಡುವ ಮನುಷ್ಯರಲ್ಲ. ಡಿಕೆಶಿ ಹಾಗೂ ಆನಂದ್ ಸಿಂಗ್ ಭೇಟಿ ನನಗೂ ಕುತೂಹಲ ಮೂಡಿಸಿದೆ. ಆನಂದ್ ಸಿಂಗ್ ಬಿಜೆಪಿ ಬಿಟ್ಟು ಹೋಗಲ್ಲ ಎನಿಸುತ್ತಿದೆ. ಬಿಜೆಪಿ ಬಿಟ್ಟು ಹೋಗುವವರ ಲಿಸ್ಟ್ ನಲ್ಲಿ ಆನಂದ್ ಸಿಂಗ್ ಇಲ್ಲ. ಅವರ ಮನಸ್ಸಿಗೆ ಬೇಜಾರಾಗಿ ಡಿಕೆಶಿ ಭೇಟಿ ಮಾಡಿರಬಹುದು ಎಂದಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿ ಇಲ್ಲ: ಶಶಿ ತರೂರ್‌

ANAND SINGH

ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‍ನ ಭಸ್ಮಾಸುರ. ಅಹಿಂದ ನಾಯಕರನ್ನು ಸ್ವಜಾತಿಯ ನಾಯಕರನ್ನಾಗಿ ಸಿದ್ದರಾಮಯ್ಯ ಮಾಡಿದ್ದಾರೆ. ಸಿದ್ದರಾಮಯ್ಯರನ್ನು ಮುಗಿಸಲು ಕಾಂಗ್ರೆಸ್‍ನಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಡಿಕೆಶಿ ಮೊದಲ ಅಜೆಂಡಾ ಸಿದ್ದರಾಮಯ್ಯರನ್ನು ಮುಗಿಸೋದು. ಸಿದ್ದರಾಮಯ್ಯ ಬಲಿಷ್ಟವಾಗಿದ್ದರೆ ಡಿಕೆಶಿ ಸಿಎಂ ಆಗಲು ಸಾಧ್ಯವಿಲ್ಲ. ಮೇಕೆದಾಟು ಪಾದಯಾತ್ರೆಯ ವೇಳೆ ತಮ್ಮನ್ನು ತಾವು ಹೊಗಳಿ ಕೊಳ್ಳುವ ಕೆಲಸ ಡಿಕೆಶಿ ಮಾಡಿದ್ದಾರೆ. ಪಾದಯಾತ್ರೆ ಜನರಿಗಾಗಿ ಅಲ್ಲ ಎಂದು ಪುನರುಚ್ಛಾರ ಮಾಡಿದರು. ರಾಜ್ಯದ ನಾಯಕತ್ವವನ್ನು ಸಿದ್ದರಾಮಯ್ಯರಿಂದ ಕಸಿದುಕೊಂಡು, ಏಕೈಕ ನಾಯಕನೆಂದು ತೋರಿಸಲು ಪ್ರಯತ್ನಿಸಿದ್ದಾರೆ. ಅದರ ಬದಲಾಗಿ ಇಡೀ ರಾಜ್ಯದಲ್ಲಿ ಕೊರೊನಾ ಹರಡಲು ಕಾರಣವಾದರು ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Union Budget: ದುಡಿಯುವ ವರ್ಗದ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹುಸಿ ಮಾಡಿದೆ: ರಣದೀಪ್ ಸುರ್ಜೇವಾಲಾ ವ್ಯಂಗ್ಯ

siddaramaiah 6

ಡಿಕೆಶಿ ಬಹುಕೋಟಿ ರೂಪಾಯಿ ಹಗರಣ ವಿಚಾರ: ಯಾರೇ ಆರೋಪಿಗಳಾಗಿರಬಹುದು, ಅದರಲ್ಲಿಯೂ ಇಡಿಗೆ ಸಿಕ್ಕವರು ಅಷ್ಟು ಸುಲಭವಾಗಿ ಪಾರಾಗುವುದಿಲ್ಲ. ಇಡಿ ಒಳಗೆ ಸಿಕ್ಕವರು ಹೀಗಿಲ್ಲದಿದ್ದರೂ, ಇನ್ನು ಹತ್ತು ವರ್ಷಕ್ಕೆ ನಿಶ್ಚಿತವಾಗಿ ಕ್ರಮ ಆಗೇ ಆಗುತ್ತದೆ. ಮೊನ್ನೆ ಒಬ್ಬ ಬಿಟಿಎಸ್ ಬಸ್ ಕಂಡೆಕ್ಟರ್ ಸಿಕ್ಕಿದ್ದಾರೆ. ಅವರ ಮನೆಯಲ್ಲಿ ಸಾವಿರಾರು ಕೋಟಿ ಸಿಕ್ಕಿದೆ. ಅದು ಯಾರ ದುಡ್ಡು?, ಅದು ಬಹಿರಂಗ ಆಗಬೇಕು. ಒಬ್ಬ ಕಂಡಕ್ಟರ್ ಮನೆಯಲ್ಲಿ ಸಾವಿರಾರು ಕೋಟಿ ದಾಖಲೆ ಸಿಗುತ್ತವೆ ಎಂದರೆ ಇಂತಹವರೆಲ್ಲಾ ಕಳ್ಳರು ಒಳಗೆ ಹೋಗಬೇಕು. ರಾಜ್ಯದ ಜನರ ಬೊಕ್ಕಸ ಲೂಟಿ ಮಾಡಿ, ದೇಶ, ವಿದೇಶದಲ್ಲಿ ಆಸ್ತಿ ಮಾಡುವ ರಾಜಕಾರಣಿಗಳಿಗೆಲ್ಲ ಶಿಕ್ಷೆ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಅಲ್ಲದೇ ಪ್ರಧಾನಮಂತ್ರಿಗಳು ಅದನ್ನೇ ಹೇಳಿದ್ದಾರೆ. ನಾ ಖಾವುಂಗಾ, ನಾ ಖಿಲಾವುಂಗಾ ಎಂಬುವುದು ಮೋದಿ ಅವರ ಘೋಷವಾಕ್ಯವಾಗಿದೆ. ಅದರಂತೆ ಬಿಜೆಪಿ, ಕಾಂಗ್ರೆಸ್ ಅಥವಾ ಯಾವುದೇ ಪ್ರಕ್ಷದವರು ಇದ್ದರೂ ಒಳಗೆ ಹೋಗಬೇಕು ಎಂಬುದು ನನ್ನ ಸ್ಪಷ್ಟವಾದ ವೈಯಕ್ತಿಕ ನಿಲುವು ಎಂದರು.

TAGGED:Anand SinghBasangouda Patil YatnalDK Shivakumarvijayapuraಆನಂದ್ ಸಿಂಗ್ಡಿ.ಕೆ.ಶಿವಕುಮಾರ್ಬಸನಗೌಡಾ ಪಾಟೀಲ ಯತ್ನಾಳ್ವಿಜಯಪುರ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Bengaluru Central Jail
Bengaluru City

ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಗುಪ್ತಾಂಗದಲ್ಲಿ ಬಚ್ಚಿಟ್ಟು ತಂದಿದ್ದ ಮಹಿಳೆ ಅರೆಸ್ಟ್‌

Public TV
By Public TV
5 minutes ago
Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
51 minutes ago
US Strikes
Latest

900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Public TV
By Public TV
1 hour ago
Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
2 hours ago
Hasi Karaga 2
Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
By Public TV
2 hours ago
Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?