– ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ. ಹಿಂದೂಗಳ ಹತ್ಯೆ ಹತ್ಯೆ ನಡೆಯುತ್ತಿದ್ದು, ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದ್ದಾರೆ.
ವಿಧಾನಸಭೆಯಲ್ಲಿ (Vidhanasabha Session) ಮಾತನಾಡಿದ ಅವರು, ಈ ಸರ್ಕಾರ ಬಂದ್ಮೇಲೆ ಹಿಂದೂಗಳ ಕೊಲೆ ನಡೆಯುತ್ತಿದೆ. ಟೀ.ನರಸೀಪುರದಲ್ಲಿ ಹನುಮಜಯಂತಿ ವಿಚಾರದಲ್ಲಿ ಯುವ ಬ್ರಿಗೇಡ್ (Yuvara Brigade) ಯುವಕನ ಕೊಲೆ ಆಗಿದೆ. ಈ ಸರ್ಕಾರ ಬಂದ್ಮೇಲೆ ಪಾಕಿಸ್ತಾನ ಬಾವುಟ (Pakistan Flag) ಹಾರಾಡ್ತಿದೆ ಎಂದಾಗ ಕಾಂಗ್ರೆಸ್ ಶಾಸಕರು (Congress MLA) ಆಕ್ರೋಶ ಹೊರಹಾಕಿದ್ದಾರೆ., ಇದೇನಿದು..!? ಏನೇನೋ ಹೇಳ್ತಾರೆ. ಜೈನಮುನಿಗಳ ಬಗ್ಗೆ ಚರ್ಚೆ ಬಗ್ಗೆ ಮಾತಾಡಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.
- Advertisement 2
- Advertisement 3
ಜೈನ ಮುನಿಗಳು (Jain Monk) ಎಲ್ಲವನ್ನೂ ತ್ಯಾಗ ಮಾಡ್ತಾರೆ ಇಂತಹವರ ಹತ್ಯೆಯಿಂದ ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕ ರಾಜ್ಯಕ್ಕೆ ಮುನಿಗಳ ಹತ್ಯೆ ಕಳಂಕವಾಗಿದೆ. ಈ ಹತ್ಯೆ ಹಿಂದೆ ಹಲವು ಅನುಮಾನಗಳಿದ್ದಾವೆ. ಬೆಂಗಳೂರಿನಿಂದ ಪೊಲೀಸರ ಮೇಲೆ ಏನ್ ಒತ್ತಡ ಬಂದಿದೇಯೋ..!?. ಪೊಲೀಸರ ಮೇಲೆ ಒತ್ತಡ ಬರುತ್ತೆ. ಬೆಳಗ್ಗೆ ಚೆನ್ನಾಗಿ ಇರುತ್ತಾರೆ, ರಾತ್ರಿ ಒಳಗಾಗಿ ಪೊಲೀಸರು ಬದಲಾಗ್ತಾರೆ ಎಂದರು. ಇದನ್ನೂ ಓದಿ: ಬೆಳಗಾವಿ ಜೈನಮುನಿ ಕೊಲೆ ಪ್ರಕರಣ- ಸಿಬಿಐ ತನಿಖೆಗೆ ಒಪ್ಪದ ಸರ್ಕಾರ
- Advertisement 4
ಹಸನ್ ಎಂಬ ಹೆಸರನ್ನ ಏಕೆ ಬಹಿರಂಗಪಡಿಸಿಲ್ಲ ಎಂದು ಪ್ರಶ್ನಿಸಿದ ಶಾಸಕರು, ರಾಜ್ಯದ ಪೊಲೀಸರ ಮೇಲೆ ಭರವಸೆ ಇಲ್ಲ. ಸಿಬಿಐ ತನಿಖೆಗೆ (CBI Investigation) ಈ ಕೇಸ್ ಕೊಡಬೇಕು. ಒಂದು ಕೋಮಿನ ತೃಪ್ತಿಪಡಿಸುವ ಕೆಲಸ ಆಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಒಂದು ಸಂತಾಪವನ್ನ ಕೂಡ ಹೇಳಲಿಲ್ಲ. ಬೇರೆ ಯಾರಾದರೂ ಸತ್ತಿದ್ರೆ ಸಂತಾಪ ಸೂಚಿಸುತ್ತಿದ್ದರು ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.
Web Stories