Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಸೇವಕ, ಜನಸ್ಪಂದನದಿಂದ ಜನಸ್ನೇಹಿ ಆಡಳಿತ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನಸೇವಕ, ಜನಸ್ಪಂದನದಿಂದ ಜನಸ್ನೇಹಿ ಆಡಳಿತ: ಬೊಮ್ಮಾಯಿ

Bengaluru City

ಜನಸೇವಕ, ಜನಸ್ಪಂದನದಿಂದ ಜನಸ್ನೇಹಿ ಆಡಳಿತ: ಬೊಮ್ಮಾಯಿ

Public TV
Last updated: November 1, 2021 4:29 pm
Public TV
Share
3 Min Read
BASAVARJ BOMMAI
SHARE

-ಕರ್ನಾಟಕದ ಆಡಳಿತದಲ್ಲಿ ಬದಲಾವಣೆಯ ಪರ್ವ ಪ್ರಾರಂಭ

ಬೆಂಗಳೂರು: ಜನಸೇವಕ ಹಾಗೂ ಜನಸ್ಪಂದನ ಕಾರ್ಯಕ್ರಮಗಳಿಂದ ಜನಸ್ನೇಹಿ ಆಡಳಿತ ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟಿದ್ದಾರೆ.

BASAVARJ BOMMAI 1

ಇಂದು ಜನಸೇವಕ- ಮನೆಬಾಗಿಲಿಗೆ ಸರ್ಕಾರದ ಸೇವೆಗಳು, ಜನಸ್ಪಂದನ – ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ, 1902 ಸಹಾಯವಾಣಿ, ಮೊಬೈಲ್ ಆ್ಯಪ್ ಹಾಗೂ ವೆಬ್ ಪೋರ್ಟಲ್‍ಗಳು ಹಾಗೂ ಸಾರಿಗೆ ಇಲಾಖೆಯ 30 ಸಂಪರ್ಕರಹಿತ ಆನ್‍ಲೈನ್ ಸೇವೆಗಳನ್ನು ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ: ಪುನೀತ್ ರಾಜ್‍ಕುಮಾರರಂತೆ ನೇತ್ರ ದಾನ ಮಾಡಲು ನೇಣಿಗೆ ಶರಣಾದ ಅಭಿಮಾನಿ!

BASAVRAJ BOMMAI

ಈ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಆಡಳಿತದಲ್ಲಿ ಬದಲಾವಣೆಯ ಪರ್ವ ಪ್ರಾರಂಭವಾದ ದಿನ. ನಮ್ಮ ಕರ್ತವ್ಯ, ಜವಾಬ್ದಾರಿ, ಉತ್ತರದಾಯಿತ್ವ ಎನ್ನುವ ಬಗ್ಗೆ ಆಳುವವರು ಹಾಗೂ ಆಡಳಿತ ನಡೆಸುವವರಲ್ಲಿ ಸ್ಪಷ್ಟತೆ ಇದ್ದಾಗ ಮಾತ್ರ ಜನಹಿತ, ಜನಸ್ನೇಹಿ ಆಡಳಿತ ಸಾಧ್ಯವಾಗುತ್ತದೆ. ಅಧಿಕಾರಿಶಾಹಿ, ವಿಳಂಬಧೋರಣೆಯ ಮುಖಾಂತರ ತಳಹಂತದಲ್ಲಿ ನಾಗರಿಕರ ಸೇವೆ ಮರೀಚಿಕೆಯಾಗುವುದನ್ನು ತಪ್ಪಿಸಲು ಹಾಗೂ ಸರ್ಕಾರದ ಸೇವೆಯನ್ನು ಸರಳವಾಗಿ ತಲುಪಿಸಲು ಸರ್ಕಾರ ಜನರ ಬಾಗಿಲಿಗೆ ಆಡಳಿತವನ್ನು ಒಯ್ಯುವ ಕೆಲಸ ಮಾಡುತ್ತಿದೆ ಎಂದರು. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

ಜನರ ಸುತ್ತಲೂ ಆಡಳಿತ ಮತ್ತು ಅಭಿವೃದ್ಧಿ:
ಜನಸೇವಕ ಕಾರ್ಯಕ್ರಮದ ಮೂಲಕ ಜನ ಹೆಚ್ಚಾಗಿ ಬಳಸುವ ಸರ್ಕಾರದ ಸೇವೆಗಳನ್ನು ಸಕಾಲದಡಿ ಜಾರಿಗೊಳಿಸಲಾಗಿದೆ. ಜನರ ಸುತ್ತಲೂ ಆಡಳಿತ, ಅಭಿವೃದ್ಧಿ ಆಗಬೇಕು. ಇದು ಸರ್ಕಾರದ ಧ್ಯೇಯ. ಆಡಳಿತದಲ್ಲಿ ಸುಧಾರಣೆ, ಜನಪರ, ಬಡವರಪರ ನಮ್ಮ ಆಡಳಿತ ಇರಲಿದೆ. ಆಡಳಿತ ಸುಧಾರಣೆ ಸಮಿತಿಯ ಶಿಫಾರಸ್ಸಿನ ಅನ್ವಯ ಉತ್ತಮ ಆಡಳಿತಕ್ಕಾಗಿ ಹಲವಾರು ಸೇವೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಈ ಸೇವೆಗಳಿಂದ ಜನರ ಸಮಯ ಉಳಿಯುತ್ತದೆ. ಭ್ರಷ್ಟಾಚಾರ ನಿಲ್ಲುತ್ತದೆ. ನಾಗರಿಕರು ತಮ್ಮ ಸಮಯವನ್ನು ಕ್ರಿಯಾತ್ಮಕವಾಗಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ರಾಜ್ಯದ ಜನ ಶ್ರೀಮಂತರಾದರೆ, ಅವರ ಜೀವನ ಮಟ್ಟ, ಆದಾಯ ಸುಧಾರಣೆ, ಆರೋಗ್ಯ ಮಟ್ಟ ಉತ್ತಮ ಶಿಕ್ಷಣ, ಉದ್ಯೋಗ ಸೃಷ್ಟಿ ಎಲ್ಲವೂ ಸುಧಾರಿಸುತ್ತದೆ. ಆಧಿಕಾರ, ಆಡಳಿತ ಎಂದರೆ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಎಂದು ನುಡಿದರು.

ಜನರ ಬಳಿಗೆ ಸರ್ಕಾರವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸಾರ್ವಜನಿಕರ ಕುಂದು-ಕೊರತೆಗಳ ನಿವಾರಣೆಗಾಗಿ, ಕರ್ನಾಟಕ ಸರ್ಕಾರದ ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ #ಜನಸ್ಪಂದನಾ 1902 ಸಹಾಯವಾಣಿಯನ್ನು ಮುಖ್ಯಮಂತ್ರಿ @BSBommai ರವರು ಇಂದು ಲೋಕಾರ್ಪಣೆ ಮಾಡಿ, ಜನರು ಈ ಸೇವೆಯನ್ನು ಬಳಸಿಕೊಳ್ಳಲು ಕರೆ ನೀಡಿದ್ದಾರೆ. #Janaspandana pic.twitter.com/Kg4wHg9jyG

— CM of Karnataka (@CMofKarnataka) November 1, 2021

ರಾಜ್ಯದ ಜನರ ತಲಾವಾರು ಆದಾಯ ಹೆಚ್ಚಾಗಬೇಕು:
ಇಂದು ರಾಜ್ಯ ತಲಾವಾರು ಆದಾಯದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಕೇವಲ 35% ಜನ ಮಾತ್ರ ರಾಜ್ಯದ ಆದಾಯಕ್ಕೆ ಕೊಡುಗೆ ನೀಡುತ್ತಿದ್ದಾರೆ. ರಾಜ್ಯದ ಜನರ ತಲಾವಾರು ಆದಾಯ ಹೆಚ್ಚಾದರೆ ರಾಜ್ಯದ ಆದಾಯವೂ ಹೆಚ್ಚಾಗುತ್ತದೆ. ಈ ಚಿಂತನೆ ನಮ್ಮ ಸರ್ಕಾರದ್ದು. ಸರ್ಕಾರದಲ್ಲಿ ಜನರ ಪಾಲ್ಗೊಳ್ಳುವಿಕೆ ಇರಬೇಕು. ಫಲಾನುಭವಿಗಳಾಗಿ ತಮ್ಮ ಕಾರ್ಯದಕ್ಷತೆದಿಂದ ಆದಾಯ ಹೆಚ್ಚಿಸಿಕೊಂಡು ಅವರು ಪಾಲುದಾರರಾಗಬೇಕು. ಆಗ ಮಾತ್ರ ಸಮುದಾಯ, ಸಮಾಜ, ಸರ್ಕಾರ, ರಾಜ್ಯ ಅಭಿವೃದ್ಧಿ ಆಗುತ್ತದೆ. ಹೆಚ್ಚು ಜನಸಂಖ್ಯೆ ಇರುವ ಬೆಂಗಳೂರು ನಗರದಲ್ಲಿ ಈ ಸೇವೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು. ಈ ಕಾರ್ಯಕ್ರಮ ಇಡೀ ವ್ಯವಸ್ಥೆಯ ಬದಲಾವಣೆಗೆ ಭದ್ರ ಬುನಾದಿಯಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಕೊವ್ಯಾಕ್ಸಿನ್ ಲಸಿಕೆ ಪಡೆದವರು ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಬಹುದು

ಸಾರಿಗೆ ಇಲಾಖೆಯ 30 ಸಂಪರ್ಕ ರಹಿತ ಆನ್‍ಲೈನ್ ಸೇವೆ:
60 ಲಕ್ಷ ಜನರು ಸಾರಿಗೆ ಕಚೇರಿಗೆ ಬರುವುದು ತಪ್ಪಿಸಲು ಸಾರಿಗೆ ಇಲಾಖೆಯ 30 ಸಂಪರ್ಕ ರಹಿತ ಆನ್‍ಲೈನ್ ಸೇವೆಗಳಿಗೆ ಚಾಲನೆ ನೀಡಲಾಗಿದೆ. ರಾಜ್ಯದ ಪ್ರಮುಖ 10 ಕಾರು, ಸ್ಕೂಟರ್ ಮಾರುವ ಸಂಸ್ಥೆಗಳಿಗೆ ವಾಹನ ನೋಂದಣಿ ಮಾಡಿಕೊಡುವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದೆ. ಆಹಾರವಿತರಣೆ, ಬಿಬಿಎಂಪಿ ಯಾವುದೇ ಪ್ರಮಾಣಪತ್ರ. ಮಾಸಾಶನ, ಆಧಾರ ಕಾರ್ಡ್ 56 ಸೇವೆ, ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ತೆ, 1902 ಸಹಾಯವಾಣಿ , ಮೊಬೈಲ್ ಆ್ಯಪ್ ಪ್ರಾರಂಭಿಸಲಾಗಿದೆ. ಸುಮಾರು 4,11,000 ಹೊಸ ಪಡಿತರ ಕಾರ್ಡಿಗೆ ಅನುಮೋದನೆ ನೀಡಿರುವುದಾಗಿ ತಿಳಿಸಿದರು.

ನಿಗದಿತ ಗುರಿ, ಸ್ಪಷ್ಟ ದಿಕ್ಸೂಚಿ, ಸಂಕಲ್ಪ, ಬದ್ಧತೆಯಿಂದ ಆಡಳಿತ ಸುಧಾರಣೆ ಆಗಲಿದೆ. ಜನಸೇವಕರು ಜನರ ಮನೆ ಬಾಗಿಲಿಗೆ ಬಂದಾಗ ನಾಗರಿಕರು ಸೌಜನ್ಯದಿಂದ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು.

TAGGED:Basavaraj BommaicmgovernmentonlinepeoplePublic TVಆಡಳಿತಆನ್‍ಲೈನ್ಜನಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಮುಖ್ಯಮಂತ್ರಿಸರ್ಕಾರ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Ramanagara Wild Elephant
Districts

ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
9 minutes ago
Mandya SP
Districts

ಫ್ಲೆಕ್ಸ್‌ ವಿಚಾರದಲ್ಲಿ ಕೊನೆಗೂ ಎಚ್ಚೆತ್ತ ಮಂಡ್ಯ ಎಸ್ಪಿ

Public TV
By Public TV
11 minutes ago
pm modi 2
Latest

8,931 ದಿನಗಳ ಆಡಳಿತ; ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

Public TV
By Public TV
11 minutes ago
Lashkar Terrorist Bilal Arif Sarafi
Latest

ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Public TV
By Public TV
51 minutes ago
Mojtaba Khamenei
Latest

ನಿಮ್ಮ ಸುಪ್ರೀಂ ಲೀಡರ್ ಬದುಕಿದ್ದಾರಾ? – ಇರಾನ್‌ಗೆ ಅಮೆರಿಕ ಪ್ರಶ್ನೆ

Public TV
By Public TV
2 hours ago
Samartha Shamanur
Belgaum

ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?