Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಳುವುದು ಬೇರೆ, ಆಡಳಿತ ಬೇರೆ ಈ ವ್ಯತ್ಯಾಸ ಇದೀಗ ಕರ್ನಾಟಕದಲ್ಲಿ ಕಾಣಬಹುದಾಗಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಳುವುದು ಬೇರೆ, ಆಡಳಿತ ಬೇರೆ ಈ ವ್ಯತ್ಯಾಸ ಇದೀಗ ಕರ್ನಾಟಕದಲ್ಲಿ ಕಾಣಬಹುದಾಗಿದೆ: ಬೊಮ್ಮಾಯಿ

Bengaluru City

ಆಳುವುದು ಬೇರೆ, ಆಡಳಿತ ಬೇರೆ ಈ ವ್ಯತ್ಯಾಸ ಇದೀಗ ಕರ್ನಾಟಕದಲ್ಲಿ ಕಾಣಬಹುದಾಗಿದೆ: ಬೊಮ್ಮಾಯಿ

Public TV
Last updated: January 28, 2022 12:54 pm
Public TV
Share
4 Min Read
BASAVARJ BOMMAI 2 1
SHARE

– ದುಡಿಮೆಯೇ ದೊಡ್ಡಪ್ಪ ಅನ್ನೋದು ನಮ್ಮ ಸರ್ಕಾರ ತಿಳಿದಿದೆ

ಬೆಂಗಳೂರು: ರಾಜ್ಯ ಆಳುವುದು ಬೇರೆ, ಆಡಳಿತ ಬೇರೆ ಅಂತ 11 ನೇ ಶತಮಾನದಲ್ಲಿ ಹೇಳಿದ್ರು. ಇದೀಗ ಕರ್ನಾಟಕದಲ್ಲಿ ಈ ವ್ಯತ್ಯಾಸವನ್ನು ಕಾಣಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

BASAVARAJ BOMMAI PROGRAM

ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು ಪೂರೈಸಿದ ಹಿನ್ನೆಲೆ ಬ್ಯಾಕ್ವೆಂಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೇದಿಕೆ ಮೇಲೆ ಇರುವ ಸಚಿವರನ್ನು ಟೀಂ ಕರ್ನಾಟಕ ಎಂದು ಕರೆದ ಬೊಮ್ಮಾಯಿ, ಈ ಟೀಂನ ಸದಸ್ಯ ನಾನು. ಸಶಕ್ತ ಕರ್ನಾಟಕ ನಿರ್ಮಾಣಕ್ಕೆ ಈ ಟೀಂ ಕೆಲಸ ಮಾಡುತ್ತಿದೆ. ಕರ್ನಾಟಕ ದೇವರ ಆಶೀರ್ವಾದ ಇರೋ ನಾಡು. ನೈಸರ್ಗಿಕವಾಗಿ ಶ್ರೀಮಂತವಾಗಿರೋ ನಾಡು ಕರ್ನಾಟಕ. ಕರ್ನಾಟಕದಲ್ಲಿ ಹುಟ್ಟುವ ನದಿಗಳು ಪೂರ್ವ ದಿಂದ ಪಶ್ಚಿಮಕ್ಕೆ ಹರಿಯುತ್ತವೆ. ಗಂಗಾ ಮಾತೆ ನಮ್ಮನ್ನು ಹರಸಿದ್ದಾಳೆ. 365 ದಿನವೂ ತೋಟಗಾರಿಕೆ ಉತ್ಪನ್ನ ಬೆಳೆಯುವ ನಾಡು ನಮ್ಮದು. ಬೇರೆ ಯಾವ ರಾಜ್ಯಕ್ಕೂ ಈ ಹೆಮ್ಮೆ ಇಲ್ಲ. ಖನಿಜ ಸಂಪತ್ತು, ಅರಣ್ಯ ಸಂಪತ್ತು ಅಪಾರವಾಗಿ ನಮ್ಮಲ್ಲಿ ಇದೆ. ಗಂಗರು, ಚೋಳರು, ಮೈಸೂರು ಅರಸರು ವಿಜಯನ ನಗರ ಅರಸರು ದೊಡ್ಡ ಸಂಸ್ಕೃತಿ ನಮಗೆ ಬಿಟ್ಟು ಹೋಗಿದ್ದಾರೆ ಎಂದು ರಾಜ್ಯದ ಕುರಿತು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿದ್ದೇನೆ: ಬೊಮ್ಮಾಯಿ

BASAVARJ BOMMAI PROGRAM 2

ನಮ್ಮ ರಾಜ್ಯದ ಮಹನೀಯರಾದ ರಾಯಣ್ಣ, ಚೆನ್ನಮ್ಮ, ಅಬ್ಬಕ್ಕ ಸೇರಿ ಅನೇಕ ಸ್ವಾತಂತ್ರ್ಯ ಹೋರಾಟಗಾರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯದ ನಂತರ ಶ್ರೇಷ್ಠ ಆಡಳಿತ ಕೊಟ್ಟ ಪರಂಪರೆ ನಮ್ಮ ಕರ್ನಾಟಕದಲ್ಲಿ ಇದೆ. ಕರ್ನಾಟಕಕ್ಕೆ ಎಲ್ಲರೂ ಕೊಟ್ಟ ಪರಂಪರೆ ನೆನಪು ಮಾಡಿಕೊಳ್ಳುತ್ತೇನೆ. ರಾಜ್ಯದ ಹಿತ ಕಾಪಾಡಲು ನಾವು ಯಾವತ್ತು ಕೆಲಸ ಮಾಡುತ್ತೇವೆ. ಕೃಷಿಯಲ್ಲಿ ನಾವು ಮುಂದೆ ಇದ್ದೇವೆ. ನಮ್ಮ ಕರ್ನಾಟಕ ಕೃಷಿಯಲ್ಲಿ ಮುಂದೆ ಇದೆ. ರಾಜ್ಯದಲ್ಲಿ ಕೈಗಾರಿಕೆ ವಲಯವೂ ಮುಂದಿದೆ. ಸಂಶೋಧನಾ ವಲಯದಲ್ಲಿ ನಾವು ಮುಂದೆ ಇದ್ದೇವೆ ಎಂದು ರಾಜ್ಯದ ಹಿರಿಮೆ ಬಗ್ಗೆ ತಮ್ಮ ಭಾಷಣದಲ್ಲಿ ಸಿಎಂ ಪ್ರಸ್ತಾಪ ಮಾಡಿದರು. ಇದನ್ನೂ ಓದಿ: ಅಮಾನತು ಆದೇಶ ರದ್ದು – ಮಹಾರಾಷ್ಟ್ರದ 12 ಬಿಜೆಪಿ ಶಾಸಕರಿಗೆ ಗೆಲುವು

CORONA 15

ಸರ್ಕಾರದ ಯಶಸ್ಸು ಆಗೋದು ತನಗಿರುವ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ರಾಜ್ಯ ಕಟ್ಟುವುದರಿಂದ. ಐದು ಜನ ಸಿಎಂಗಳ ಜೊತೆ ನಾನು ಹತ್ತಿರದಿಂದ ಆಡಳಿತ ನೋಡಿದ್ದೇನೆ. ಆದ್ರೆ ಆರೋಗ್ಯ ಸಮಸ್ಯೆ ಮತ್ತು ಪ್ರವಾಹದ ಸ್ಥಿತಿ ಒಟ್ಟಿಗೆ ಬಂದಿರಲಿಲ್ಲ. ಜನರ ಜೀವ ಉಳಿಸೋದು, ಜನರ ಜೀವನ ಕಟ್ಟಿಕೊಡೋದು ನಮ್ಮ ಮುಂದೆ ಇತ್ತು. ಕೊರೊನಾದಿಂದ ಅರ್ಥಿಕ ಸವಾಲು ಕಂಡಿದ್ದೇವೆ. ರೈತರು, ಯುವಕರು, ಎಲ್ಲಾ ವರ್ಗಕ್ಕೆ ಹೊಸ ಹೊಸ ಕಾರ್ಯಕ್ರಮ ಮಾಡೋ ಆಸೆ ತುಡಿಯುತ್ತೆ. ಆದ್ರೆ ಆರ್ಥಿಕ ಪರಿಸ್ಥಿತಿ ನಮಗೆ ಸಮಸ್ಯೆ ಆಗಿದೆ. ನಮ್ಮದು ಅರಿವು ಇರುವ ಸರ್ಕಾರ. ಏನೇ ಕಷ್ಟ ಬಂದರು ಜನರ ಪರ ಇರುತ್ತೇವೆ. ವಯಕ್ತಿಕ ಹಿತಾಸಕ್ತಿಗೆ ನಾವು ಅವಕಾಶ ಕೊಟ್ಟಿಲ್ಲ. ಜನರ ಪರ ಕೆಲಸ ಮಾಡಿದ್ದೇವೆ. ಎಂತಹ ಕಷ್ಟ ಬಂದರು ನಮ್ಮ ಸರ್ಕಾರ ಮಾನವೀಯತೆ ಬಿಟ್ಟುಕೊಟ್ಟಿಲ್ಲ. ಪ್ರವಾಹ ಸಮಯದಲ್ಲಿ ಕೇಂದ್ರ ಸರ್ಕಾರದ ನಿಯಮ ಮೀರಿ ದುಪ್ಪಟ್ಟು ಹಣ ಬಿಡುಗಡೆ ಮಾಡಿದ್ದೇವೆ. ಸರ್ಕಾರಕ್ಕೆ ಎಷ್ಟೇ ಕಷ್ಟ ಇದ್ದರು ರೈತರಿಗೆ ಕಷ್ಟ ಆಗಲು ಬಿಡಲಿಲ್ಲ. 14 ಲಕ್ಷಕ್ಕೂ ಹೆಚ್ಚು ರೈತರಿಗೆ ಇದರಿಂದ ಲಾಭ ಸಿಕ್ಕಿದೆ ಎಂದರು. ಇದನ್ನೂ ಓದಿ: ಸಮಾಜವಾದಿ ಪಕ್ಷದವರು ಜಿನ್ನಾನ ಆರಾಧಕರು: ಯೋಗಿ ಆದಿತ್ಯನಾಥ್‌ ಟೀಕೆ

INDUSTRIES

ಅಂಗವೈಕಲ್ಯರು, ವಿಧವೆಯರ ಮಾಶಾಸನ, ಸಂಧ್ಯಾ ಸುರಕ್ಷಾ ಮಾಶಾಸನದ ಹಣ ಹೆಚ್ಚಳ ಮಾಡಿದ್ದೇವೆ. 58 ಲಕ್ಷ ಜನರಿಗೆ ಇದರಿಂದ ಲಾಭವಾಗಿದೆ. ಸೂಕ್ಷ್ಮತೆಯಿಂದ ಸರ್ಕಾರ ನಡೆಸಬೇಕು. ರೈತನ ಕೃಷಿ ಬೆಳೆಗೆ ಸುರಕ್ಷತೆ ನೀಡುವ ಕೆಲಸ ಮಾಡಿದ್ದೇವೆ. ರೈತ ಮಕ್ಕಳಿಗೆ ರೈತ ವಿದ್ಯಾನಿಧಿ ಜಾರಿ ಮಾಡಿದ್ದೇವೆ. ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಸ್ಥಾಪನೆ ಮಾಡಿದ್ದೇವೆ. ಎಲ್ಲಾ ಯೋಜನೆ ಹಣ ಆನ್‍ಲೈನ್ ಮೂಲಕ ಹಣ ತಲುಪಿದೆ. ಕೋವಿಡ್ ನಿಂದ ಮೃತರಾದವರಿಗೆ ರಾಜ್ಯ 1 ಲಕ್ಷ ಕೇಂದ್ರ 50 ಸಾವಿರ ಪರಿಹಾರ ಕೊಟ್ಟಿದ್ದೇವೆ. ಸಮಗ್ರ ಅಭಿವೃದ್ಧಿ ನಮ್ಮ ಸರ್ಕಾರದ ಆಶಯ. ಜನರನ್ನ ಪಾಲುದಾರರನ್ನಾಗಿ ಮಾಡೋದು ಇದರ ಉದ್ದೇಶ. ರಾಜ್ಯ ಕಟ್ಟಲು ಅವ್ರನ್ನು ಸಶಕ್ತರಾಗಿ ಮಾಡೋದು ನಮ್ಮ ಗುರಿ. 7,500 ಸ್ತ್ರೀ ಶಕ್ತಿ ಸಂಘಕ್ಕೆ ಹಣ ಸಹಾಯ ಮಾಡಲಾಗಿದೆ. ಹೊಸ ಉದ್ಯೊಗ ನೀತಿ ಜಾರಿ ಮಾಡಿದ್ದೇವೆ. ಸಮಗ್ರ ಕೃಷಿಗೆ ಸೆಕೆಂಡರಿ ಡೈರೆಕ್ಟರಿರೇಟ್ ಸ್ಥಾಪನೆ ಮಾಡಿದ್ದೇವೆ. ಹೈನುಗಾರಿಕೆ, ತೋಟಗಾರಿಕೆ ಸೇರಿದಂತೆ ಅನೇಕ ವರ್ಗಕ್ಕೆ ಅನುಕೂಲ ಮಾಡಿದ್ದೇವೆ. ದುಡಿಯೋ ವರ್ಗದಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ. ಕೆಲವರು ದುಡ್ಡೇ ದೊಡ್ಡಪ್ಪ ಅಂದು ಕೊಂಡಿದ್ದಾರೆ. ಆದ್ರೆ ದುಡಿಮೆಯೇ ದೊಡ್ಡಪ್ಪ ಅನ್ನೋದು ನಮ್ಮ ಸರ್ಕಾರ ತಿಳಿದಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೆಂಗಳೂರಲ್ಲಿ ನಕಲಿ ನಂದಿನಿ ತುಪ್ಪದ ಜಾಲ ಪತ್ತೆ

ಕಾರ್ಯಕ್ರಮದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ 6 ತಿಂಗಳ ಪೂರೈಕೆ ಸಾಧನೆ ಕುರಿತ ಕಿರುಹೊತ್ತಿಗೆ ಪೊಲೀಸ್ ಆಂಡ್ ಪ್ರೊಗ್ರಾಮ್ಸ್ ಆಫ್ ಕರ್ನಾಟಕ ಗರ್ವನ್ಮೆಂಟ್ ಇನ್ ದಿ ಲಾಸ್ಟ್ ಸಿಕ್ಸ್ ಮಂಥ್ಸ್ ಫ್ಯೂಚರ್ ಇಂಪ್ಯಾಕ್ಟ್ (Policies and programmes of Karnataka government in the last six months. Future impact) ಬಿಡುಗಡೆ ಮಾಡಲಾಯಿತು. ಸಚಿವರುಗಳು, ಶಾಸಕರು, ಕೆಲ ಹಿರಿಯ ಅಧಿಕಾರಿಗಳು ಹಾಗೂ ಮಾಧ್ಯಮಗಳಿಗೆ ಅಷ್ಟೇ ಅವಕಾಶವಿತ್ತು. ಕೋವಿಡ್ ಇರುವ ಕಾರಣ ಸಾಮಾಜಿಕ ಅಂತರದೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ರಾಜ್ಯ ಸರ್ಕಾರ ಆರು ತಿಂಗಳು ಪೂರೈಸಲಿರುವ ಹಿನ್ನಲೆಯಲ್ಲಿ "6 ತಿಂಗಳ ಜನಕಲ್ಯಾಣ ಸಮಾರಂಭ – ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು" ಕಾರ್ಯಕ್ರಮ.#NewKarnataka4NewIndia https://t.co/RpzXp1W4Kh

— CM of Karnataka (@CMofKarnataka) January 28, 2022

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್, ಆರಗ ಜ್ಞಾನೇಂದ್ರ, ವಿ. ಸೋಮಣ್ಣ, ಉಮೇಶ್ ಕತ್ತಿ, ಬಿ.ಸಿ ನಾಗೇಶ್,  ಬಿಸಿ ಪಾಟೀಲ್, ಎಸ್. ಅಂಗಾರ, ಎಸ್.ಟಿ ಸೋಮಶೇಖರ್, ಎಂಟಿಬಿ ನಾಗಾರಾಜ್, ಗೋವಿಂದ ಕಾರಜೋಳ, ಡಾ.ಕೆ ಸುಧಾಕರ್, ಗೋಪಾಲಯ್ಯ, ಈಶ್ವರಪ್ಪ, ನಾರಾಯಣಗೌಡ, ಶಂಕರ್ ಪಾಟೀಲ್ ಮನೇನಕೊಪ್ಪ, ಮುನಿರತ್ನ, ಮರುಗೇಶ್ ನಿರಾಣಿ , ಆನಂದ್ ಸಿಂಗ್, ಪ್ರಭು ಚೌಹಾಣ್ ಸೇರಿ ಇತರ ಸಚಿವರು ಉಪಸ್ಥಿತರಿದ್ದರು.

TAGGED:Basavaraj Bommaibengalurukarnatakaಕರ್ನಾಟಕಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
4 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
5 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
5 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
5 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
5 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?