Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ. ಘೋಷಿಸಿದ ಬಸವರಾಜ ಬೊಮ್ಮಾಯಿ

Public TV
Last updated: April 2, 2022 2:55 pm
Public TV
Share
3 Min Read
BASAVARAJ BOMMAI
SHARE

ಬೆಂಗಳೂರು: ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಘೋಷಿಸಿದರು.

ಇಂದು ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಗತಿಪರ ಸಮಾಜ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಪೊಲೀಸರ ನಿಷ್ಠೆ, ದಕ್ಷತೆಯಿಂದ ಸಾಧ್ಯವಿದೆ. ಅಪರಾಧ, ಅಪರಾಧಿಗಳೊಂದಿಗೆ ರಾಜಿಯಿಲ್ಲದೆ ಕೆಲಸ ಮಾಡಿದರೆ ಅಪರಾಧ ತನ್ನಿಂದ ತಾನೇ ಕಡಿಮೆಯಾಗುತ್ತದೆ. ರಾಜ್ಯ ಸರ್ಕಾರಕ್ಕೆ ನಿಮ್ಮ ಸೇವೆಗಳ ಬಗ್ಗೆ ಹೆಮ್ಮೆ ಇದೆ. ರಾಷ್ಟ್ರದಲ್ಲಿ ಕರ್ನಾಟಕ ಪೊಲೀಸ್ ನಂಬರ್‌ 1 ಸ್ಥಾನಕ್ಕೆ ಏರಲಿ ಎಂದರು.

police web

ಅಂತ:ಕರಣ, ಮಾನವೀಯತೆ ಬಹಳ ಮುಖ್ಯ: ನಾಡಿನ, ಜನರ ರಕ್ಷಣೆ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವುದು ಇಲಾಖೆಯ ಪ್ರಮುಖ ಕರ್ತವ್ಯ. ಇಲಾಖೆಯಲ್ಲಿ ಶಿಸ್ತು, ದಕ್ಷತೆ, ನಿಷ್ಠೆ ಬಹಳ ಮುಖ್ಯ. ದೇಶದಲ್ಲಿ ಕರ್ನಾಟಕ ಪೊಲೀಸ್ ಉನ್ನತ ಸ್ಥಾನದಲ್ಲಿದೆ. ಚುನಾವಣೆ ಸಂದರ್ಭಗಳಲ್ಲಿ ಬೇರೆ ರಾಜ್ಯಗಳಿಂದ ಪೊಲೀಸ್ ತುಕಡಿ ಕರೆಸುವಾಗ ಕರ್ನಾಟಕಕ್ಕೆ ಆದ್ಯತೆ ನೀಡುತ್ತಾರೆ. ನಿಷ್ಪಕ್ಷಪಾತ, ಮಾನವೀಯತೆ, ಅಂತ:ಕಾರಣ ಹಾಗೂ ನಿಸ್ಪೃಹ ಕರ್ತವ್ಯಕ್ಕೆ ನಮ್ಮ ಪೊಲೀಸ್ ಹೆಸರುವಾಸಿಯಾಗಿದೆ ಎಂದು ಹೇಳಿದರು.

ಸಮಾಜದ ಸ್ವಾಸ್ಥ್ಯ, ಶಾಂತಿ ಕಾಪಾಡಲು ತಮ್ಮ ಅಂತ:ಕಾರಣ, ಮಾನವೀಯತೆ ಬಹಳ ಮುಖ್ಯ. ನ್ಯಾಯ ನಿಷ್ಠುರವಾಗಿ ಕೆಲಸ ಮಾಡಬೇಕು. ಫೋರೆನ್ಸಿಕ್ ಪ್ರಯೋಗಾಲಯ ಅಪರಾಧಿಗಳ ಶೋಧನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕೋರ್ಟ್‌ಗಳು ಅದರ ವರದಿಗೆ ಮಹತ್ವ ನೀಡುತ್ತದೆ. ಬೆಂಗಳೂರಿನಲ್ಲಿ ನಾರ್ಕೋಟಿಕ್ಸ್, ಸೈಬರ್ ಹಾಗೂ ಫೋರೆನ್ಸಿಕ್ ಲ್ಯಾಬ್ ವುಳ್ಳ ಠಾಣೆಗಳನ್ನು ತೆರೆಯಲಾಗಿದೆ ಎಂದು ಭರವಸೆ ನೀಡಿದರು.

bommai 3

ಹುಬ್ಬಳ್ಳಿ ಬಳ್ಳಾರಿಯಲ್ಲಿಯೂ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿವಮೊಗ್ಗ ಮುಂತಾದ ಕಡೆಗಳಲ್ಲಿಯೂ ಫೋರೆನ್ಸಿಕ್ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಬೇಕೆಂದು ಸೂಚಿಸಿದರು.

ಇಂಟೆಲಿಜೆನ್ಸ್ ಸಧೃಢತೆಗೆ ಕ್ರಮ:  ಪೊಲೀಸರ ಬುದ್ಧಿವಂತಿಕೆಯೂ ಮುಖ್ಯ. ಹೊಸ ತರಬೇತಿ ವ್ಯವಸ್ಥೆ ಮತ್ತು ಸಿಬ್ಬಂದಿ ಹೆಚ್ಚಿಸುವ ಮೂಲಕ ಇಂಟೆಲಿಜೆನ್ಸ್ ನ್ನು ಇನ್ನಷ್ಟು ಸಧೃಢ ಮಾಡಲು ಕ್ರಮ ವಹಿಸಲಾಗಿದೆ ಎಂದರು. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ, ಭಗವಂತ್ ಮಾನ್, ಕೇಜ್ರಿವಾಲ್

ಕಲ್ಯಾಣ ಕಾರ್ಯಕ್ರಮ: ಪೊಲೀಸರ ಕಾರ್ಯದಲ್ಲಿ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಪೊಲೀಸ್ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಆರೋಗ್ಯ, ಸೇವೆ, ಬಂದೋಬಸ್ತಿಗೆ ಭತ್ಯೆ, ಬಡ್ತಿಗಳನ್ನು ನೀಡಿದೆ. ಪೊಲೀಸ್ ಗೃಹ ಯೋಜನೆಯಡಿ 10 ಸಾವಿರಕ್ಕೂ ಹೆಚ್ಚು ಮನೆಗಳ ನಿರ್ಮಾಣಕ್ಕೆ ಅನುಮೋದನೆ ಹಾಗೂ ಅನುದಾನ ನೀಡಿದೆ. ಪೊಲೀಸರ ಆರೋಗ್ಯಕ್ಕಾಗಿ 100 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಪೊಲೀಸರ ದಕ್ಷತೆಗೆ ಅನುಗುಣವಾಗಿ ಅವರ ಕಲ್ಯಾಣ ಕಾರ್ಯಕ್ರಮಗಳಿಗೆ ವೇಗವಾಗಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ತಿಳಿಸಿದರು.

basavaraj bommai 3

ಆಧುನೀಕರಣ: ಆಧುನೀಕರಣಕ್ಕೆ ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ಕರ್ನಾಟಕ ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ. ಸೈಬರ್ ಅಪರಾಧ ಮತ್ತು ನಾರ್ಕೋಟಿಕ್ಸ್ ತಡೆಯಲು ದೊಡ್ಡ ಪ್ರಮಾಣದಲ್ಲಿ ಆಧುನೀಕರಣ ಮಾಡುವ ಅವಶ್ಯಕತೆ ಇದೆ. Crime leads the law ಎನ್ನುವುದನ್ನು ಬದಲಾಯಿಸಿ ಕಾನೂನು ಅಪರಾಧಕ್ಕೆ ಮುಂಚಿತವಾಗಿ ರೂಪುಗೊಳ್ಳುವಂತೆ ಆಗಬೇಕು. ಅದಕ್ಕಾಗಿ ಸಿಬ್ಬಂದಿಗಳ ತರಬೇತಿ, ಆಧುನಿಕ ತಂತ್ರಜ್ಞಾನ ಬಳಕೆಯ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಹಲವಾರು ಸುಧಾರಣಾ ಕ್ರಮಗಳನ್ನು ಕರ್ನಾಟಕ ಪೊಲೀಸ್ ಕೈಗೊಂಡಿದೆ ಎಂದರು.

ಆರ್ಥಿಕ ಅಪರಾಧಗಳನ್ನು ಪತ್ತೆ ಹಚ್ಚಲು ಎಸ್.ಎಂ.ಎಸ್. ಮೂಲಕವೇ ಪ್ರಕರಣ ದಾಖಲಿಸಿ ಖಾತೆಗಳನ್ನು ಮುಟ್ಟುಗೋಲು ಹಾಕುವ ಕ್ರಮ ಕೈಗೊಂಡಿದೆ. ಕಳ್ಳತನ ನಿಲ್ಲಿಸಲು ಕರ್ನಾಟಕ ಪೊಲೀಸರಿಗೆ ಸಾಧ್ಯವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ ಚಾರ್ ಧಾಮ್ ಯಾತ್ರೆಗೆ ಮೇ ತಿಂಗಳಲ್ಲಿ ವಿಶೇಷ ಆಫರ್

DJ HALLI DRUG 2 1

ಡ್ರಗ್ಸ್ ವಿರುದ್ದದ ಸಮರ ನಿರಂತರವಾಗಿರಲಿ: ಮಾದಕವಸ್ತು ಮಾರಾಟದ ವಿರುದ್ಧ ಸಮರ ಸಾರಿರುವ ಕರ್ನಾಟಕ ಪೊಲೀಸ್‌ರು ಅತಿ ಹೆಚ್ಚು ಡ್ರಗ್ಸ್‌ನ್ನು ವಶಪಡಿಸಿಕೊಳ್ಳಲಾಗಿದೆ. ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ನೂತನ ಕಾನೂನಿನ ಅನ್ವಯ ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ. ಡ್ರಗ್ಸ್ ವಿರುದ್ದದ ಸಮರ ನಿರಂತರವಾಗಿ ನಡೆಯಬೇಕು. ಸಂಪೂರ್ಣವಾಗಿ ನಿಷೇಧ ವಾಗುವವರೆಗೂ ಪ್ರಯತ್ನ ಜಾರಿಯಲ್ಲಿರಬೇಕು. ಶಾಲಾ, ಕಾಲೇಜು, ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಬೇಕು. ಸೈಬರ್ ಅಪರಾಧಗಳನ್ನು ಕಂಡುಹಿಡಿಯಲು ಪೊಲೀಸರಿಗೆ ವಿಶೇಷ ತರಬೇತಿ ನೀಡಬೇಕು ಎಂದ ಅವರು, ಕೋವಿಡ್ ಸಂದರ್ಭದಲ್ಲಿ ಪೊಲೀಸರು ಮುಂಚೂಣಿಯಲ್ಲಿದ್ದು ಕೆಲಸ ಮಾಡಿರುವುದು ಶ್ಲಾಘನೀಯ ಮತ್ತು ದಾಖಲಾರ್ಹ ಎಂದು ಅಭಿನಂದನೆ ಸಲ್ಲಿಸಿದರು.

TAGGED:Basavaraj Bommaibengalurudrugspoliceಡ್ರಗ್ಸ್ಪೊಲೀಸ್ಬಸವರಾಜ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

ಸಾಂದರ್ಭಿಕ ಚಿತ್ರ
Districts

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ

Public TV
By Public TV
2 hours ago
Iran
Latest

ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್‌

Public TV
By Public TV
2 hours ago
Mantralayam Prahlad Joshi
Districts

ಮಂತ್ರಾಲಯ | ಗುರುರಾಯರ ದರ್ಶನ ಪಡೆದ ಪ್ರಹ್ಲಾದ್ ಜೋಶಿ

Public TV
By Public TV
2 hours ago
Crocodile found in a pothole on the side of the road People are worried Hunagunda Bagalkote
Bagalkot

ಬಾಗಲಕೋಟೆ| ರಸ್ತೆಯ ಪಕ್ಕದ ಗುಂಡಿಯಲ್ಲಿ ಮೊಸಳೆ ಪತ್ತೆ – ಜನರಲ್ಲಿ ಆತಂಕ

Public TV
By Public TV
2 hours ago
Davangere Farmers Complaint
Crime

ರೈತರಿಗೆ ಸಿಎಂ ಭದ್ರತಾ ಸಿಬ್ಬಂದಿ ಒದ್ದ ಆರೋಪ – ದೂರು ದಾಖಲು

Public TV
By Public TV
3 hours ago
Laxman Savadi
Bengaluru City

2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಲಕ್ಷ್ಮಣ್ ಸವದಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?