Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ: ಬೊಮ್ಮಾಯಿ

Bengaluru City

ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ: ಬೊಮ್ಮಾಯಿ

Public TV
Last updated: March 7, 2023 4:38 pm
Public TV
Share
3 Min Read
Basavaraj Bommai 2
SHARE

ಬೆಂಗಳೂರು: ಸಿಲಿಕಾನ್‌ ಸಿಟಿಯ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100ನೇ ಜನೌಷಧಿ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು.

Basavaraj Bommai 1

ಬೆಂಗಳೂರಿನ (Bengaluru) ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ. 240 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ. ಸುಮಾರು 19 ಪಿ.ಹೆಚ್.ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲೆಡೆ ಜನೌಷಧ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು ಸಂಚಾರಿ ಆಸ್ಪತ್ರೆಯನ್ನೂ ಹಾಗೂ ಡಯಾಲಿಸಿಸ್ ಕೇಂದ್ರವನ್ನೂ ಉದ್ಘಾಟಿಸಲಾಗಿದ್ದು, ರೋಗಿಗಳ ಮುಖದಲ್ಲಿ ಮಂದಹಾಸ ನೋಡಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಮತ್ತು ಬಡವರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ. ಅವರು ಪ್ರಧಾನಿಯಾಗುವ ಮುನ್ನ ಅತ್ಯಂತ ಕಡಿಮೆ ದರದಲ್ಲಿ ಔಷಧಗಳನ್ನು ನೀಡುವ ಕಾರ್ಯಕ್ರಮ ಇರಲಿಲ್ಲ. ಆಡಳಿತಗಾರರಿಗೆ ಸೂಕ್ಷ್ಮಾತಿಸೂಕ್ಷ್ಮ ವಿಷಯಗಳ ಬಗ್ಗೆ ಕಳಕಳಿ ಇರಬೇಕು. ಬಡತನವನ್ನು ಅನುಭವಿಸಿದಾಗ, ಹತ್ತಿರದಿಂದ ನೋಡಿ ಬಡವರ ಸಂಕಷ್ಟವನ್ನು ತಿಳಿದುಕೊಂಡಾಗ ಮಾತ್ರ ಬರುತ್ತದೆ. ನರೇಂದ್ರ ಮೋದಿಯವರಿಗೆ ಬಡತನ ಎಂದರೇನು ಎಂದು ತಿಳಿದಿದೆ. ನೂರು ರೂ.ಗಳೂ ಸಹ ಇಲ್ಲದ ಸ್ಥಿತಿಯಲ್ಲಿರುತ್ತಾರೆ. ಔಷಧಿ ಕಂಪನಿಗಳ ದರ ದಕ್ಕೆ ಹತ್ತುಪಟ್ಟು ಮಾಡಿರುತ್ತಾರೆ. ಬಡವರ ಕಷ್ಟವನ್ನು ಅರ್ಥಮಾಡಿಕೊಂಡಿರುವ ಪ್ರಧಾನಿಗಳು ಬಡವರಿಗಾಗಿ ಸುಲಭ ಮತ್ತು ಕಡಿಮೆ ದರದಲ್ಲಿ ದೊರೆಯಬೇಕೆಂದು, ಗುಣಮುಖರಾಗಿ ಆರೋಗ್ಯವಂತರಾಗಬೇಕು. ಭಾರತ ಸಶಕ್ತವಾಗಬೇಕಾದರೆ, ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ತಲುಪಬೇಕೆಂದು ಇಂಥ ಕಾರ್ಯಕ್ರಮ ರೂಪಿಸಿದ್ದಾರೆ ಎಂದರು.

ಇಂದು ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ – 2023 ಮತ್ತು 100ನೇ ಜನೌಷಧಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದೆನು. pic.twitter.com/6x77SZj4Tb

— Basavaraj S Bommai (@BSBommai) March 7, 2023

ಆರೋಗ್ಯಕ್ಕೆ ಮೊದಲು ಅಗತ್ಯವಿರುವುದು ಶುದ್ಧವಾದ ನೀರು, ದೇಶದ ಗ್ರಾಮಗಳಲ್ಲಿರುವ ಎಲ್ಲರ ಮನೆಗೆ ಮುಂದಿನ 5 ವರ್ಷಗಳಲ್ಲಿ ನೀರು ಕೊಡುವುದಾಗಿ ಘೋಷಿಸಿದ್ದ ಪ್ರಧಾನಿಗಳು, ನಾಯಕನಿಗೆ ಬದ್ಧತೆ, ಛಲ. ಬುದ್ಧಿವಂತಿಕೆ ಹಾಗೂ ಬುದ್ಧಿವಂತಿಕೆಗೆ ಹಣ ಕೊಡುವ ಹೃದಯ ವೈಶಾಲ್ಯವಿದ್ದರೆ ಅದು ಸಾಧ್ಯವಿದೆ. ಜಲ್ ಜೀವನ್ ಮಿಷನ್ ಅಡಿಯಲ್ಲಿ ಅಸಾಧ್ಯವಾದುದ್ದನ್ನು ಸಾಧ್ಯ ಮಾಡಲಾಗುತ್ತಿದೆ. ಅಸಾಧ್ಯವಾದುದನ್ನು ಸಾಧ್ಯ ಮಾಡುವುದೇ ನಿಜವಾದ ನಾಯಕತ್ವ. 10 ಕೋಟಿಗಳಿಂತ ಹೆಚ್ಚು ಮನೆಗಳಿಗೆ ಮೋದಿಯವರು ಶುದ್ಧವಾದ ಕುಡಿಯುವ ನೀರನ್ನು ಕೊಡುತ್ತಿದ್ದಾರೆ. ಕರ್ನಾಟಕ ಒಂದರಲ್ಲಿಯೇ 72 ವರ್ಷ ಕೇವಲ 25 ಲಕ್ಷ ಮನೆಗಳಿಗೆ ನೀರು ಕೊಡಲಾಗಿತ್ತು. ಕಳೆದ ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲಾಗಿದೆ. ಇದು ಬದ್ಧತೆಯ ನಾಯಕತ್ವ, ಹಾಗೂ ಬದ್ಧತೆ ಎಂದರು.

Basavaraj Bommai

ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೂಡ ಕ್ರಿಯಾಶೀಲ ಸಚಿವರು. ರಾಜ್ಯಕ್ಕೆ ಹೆಚ್ಚುವರಿ ಲಸಿಕೆಯನ್ನು ಒದಗಿಸಿದ್ದಲ್ಲದೇ ಯೂರಿಯಾ ಕೊರತೆಯಾದಾಗಲೂ ಆದೇಶ ಮಾಡಿ ಕೊರತೆ ನೀಗಿಸಿದ್ದರು ಎಂದು ಸ್ಮರಿಸಿದರು.

ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದಲ್ಲಿ ನೂರನೇ ಜನೌಷಧಿ ಕೇಂದ್ರ ಉದ್ಘಾಟನೆಗೊಂಡಿದ್ದು, ಇಡೀ ದೇಶದಲ್ಲಿ ಸಂಸದರೊಬ್ಬರ ಕ್ಷೇತ್ರದಲ್ಲಿ ಇರುವುದು ಒಂದು ದಾಖಲೆ. ಇದು ಜನಪರ ಕಾಳಜಿಯನ್ನು ತೋರಿಸುತ್ತದೆ ಎಂದರು. ವಾಸವಿ ಚಾರಿಟಬಲ್ ಆಸ್ಪತ್ರೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ಕೆ.ಎಸ್.ಆರ್.ಟಿ.ಸಿ ಯಲ್ಲಿ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿರುವುದನ್ನು ದತ್ತು ಪಡೆದು ಡಯಾಲಿಸ್ ಕೇಂದ್ರ ತೆರೆದು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

TAGGED:Basavaraj BommaibjpMansukh Mandaviyaಜನೌಷಧ ಕೇಂದ್ರಬಸವರಾಜ ಬೊಮ್ಮಾಯಿಬಿಜೆಪಿಮನ್‍ಸುಖ್ ಮಾಂಡವಿಯಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
4 hours ago
virat kohli 2
Cricket

ಕೊಹ್ಲಿ, ಪಡಿಕ್ಕಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ತವರಲ್ಲಿ ಆರ್‌ಸಿಬಿಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
Bengaluru should become the capital of agricultural technology like IT Siddaramaiah
Bengaluru City

ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿದ್ದರಾಮಯ್ಯ

Public TV
By Public TV
6 hours ago
Arvind Kejriwal 1
Latest

ಚಡ್ಡಾ ಜೊತೆ ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು – ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್‌

Public TV
By Public TV
6 hours ago
Sai Sudharsan
Cricket

ಆರ್‌ಸಿಬಿ ವಿರುದ್ಧ ಶತಕ ಸಿಡಿಸಿ ಕ್ರಿಸ್ ಗೇಲ್ ದಾಖಲೆ ಮುರಿದ ಸಾಯಿ ಸುದರ್ಶನ್

Public TV
By Public TV
6 hours ago
Chikkamagaluru Rain
Chikkamagaluru

ಚಿಕ್ಕಮಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಗಾಳಿ ಮಳೆ

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?