ಕೆಟ್ಟ ಸಂಸ್ಕೃತಿ ರಾಜಕಾರಣಕ್ಕೆ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ: ಬೊಮ್ಮಾಯಿ

Public TV
1 Min Read
Basavaraj Bommai 1 3

ಹುಬ್ಬಳ್ಳಿ: ಕೆಟ್ಟ ಸಂಸ್ಕೃತಿಯು ರಾಜಕಾರಣಕ್ಕೆ ಪ್ರವೇಶಿಸಲು ಕಾಂಗ್ರೆಸ್ ಮಹಾದ್ವಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)  ತಿಳಿಸಿದರು.

ಅವರು ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿ, ಸ್ಯಾಂಟ್ರೋ ರವಿ (Santro Ravi) ಬಿಜೆಪಿ ಕಾರ್ಯಕರ್ತ ಎನ್ನುವ ಬಗ್ಗೆ ಶಾಸಕ ದಿನೇಶ್ ಗುಂಡೂರಾವ್ (Dinesh Gundu Rao) ಮಾಡಿರುವ ಟ್ವೀಟ್ ಕುರಿತು ಪ್ರತಿಕ್ರಿಯೆ ನೀಡಿದರು. ಕಾರ್ಯಕರ್ತ ಹೌದೋ, ಅಲ್ಲವೋ ಎಂದು ಪರಿಶೀಲಿಸಲು ಸೂಚಿಸಲಾಗಿದೆ. ಕಾಂಗ್ರೆಸ್ (Congress) ರಾಜಕೀಯವಾಗಿ ದಿವಾಳಿಯಾಗಿದೆ ಎಂದು ವ್ಯಂಗ್ಯವಾಡಿದರು.

Who is trafficker Santro Ravi BJP Congress JDS Talk Fight 3

ಕಾಂಗ್ರೆಸ್‌ನಲ್ಲಿ ಎಂಥವರಿದ್ದಾರೆ ಎಂದು ದಿನೇಶ್ ಗುಂಡೂರಾವ್ ಅವರಿಗೆ ತಿಳಿದಿದೆ. ನಾನು ಅವರ ಮಟ್ಟಕ್ಕೆ ಇಳಿಯಲಾಗದು. ಮೊದಲು ಅವರ ಮನೆ ಸ್ವಚ್ಛ ಮಾಡಿಕೊಳ್ಳುವುದನ್ನು ಕಲಿಯಲಿ ಎಂದು ತಿರುಗೇಟು ನೀಡಿದರು.

ಡಿ.ಕೆ.ಶಿವಕುಮಾರ್ (DK Shivakumar) ಅವರು ಉಚಿತ ವಿದ್ಯುತ್ ನೀಡುವುದಾಗಿ ಹೇಳಿಕೆಗೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಹತಾಶರಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ಹೇಳಿಕೆಗಳನ್ನು ಗಮನಿಸಿದರೆ, ಮುಂದೆ ಅನುಷ್ಠಾನ ಮಾಡುವ ಉದ್ದೇಶ ಅವರಿಗಿಲ್ಲ. ಹೇಗಾದರೂ ಮಾಡಿ, ಸುಳ್ಳು ಭರವಸೆ ನೀಡಿ, ಚುನಾವಣೆ ಗೆಲ್ಲಬೇಕೆನ್ನುವುದು ಸ್ಪಷ್ಟವಾಗಿದೆ ಎಂದರು. ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಭಜರಂಗದಳ ಮುಖಂಡನ ಶವ ಪತ್ತೆ!

CONGRESS

ಇಷ್ಟು ವರ್ಷ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷ ಈ ರೀತಿಯ ಹೇಳಿಕೆಯನ್ನು ನೀಡುವುದು ಸರಿಯಲ್ಲ. ಅರವಿಂದ್‌ ಕೇಜ್ರಿವಾಲ್ (Arvind Kejriwal) ಹೇಳಿದರೆ ನಡೆಯುತ್ತದೆ. ಅವರಿನ್ನೂ ಹೊಸಬರು. ಕಾಂಗ್ರೆಸ್ ಕಾಲದಲ್ಲಿ 6 ತಾಸು ವಿದ್ಯುತ್ ಸರಿಯಾಗಿ ನೀಡಲಾಗಲಿಲ್ಲ. ಇನ್ನು ಉಚಿತ ವಿದ್ಯುತ್ ಹೇಗೆ ನೀಡಲಿದ್ದಾರೆ ಎಂದು ಪ್ರಶ್ನಿಸಿದರು. ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ – ಗಣರಾಜೋತ್ಸವದ ಪರೇಡ್‌ನಲ್ಲಿ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಮಿತಿಯ ಅನುಮತಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *