ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರ ನೀತಿ ನಿಯಮಗಳ ಪ್ರಕಾರ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಈದ್ಗಾ ಮೈದಾನ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಅದು ಕಂದಾಯ ಇಲಾಖೆ ಜಾಗ ಅಂತ ನಿರ್ಧಾರ ಆಗಿದೆ. ಕಂದಾಯ ಇಲಾಖೆ ಜಾಗ ಅಂದರೆ ಅದು ಸರ್ಕಾರದ ಜಾಗ. ಸರ್ಕಾರದ ಜಾಗದಲ್ಲಿ ಸರ್ಕಾರದ ನೀತಿ ನಿಯಮಗಳ ಪ್ರಕಾರ ಅಲ್ಲಿ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಸ್ಪಷ್ಟವಾಗಿ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗರ ಮನಸ್ಥಿತಿಯಲ್ಲಿ ಅತಂತ್ರವಿದೆ, ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ: ಬೊಮ್ಮಾಯಿ
ಶಾಸಕ ಜಮೀರ್ ಅಹ್ಮದ್ರಿಂದ ಗಣೇಶೋತ್ಸವ ಮಾಡಲು ಬಿಡೊಲ್ಲ ಎಂಬ ಹೇಳಿಕೆಗೆ ತಿರುಗೇಟು ಕೊಟ್ಟ ಸಿಎಂ, ಜಮೀರ್ ಹೇಳಿಕೆಗೆ ಬೆಲೆ ಇಲ್ಲ. ಯಾರ್ ಏನೇ ಹೇಳಿದರು ಕಾನೂನು ಪ್ರಕಾರವೇ ಕಾರ್ಯಕ್ರಮಗಳು ನಡೆಯುತ್ತವೆ. ಸರ್ಕಾರದ ನೀತಿ ನಿಯಮದ ಪ್ರಕಾರ ಕಾರ್ಯಕ್ರಮ ನಡೆಯುತ್ತವೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್ ನ್ಯೂಸ್- ಆ.15ರಂದು ಬಿಎಂಟಿಸಿ ಬಸ್ನಲ್ಲಿ ಫ್ರೀ ಪ್ರಯಾಣ