-ಸ್ಯಾಂಟ್ರೋ ರವಿಯ ಆಸ್ತಿಪಾಸ್ತಿ ಮುಟ್ಟುಗೋಲು
ಹುಬ್ಬಳ್ಳಿ: ಸ್ಯಾಂಟ್ರೋ ರವಿಗೆ 20 ವರ್ಷದ ಇತಿಹಾಸವಿದೆ. ಕಾಂಗ್ರೆಸ್ (Congress) ಕಾಲದಲ್ಲೇ ಸ್ಯಾಂಟ್ರೋ ಹೆಚ್ಚಾಗಿದ್ದು, ಅವರ ಕಾಲದಲ್ಲೇ ಸ್ಯಾಂಟ್ರೋ ರವಿ (Santro Ravi) ಜೈಲಿನಿಂದ ಹೊರಬಂದಿದ್ದಾನೆ. ಇದಕ್ಕೆ ಕಾಂಗ್ರೆಸ್ನವರೇ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ಈ ಬಗ್ಗೆ ಹುಬ್ಬಳ್ಳಿ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಸ್ಯಾಂಟ್ರೋ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದು, ಆತನ ಎಲ್ಲಾ ಆಸ್ತಿಪಾಸ್ತಿಗಳನ್ನು ಮುಟ್ಟು ಗೋಲು ಹಾಕಿಕೊಳ್ಳಲಾಗಿದೆ. ಆತ ಯಾರ ಜೊತೆಗೆ ನಂಟು ಹೊಂದಿದ್ದ ಆತನ ಹಿನ್ನೆಲೆ ಏನು ಎಂಬುವುದು ಎಲ್ಲಾ ತನಿಖೆ ಮಾಡಲಾಗುತ್ತಿದೆ ಎಂದರು.
ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಮತ್ತೆ ಗಡವು ನೀಡಿರುವ ಬಗ್ಗೆ ಮಾತನಾಡಿದ ಅವರು, ಸಂವಿಧಾನ ಬದ್ಧವಾಗಿ ಮೀಸಲಾತಿ ನೀಡಬೇಕಾಗಿದೆ. ಇದಕ್ಕೆ ಹಿಂದುಳಿದ ವರ್ಗಗಳ ಆಯೋಗದ ಸಂಪೂರ್ಣ ವರದಿ ಬಹಳ ಮುಖ್ಯ. ಹೀಗಾಗಿ ಅವರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ದೈವ ಶಕ್ತಿಯಿದ್ದವರಿಗೆ ಕ್ಯಾನ್ಸರ್ ಗೆಲ್ಲುವ ಶಕ್ತಿಯಿದೆ: ಬೊಮ್ಮಾಯಿ
ಮಹಾದಾಯಿ ವಿಚಾರವಾಗಿ ಅರಣ್ಯ ಇಲಾಖೆ ಸ್ಪಷ್ಟನೆ ಕೇಳೋದು ಸಾಮಾನ್ಯ, ಈ ಹಿಂದೆ ಸಾಕಷ್ಟು ವಿಚಾರದಲ್ಲಿ ಸ್ಪಷ್ಟನೆ ಕೆಳಿದ್ದಾರೆ. ನಾವು ಸಮರ್ಥವಾಗಿ ಉತ್ತರ ನೀಡುತ್ತೆವೆ ಎಂದ ಅವರು, ಕೋಲಾರದಲ್ಲಿ ಸಿದ್ದು ಸ್ಪರ್ಧೆಯು ಅವರ ವೈಯಕ್ತಿಕ. ಈ ಬಗ್ಗೆ ವ್ಯಾಖ್ಯಾನ ನಾನು ಮಾಡಲ್ಲ. ಎಲ್ಲಾ ಕಡೆ ನಿಲ್ಲಲು ಅವರು ಸರ್ವ ಸ್ವತಂತ್ರರು. ಆದರೆ ತೀರ್ಮಾನವನ್ನು ಕೋಲಾರದ ಜನತೆ ಮಾಡತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಚಳಿಗಾಲದಲ್ಲಿ ಹೆಚ್ಚಾಗ್ತಿದೆ ಹೃದಯ ಸಮಸ್ಯೆ- ಇರಲಿ ಎಚ್ಚರ
Live Tv
[brid partner=56869869 player=32851 video=960834 autoplay=true]
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k