Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾತ್ಮಾ ಗಾಂಧಿ  ಆದರ್ಶಗಳು ಭಾರತದ ಆಧಾರಸ್ಥಂಭಗಳು: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾತ್ಮಾ ಗಾಂಧಿ  ಆದರ್ಶಗಳು ಭಾರತದ ಆಧಾರಸ್ಥಂಭಗಳು: ಬಸವರಾಜ ಬೊಮ್ಮಾಯಿ

Bengaluru City

ಮಹಾತ್ಮಾ ಗಾಂಧಿ  ಆದರ್ಶಗಳು ಭಾರತದ ಆಧಾರಸ್ಥಂಭಗಳು: ಬಸವರಾಜ ಬೊಮ್ಮಾಯಿ

Public TV
Last updated: January 30, 2022 7:18 pm
Public TV
Share
3 Min Read
Basavaraj Bommai 6
SHARE

ಬೆಂಗಳೂರು: ಮಹಾತ್ಮಾ ಗಾಂಧೀಜಿಯವರ(Mahatma Gandhi) ಆದರ್ಶಗಳು ಸ್ವತಂತ್ರ ಹಾಗೂ ಗಣತಂತ್ರ ಭಾರತದ ಆಧಾರಸ್ಥಂಭಗಳಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದರು.

ಇಂದು ಹುತಾತ್ಮರ ದಿನಾಚರಣೆಯ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮಹಾತ್ಮಾ ಗಾಂಧೀಜಿಯವರು ತಮ್ಮ ಪ್ರಾಣವನ್ನು ಬಲಿದಾನ ಮಾಡಿದ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮಾ ಗಾಂಧಿ ವಿಶ್ವದ ನಾಯಕರು. ಸತ್ಯ ಮತ್ತು ಅಹಿಂಸೆಯ ಪ್ರತಿಪಾದಕರು. ಶಾಂತಿಯಿಂದಲೇ ಸ್ವತಂತ್ರ ಪಡೆಯುವ ಚಲವನ್ನು ತೊಟ್ಟವರು. ಜೈಲು ವಾಸ, ಲಾಠಿ ಏಟು ಮುಂತಾದ ಹಲವಾರು ಕಷ್ಟ ಕಾರ್ಪಣ್ಯಗಳನ್ನು ಅನುಭವಿಸಿಯೂ ತಮ್ಮ ಸತ್ಯ, ಅಹಿಂಸೆಯ ಸಿದ್ಧಾಂತವನ್ನು ಎಂದೂ ಬಿಟ್ಟುಕೊಡಲಿಲ್ಲ ಎಂದರು. ಇದನ್ನೂ ಓದಿ: ಫೆಬ್ರವರಿಯಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ

ನನ್ನ ಜೀವನವೇ ಒಂದು ಸಂದೇಶ ಎಂದ ಅವರು, ತಮ್ಮ ಆತ್ಮ ಚರಿತ್ರೆ ಸತ್ಯಾನ್ವೇಷಣೆಯ ಮಾತನ್ನು ಹೇಳಲು ನೈತಿಕವಾಗಿ ಬಹಳ ದೊಡ್ಡ ಶಕ್ತಿ ಇರಬೇಕು. ಅಂಥಹ ವ್ಯಕ್ತಿಗಳು ಮಾತ್ರ ಇದನ್ನು ಹೇಳಲು ಸಾಧ್ಯ. ಅವರ ಜೀವನ ಅತ್ಯಂತ ಪರಿಶುದ್ಧ ಹಾಗೂ ಸತ್ಯದಿಂದ ಕೂಡಿರುವಂಥದ್ದು. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೀಗಾಗಿಯೇ ಅತ್ಯಂತ ಆದರ್ಶಪ್ರಾಯವಾಗಿದ್ದರೆ. ಅವರ ಬದುಕು ಮತ್ತು ವಿಚಾರಗಳು ನಮಗೆ ಸದಾ ದಾರಿದೀಪವಾಗಿದೆ. ಇಂದು ಅವರ ಜೊತೆಗೆ ಸಾವಿರಾರು ಜನ ಹುತಾತ್ಮರಾಗಿದ್ದಾರೆ. ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಲಾಲಾ ಲಜಪತ್ ರಾಯ್ ಪ್ರಮುಖರು. ಇವರೆಲ್ಲರೂ ಸ್ವತಂತ್ರ ಪೂರ್ವದಲ್ಲಿ ಬಲಿದಾನ ಮಾಡಿದವರು. ಅದರ ಜೊತೆಗೆ ಪ್ರತಿ ರಾಜ್ಯದಲ್ಲಿ ಆಯಾ ಪ್ರಾಂತ್ಯಗಳ ಪ್ರಮುಖರು, ಸಾಮಾನ್ಯ ಜನರು ಪ್ರಾಣ ಬಲಿದಾನ, ಆಸ್ತಿ ಅಂತಸ್ತು ನೀಡಿ ತ್ಯಾಗ ಮಾಡಿದ್ದಾರೆ. ಪೂಜ್ಯ ಮಹಾತ್ಮಾ ಗಾಂಧೀಜಿಯವರಿಗೆ ಹಾಗೂ ವಿಶೇಷವಾಗಿ ಅನಾಮಧೇಯ ಸ್ವತಂತ್ರ ಯೋಧರಿಗೆ ನಮನ ಸಲ್ಲಿಸಿದರು.

ಇಂದು ಮಹಾತ್ಮಾ ಗಾಂಧೀಜಿಯವರ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಲಾಯಿತು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ರಾಜ್ ಕುಮಾರ್ ತೇಲ್ಕೂರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು. pic.twitter.com/BprOo7idpZ

— Basavaraj S Bommai (@BSBommai) January 30, 2022

ದೇಶದ ಅಭಿವೃದ್ಧಿಗೆ ಸಂಕಲ್ಪ: ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ಬಂದಿಲ್ಲ ಎನ್ನುವುದನ್ನು ಅರ್ಥಮಾಡಿಕೊಂಡು, ಸ್ವಾತಂತ್ರ್ಯ ನಂತರದ ದಿನಗಳಲನ್ನು ಅವಲೋಕಿಸಿದರೆ, 75 ವರ್ಷಗಳಲ್ಲಿ ಹಲವಾರು ರಂಗದಲ್ಲಿ ಸಾಧನೆ ಮಾಡಿದ್ದೇವೆ. ಆದರೆ ಸಾಮಾನ್ಯ ಜನ ತಮ್ಮ ಬದುಕನ್ನು, ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಕೆಲಸ ಮಾಡಬೇಕಿದೆ. 75 ವರ್ಷಗಳಲ್ಲಿ ನಾವು ಇನ್ನಷ್ಟು ಕೆಲಸಗಳನ್ನು ಮಾಡಬಹುದಾಗಿತ್ತು ಎನ್ನುವುದು ನಾವು ಆತ್ಮಾವಲೋಕನ ಮಾಡಿಕೊಂಡಾಗ ತಿಳಿಯುತ್ತದೆ. ಅದಕ್ಕಾಗಿ ಪ್ರಧಾನ ಮಂತ್ರಿಗಳು ಆತ್ಮನಿರ್ಭರ್ ಭಾರತ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಧ್ಯೇಯವನ್ನಿಟ್ಟುಕೊಂಡು ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಇಂಧನ, ಶಿಕ್ಷಣ ಆರೋಗ್ಯ ಮುಂತಾದ ಹಲವಾರು ರಂಗಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಅವರ ಮಾರ್ಗದರ್ಶನ ದಲ್ಲಿ ರಾಜ್ಯವನ್ನು ಸಂಪದ್ಭರಿತ ವಾಗಿಸಲು ಹಾಗೂ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಲು ಸಂಕಲ್ಪ ಮಾಡುವ ದಿನ ಇದು ಎಂದರು.

Basavaraj Bommai 2 1

ಟೋಯಿಂಗ್ ಅತಿರೇಕದ ವರ್ತನೆ ಸಲ್ಲದು: ಟೋಯಿಂಗ್ ವಿಚಾರದಲ್ಲಿ ಸಾರ್ವಜನಿಕರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಶುರುವಾಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೋಯಿಂಗ್ ಬಗ್ಗೆ ಈಗಿರುವ ವ್ಯವಸ್ಥೆ ಬಗ್ಗೆ ಪುನರ್ ಪರಿಶೀಲನೆ ಮಾಡಲಾಗುತ್ತಿದೆ. ಇಲಾಖೆಯೇ ಇದನ್ನು ಮಾಡುತ್ತಿತ್ತು, ಈಗ ಖಾಸಗಿ ಯವರಿಗೆ ಗುತ್ತಿಗೆ ನೀಡಲಾಗಿದೆ. ಹಲವಾರು ಘಟನೆಗಳ ಬಗ್ಗೆ ಗಮಣಿಸಲಾಗಿದ್ದು, ಸಾರ್ವಜನಿಕರು ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಆದರೆ ಕಾನೂನಿನ ರಕ್ಷಣೆ ಮಾಡುವವರು ಸಾರ್ವಜನಿಕರೊಂದಿಗೆ ಅತ್ಯಂತ ಸೌಹಾರ್ದಯುತವಾಗಿ ವರ್ತಿಸಬೇಕು. ಅತಿರೇಕದ ವರ್ತನೆ ಸಹಿಸುವುದಿಲ್ಲ. ಈ ಬಗ್ಗೆ ನಾಳೆ ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರು ಹಾಗೂ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಸಭೆ ಕರೆದು ಸಂಪೂರ್ಣವಾಗಿ ಪುನರ್ ಪರಿಶೀಲನೆ ಮಾಡಲು ತೀರ್ಮಾನಿಸಲಾಗಿದೆ. ಹಲವಾರು ಬದಲಾವಣೆಗಳನ್ನು ತಂದು ಜನಸ್ನೇಹಿಯಾಗಿಸಲಿದ್ದೇವೆ ಎಂದರು. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಲಾಬಿ ಆರಂಭಿಸಿದ ವಲಸಿಗ ಶಾಸಕರು

ಜನೀಶ್ ಚಿಕಿತ್ಸೆಗೆ ಸಹಾಯ: ಜನೀಶ್ ಎನ್ನುವ ಮಗುವಿಗೆ ಚಿಕಿತ್ಸೆ ಗಾಗಿ 16 ಕೋಟಿ ಅವಶ್ಯಕತೆ ಇದೆ. ಈ ರೀತಿಯ ಬಹಳಷ್ಟು ಮಕ್ಕಳಿದ್ದು, ಸರ್ಕಾರ ಈ ಬಗ್ಗೆ ಏನು ಕ್ರಮ ಕೈಗೊಂಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಮಂತ್ರಿಗಳು ಈ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆದು, ಈ ಮೊತ್ತ ಏಕೆ ಬೇಕೆನ್ನುವ ಬಗ್ಗೆ ತಿಳಿದು, ಅಗತ್ಯ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು. ಸಾರ್ವಜನಿಕರೂ ಸಹಾಯ ಮಾಡಬೇಕೆಂದು ಮಾಧ್ಯಮಗಳು ಕರೆ ನೀಡಿವೆ. ಸರ್ಕಾರವಾಗಿ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

Basavaraj Bommai 7

ಚಿತ್ರಮಂದಿರಗಳಲ್ಲಿ ಆಸನ ವ್ಯವಸ್ಥೆ: ಕೋವಿಡ್ ನಿಯಮಗಳನ್ನು ಸಡಿಲಿಕೆ ಮಾಡಿರುವ ಬಗ್ಗೆ ಸಿನಿಮಾದವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಉತ್ತರಿಸಿ, ಸಿನಿಮಾದವರಿಗೆ ಗೃಹ ಸಚಿವನಾಗಿ, ಮುಖ್ಯಮಂತ್ರಿಯಾಗಿ ಬಹಳಷ್ಟು ಸವಲತ್ತುಗಳನ್ನು ನೀಡಲಾಗಿದೆ.ಅವರಿಂದ ಮನವಿ ಪಡೆದು ಆಸನ ವ್ಯವಸ್ಥೆಗಳ ಬಗ್ಗೆ ತಾಂತ್ರಿಕ ತಜ್ಞರ ಸಲಹೆ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

TAGGED:bengaluruMahatma Gandhiಬಸವರಾಜ ಬೊಮ್ಮಾಯಿಬೆಂಗಳೂರುಮಹಾತ್ಮಾ ಗಾಂಧಿಸ್ವಾತಂತ್ರ್ಯ
Share This Article
Facebook Whatsapp Whatsapp Telegram

Cinema news

kantara rishab shetty team harake nemotsava
ತುಳುನಾಡಿಗೆ ಬಂದು ಹರಕೆ ನೇಮೋತ್ಸವ ಸಲ್ಲಿಸಿದ ಕಾಂತಾರ ಚಿತ್ರತಂಡ
Cinema Dakshina Kannada Latest Sandalwood Top Stories
DARSHAN RENUKASWAMY
ದರ್ಶನ್ & ಗ್ಯಾಂಗ್‌ಗೆ ಮತ್ತೆ ಶಾಕ್; ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್
Cinema Court Latest Sandalwood Top Stories
Yash Toxic
ಯಶ್ ನಟನೆಯ ಟಾಕ್ಸಿಕ್ ಶೂಟಿಂಗ್ ಮುಗಿದೇ ಬಿಡ್ತಾ..?
Cinema Latest Sandalwood South cinema Top Stories
Shah Rukh Khan
ಫ್ಯಾನ್ಸ್‌ ಮುಂದೆ ಮಧ್ಯದ ಬೆರಳು ತೋರಿಸಿ ಆರ್ಯನ್‌ ಖಾನ್‌ ಉದ್ಧಟತನ – ಸ್ಪಷ್ಟನೆ ಕೊಟ್ಟ ಜಮೀರ್‌ ಪುತ್ರ
Bengaluru City Bollywood Cinema Latest Sandalwood Top Stories

You Might Also Like

WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 05-12-2025

Public TV
By Public TV
14 minutes ago
siddaramaiah
Bengaluru City

ದ್ವೇಷ ಭಾಷಣ ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ

Public TV
By Public TV
7 hours ago
d.k.shivakumar h.k.patil
Bengaluru City

ಕೈಯಲ್ಲಿ‌ದ್ದ 24 ಲಕ್ಷದ‌ ಕಾರ್ಟಿಯರ್ ವಾಚ್ ಬಿಚ್ಚಿ ಸಚಿವ ಹೆಚ್.ಕೆ.ಪಾಟೀಲ್‌ ಕೈಗೆ ಕೊಟ್ಟ ಡಿಕೆಶಿ

Public TV
By Public TV
7 hours ago
Vladimir Putin 2
Latest

ಭಾರತ-ರಷ್ಯಾ ಬಾಂಧವ್ಯ ಅಮೆರಿಕ ಸೇರಿ ಯಾವ ದೇಶದ ವಿರುದ್ಧವೂ ಅಲ್ಲ: ಪುಟಿನ್‌ ಸ್ಪಷ್ಟನೆ

Public TV
By Public TV
8 hours ago
bus hits bike near yedrami young woman dies on the spot
Crime

ಬೈಕ್‌ಗೆ ಬಸ್ ಡಿಕ್ಕಿ – ಯುವತಿ ಸ್ಥಳದಲ್ಲೇ ಸಾವು

Public TV
By Public TV
8 hours ago
Madikeri Regional Transport Department
Districts

ಮಡಿಕೇರಿ ಪ್ರಾದೇಶಿಕ ಸಾರಿಗೆ ಇಲಾಖೆಗೆ 1.59 ಕೋಟಿ ರಾಜಸ್ವ ಸಂಗ್ರಹ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?