Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾತ್ಮಾ ಗಾಂಧಿ  ಆದರ್ಶಗಳು ಭಾರತದ ಆಧಾರಸ್ಥಂಭಗಳು: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾತ್ಮಾ ಗಾಂಧಿ  ಆದರ್ಶಗಳು ಭಾರತದ ಆಧಾರಸ್ಥಂಭಗಳು: ಬಸವರಾಜ ಬೊಮ್ಮಾಯಿ

Bengaluru City

ಮಹಾತ್ಮಾ ಗಾಂಧಿ  ಆದರ್ಶಗಳು ಭಾರತದ ಆಧಾರಸ್ಥಂಭಗಳು: ಬಸವರಾಜ ಬೊಮ್ಮಾಯಿ

Public TV
Last updated: January 30, 2022 7:18 pm
Public TV
Share
3 Min Read
Basavaraj Bommai 6
SHARE

ಬೆಂಗಳೂರು: ಮಹಾತ್ಮಾ ಗಾಂಧೀಜಿಯವರ(Mahatma Gandhi) ಆದರ್ಶಗಳು ಸ್ವತಂತ್ರ ಹಾಗೂ ಗಣತಂತ್ರ ಭಾರತದ ಆಧಾರಸ್ಥಂಭಗಳಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದರು.

ಇಂದು ಹುತಾತ್ಮರ ದಿನಾಚರಣೆಯ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮಹಾತ್ಮಾ ಗಾಂಧೀಜಿಯವರು ತಮ್ಮ ಪ್ರಾಣವನ್ನು ಬಲಿದಾನ ಮಾಡಿದ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸುತ್ತೇವೆ. ಮಹಾತ್ಮಾ ಗಾಂಧಿ ವಿಶ್ವದ ನಾಯಕರು. ಸತ್ಯ ಮತ್ತು ಅಹಿಂಸೆಯ ಪ್ರತಿಪಾದಕರು. ಶಾಂತಿಯಿಂದಲೇ ಸ್ವತಂತ್ರ ಪಡೆಯುವ ಚಲವನ್ನು ತೊಟ್ಟವರು. ಜೈಲು ವಾಸ, ಲಾಠಿ ಏಟು ಮುಂತಾದ ಹಲವಾರು ಕಷ್ಟ ಕಾರ್ಪಣ್ಯಗಳನ್ನು ಅನುಭವಿಸಿಯೂ ತಮ್ಮ ಸತ್ಯ, ಅಹಿಂಸೆಯ ಸಿದ್ಧಾಂತವನ್ನು ಎಂದೂ ಬಿಟ್ಟುಕೊಡಲಿಲ್ಲ ಎಂದರು. ಇದನ್ನೂ ಓದಿ: ಫೆಬ್ರವರಿಯಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ

ನನ್ನ ಜೀವನವೇ ಒಂದು ಸಂದೇಶ ಎಂದ ಅವರು, ತಮ್ಮ ಆತ್ಮ ಚರಿತ್ರೆ ಸತ್ಯಾನ್ವೇಷಣೆಯ ಮಾತನ್ನು ಹೇಳಲು ನೈತಿಕವಾಗಿ ಬಹಳ ದೊಡ್ಡ ಶಕ್ತಿ ಇರಬೇಕು. ಅಂಥಹ ವ್ಯಕ್ತಿಗಳು ಮಾತ್ರ ಇದನ್ನು ಹೇಳಲು ಸಾಧ್ಯ. ಅವರ ಜೀವನ ಅತ್ಯಂತ ಪರಿಶುದ್ಧ ಹಾಗೂ ಸತ್ಯದಿಂದ ಕೂಡಿರುವಂಥದ್ದು. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೀಗಾಗಿಯೇ ಅತ್ಯಂತ ಆದರ್ಶಪ್ರಾಯವಾಗಿದ್ದರೆ. ಅವರ ಬದುಕು ಮತ್ತು ವಿಚಾರಗಳು ನಮಗೆ ಸದಾ ದಾರಿದೀಪವಾಗಿದೆ. ಇಂದು ಅವರ ಜೊತೆಗೆ ಸಾವಿರಾರು ಜನ ಹುತಾತ್ಮರಾಗಿದ್ದಾರೆ. ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಲಾಲಾ ಲಜಪತ್ ರಾಯ್ ಪ್ರಮುಖರು. ಇವರೆಲ್ಲರೂ ಸ್ವತಂತ್ರ ಪೂರ್ವದಲ್ಲಿ ಬಲಿದಾನ ಮಾಡಿದವರು. ಅದರ ಜೊತೆಗೆ ಪ್ರತಿ ರಾಜ್ಯದಲ್ಲಿ ಆಯಾ ಪ್ರಾಂತ್ಯಗಳ ಪ್ರಮುಖರು, ಸಾಮಾನ್ಯ ಜನರು ಪ್ರಾಣ ಬಲಿದಾನ, ಆಸ್ತಿ ಅಂತಸ್ತು ನೀಡಿ ತ್ಯಾಗ ಮಾಡಿದ್ದಾರೆ. ಪೂಜ್ಯ ಮಹಾತ್ಮಾ ಗಾಂಧೀಜಿಯವರಿಗೆ ಹಾಗೂ ವಿಶೇಷವಾಗಿ ಅನಾಮಧೇಯ ಸ್ವತಂತ್ರ ಯೋಧರಿಗೆ ನಮನ ಸಲ್ಲಿಸಿದರು.

ಇಂದು ಮಹಾತ್ಮಾ ಗಾಂಧೀಜಿಯವರ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಲಾಯಿತು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ರಾಜ್ ಕುಮಾರ್ ತೇಲ್ಕೂರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು. pic.twitter.com/BprOo7idpZ

— Basavaraj S Bommai (@BSBommai) January 30, 2022

ದೇಶದ ಅಭಿವೃದ್ಧಿಗೆ ಸಂಕಲ್ಪ: ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ಬಂದಿಲ್ಲ ಎನ್ನುವುದನ್ನು ಅರ್ಥಮಾಡಿಕೊಂಡು, ಸ್ವಾತಂತ್ರ್ಯ ನಂತರದ ದಿನಗಳಲನ್ನು ಅವಲೋಕಿಸಿದರೆ, 75 ವರ್ಷಗಳಲ್ಲಿ ಹಲವಾರು ರಂಗದಲ್ಲಿ ಸಾಧನೆ ಮಾಡಿದ್ದೇವೆ. ಆದರೆ ಸಾಮಾನ್ಯ ಜನ ತಮ್ಮ ಬದುಕನ್ನು, ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಕೆಲಸ ಮಾಡಬೇಕಿದೆ. 75 ವರ್ಷಗಳಲ್ಲಿ ನಾವು ಇನ್ನಷ್ಟು ಕೆಲಸಗಳನ್ನು ಮಾಡಬಹುದಾಗಿತ್ತು ಎನ್ನುವುದು ನಾವು ಆತ್ಮಾವಲೋಕನ ಮಾಡಿಕೊಂಡಾಗ ತಿಳಿಯುತ್ತದೆ. ಅದಕ್ಕಾಗಿ ಪ್ರಧಾನ ಮಂತ್ರಿಗಳು ಆತ್ಮನಿರ್ಭರ್ ಭಾರತ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಧ್ಯೇಯವನ್ನಿಟ್ಟುಕೊಂಡು ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಇಂಧನ, ಶಿಕ್ಷಣ ಆರೋಗ್ಯ ಮುಂತಾದ ಹಲವಾರು ರಂಗಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಅವರ ಮಾರ್ಗದರ್ಶನ ದಲ್ಲಿ ರಾಜ್ಯವನ್ನು ಸಂಪದ್ಭರಿತ ವಾಗಿಸಲು ಹಾಗೂ ಅಭಿವೃದ್ಧಿಯ ಕಡೆಗೆ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಲು ಸಂಕಲ್ಪ ಮಾಡುವ ದಿನ ಇದು ಎಂದರು.

Basavaraj Bommai 2 1

ಟೋಯಿಂಗ್ ಅತಿರೇಕದ ವರ್ತನೆ ಸಲ್ಲದು: ಟೋಯಿಂಗ್ ವಿಚಾರದಲ್ಲಿ ಸಾರ್ವಜನಿಕರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಶುರುವಾಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೋಯಿಂಗ್ ಬಗ್ಗೆ ಈಗಿರುವ ವ್ಯವಸ್ಥೆ ಬಗ್ಗೆ ಪುನರ್ ಪರಿಶೀಲನೆ ಮಾಡಲಾಗುತ್ತಿದೆ. ಇಲಾಖೆಯೇ ಇದನ್ನು ಮಾಡುತ್ತಿತ್ತು, ಈಗ ಖಾಸಗಿ ಯವರಿಗೆ ಗುತ್ತಿಗೆ ನೀಡಲಾಗಿದೆ. ಹಲವಾರು ಘಟನೆಗಳ ಬಗ್ಗೆ ಗಮಣಿಸಲಾಗಿದ್ದು, ಸಾರ್ವಜನಿಕರು ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಆದರೆ ಕಾನೂನಿನ ರಕ್ಷಣೆ ಮಾಡುವವರು ಸಾರ್ವಜನಿಕರೊಂದಿಗೆ ಅತ್ಯಂತ ಸೌಹಾರ್ದಯುತವಾಗಿ ವರ್ತಿಸಬೇಕು. ಅತಿರೇಕದ ವರ್ತನೆ ಸಹಿಸುವುದಿಲ್ಲ. ಈ ಬಗ್ಗೆ ನಾಳೆ ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರು ಹಾಗೂ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಸಭೆ ಕರೆದು ಸಂಪೂರ್ಣವಾಗಿ ಪುನರ್ ಪರಿಶೀಲನೆ ಮಾಡಲು ತೀರ್ಮಾನಿಸಲಾಗಿದೆ. ಹಲವಾರು ಬದಲಾವಣೆಗಳನ್ನು ತಂದು ಜನಸ್ನೇಹಿಯಾಗಿಸಲಿದ್ದೇವೆ ಎಂದರು. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಲಾಬಿ ಆರಂಭಿಸಿದ ವಲಸಿಗ ಶಾಸಕರು

ಜನೀಶ್ ಚಿಕಿತ್ಸೆಗೆ ಸಹಾಯ: ಜನೀಶ್ ಎನ್ನುವ ಮಗುವಿಗೆ ಚಿಕಿತ್ಸೆ ಗಾಗಿ 16 ಕೋಟಿ ಅವಶ್ಯಕತೆ ಇದೆ. ಈ ರೀತಿಯ ಬಹಳಷ್ಟು ಮಕ್ಕಳಿದ್ದು, ಸರ್ಕಾರ ಈ ಬಗ್ಗೆ ಏನು ಕ್ರಮ ಕೈಗೊಂಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಮಂತ್ರಿಗಳು ಈ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆದು, ಈ ಮೊತ್ತ ಏಕೆ ಬೇಕೆನ್ನುವ ಬಗ್ಗೆ ತಿಳಿದು, ಅಗತ್ಯ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು. ಸಾರ್ವಜನಿಕರೂ ಸಹಾಯ ಮಾಡಬೇಕೆಂದು ಮಾಧ್ಯಮಗಳು ಕರೆ ನೀಡಿವೆ. ಸರ್ಕಾರವಾಗಿ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.

Basavaraj Bommai 7

ಚಿತ್ರಮಂದಿರಗಳಲ್ಲಿ ಆಸನ ವ್ಯವಸ್ಥೆ: ಕೋವಿಡ್ ನಿಯಮಗಳನ್ನು ಸಡಿಲಿಕೆ ಮಾಡಿರುವ ಬಗ್ಗೆ ಸಿನಿಮಾದವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಉತ್ತರಿಸಿ, ಸಿನಿಮಾದವರಿಗೆ ಗೃಹ ಸಚಿವನಾಗಿ, ಮುಖ್ಯಮಂತ್ರಿಯಾಗಿ ಬಹಳಷ್ಟು ಸವಲತ್ತುಗಳನ್ನು ನೀಡಲಾಗಿದೆ.ಅವರಿಂದ ಮನವಿ ಪಡೆದು ಆಸನ ವ್ಯವಸ್ಥೆಗಳ ಬಗ್ಗೆ ತಾಂತ್ರಿಕ ತಜ್ಞರ ಸಲಹೆ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

TAGGED:bengaluruMahatma Gandhiಬಸವರಾಜ ಬೊಮ್ಮಾಯಿಬೆಂಗಳೂರುಮಹಾತ್ಮಾ ಗಾಂಧಿಸ್ವಾತಂತ್ರ್ಯ
Share This Article
Facebook Whatsapp Whatsapp Telegram

Cinema news

Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows
kiccha sudeep priya sudeep
ಕಿಚ್ಚನ ಪತ್ನಿಯ ಹುಟ್ಟುಹಬ್ಬ – ಹೊಸ ಪ್ರತಿಭೆಗಳಿಗೆ ಅವಕಾಶ ಘೋಷಣೆ
Cinema Latest Sandalwood Top Stories
vijay karur stampede
ಕರೂರು ಕಾಲ್ತುಳಿತ ಕೇಸಲ್ಲಿ ವಿಜಯ್‌ಗೆ ಶಾಕ್‌; ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್‌
Cinema Latest Main Post South cinema

You Might Also Like

Bomb Threat
Bengaluru City

ಒಂದೇ ದಿನ ರಾಜ್ಯದ 7 ಜಿಲ್ಲೆಗಳಿಗೆ ಹುಸಿ ಬಾಂಬ್ ಬೆದರಿಕೆ

Public TV
By Public TV
2 minutes ago
Uttar Pradesh SIR
Latest

ಉತ್ತರ ಪ್ರದೇಶ SIR ಪ್ರಕಟ; 2.89 ಕೋಟಿ ಮತದಾರರ ಹೆಸರು ಡಿಲೀಟ್‌

Public TV
By Public TV
14 minutes ago
Koppal Gavi Mutt Mirchi Bajji
Districts

ಅಭಿನವ ಗವಿಮಠದ ಜಾತ್ರೆಯಲ್ಲಿ ಮಿರ್ಚಿ ಘಮಲು – ಲಕ್ಷಾಂತರ ಭಕ್ತರಿಗೆ ಪ್ರಸಾದ ರೂಪದಲ್ಲಿ ಬಜ್ಜಿ

Public TV
By Public TV
1 hour ago
Passport Office Bengaluru
Bengaluru City

ಬೆಂಗ್ಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್

Public TV
By Public TV
2 hours ago
SUDHAKAR 1
Bengaluru City

ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಸುಧಾಕರ್‌ ಸೂಚನೆ

Public TV
By Public TV
2 hours ago
Nepal protest
Latest

ಮಸೀದಿ ಧ್ವಂಸ; ಗಡಿ ಮುಚ್ಚಿದ ಭಾರತ – ನೇಪಾಳದಲ್ಲಿ ಅಶಾಂತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?