Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

Belgaum

ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

Public TV
Last updated: December 22, 2021 4:43 pm
Public TV
Share
2 Min Read
basavaraj bommai 6
SHARE

ಬೆಳಗಾವಿ: ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗಕ್ಕೆ ಹೊಂದಿಕೊಳ್ಳುವ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ ಎಂದರು.

basavaraj bommai 1 1

ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ ನಡುವೆ ಇರುವ ಅಂತರವನ್ನು ಕಡಿಮೆಗೊಳಿಸಲು ಎನ್‌ಇಪಿಯನ್ನು ಜಾರಿಗೊಳಿಸಲಾಗಿದೆ. ಇಂದಿನ ಪೀಳಿಗೆ ಯಾವುದೇ ಸವಾಲುಗಳನ್ನು ಆತ್ಮಸ್ಥೈರ್ಯ, ಧೈರ್ಯದಿಂದ ಎದುರಿಸಲು ಜ್ಞಾನದ ಬಲ ಇರಬೇಕು. ಎನ್‌ಇಪಿ ಈ ಜ್ಞಾನದ ಬಲವನ್ನು ನೀಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗೂಗಲ್ ನಂತರ ಇದೀಗ ಇಂಟೆಲ್- ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ

ವಿಶ್ವವಿದ್ಯಾಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಲಿ: ಕಿತ್ತೂರು ರಾಣಿ ಚೆನ್ನಮ್ಮ ಆತ್ಮಸ್ಥೈರ್ಯ, ಧೈರ್ಯದಿಂದ ಹೋರಾಡಿದ ಮೊದಲನೆಯ ಮಹಿಳಾ ಸ್ವತಂತ್ರ ಹೋರಾಟಗಾರ್ತಿ. ರಾಣಿ ಚೆನ್ನಮ್ಮನೇ ಈ ವಿಶ್ವವಿದ್ಯಾಲಯದ ಸ್ಫೂರ್ತಿ. ಈ ವಿಶ್ವವಿದ್ಯಾಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಒಯ್ಯುವ ಬದ್ಧತೆ, ಸ್ಪಷ್ಟತೆ ವಿಶ್ವವಿದ್ಯಾಲಯದ ಪ್ರತಿಯೊಬ್ಬರಿಗೂ ಇರಬೇಕು ಎಂದರು. ಇದನ್ನೂ ಓದಿ: ಅಧಿವೇಶನದಲ್ಲಿ ವಿರೋಧ ಪಕ್ಷದವರು ಚರ್ಚೆಯಿಂದ ಓಡಿ ಹೋದರು: ಜೋಶಿ ವ್ಯಂಗ್ಯ

basavaraj bommai 2 1

ವಿಭಿನ್ನ, ವಿನೂತನ ಪ್ರಯೋಗ ಕಾರ್ಯಕ್ರಮಗಳನ್ನು ರೂಪಿಸಿ, ಸಮಕಾಲೀನ ಸವಾಲುಗಳನ್ನು ಎದುರಿಸುವ ಹಾಗೂ ವೈಚಾರಿಕತೆಯಿಂದ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಕೇಂದ್ರಗಳಾಗಬೇಕು. ಕೇವಲ ಡಿಗ್ರಿ ಪಡೆಯಲು ಸೀಮಿತವಾಗಿರಬಾರದು. ಆಧುನಿಕ ತಂತ್ರಜ್ಞಾನ ಹಾಗೂ ಜ್ಞಾನ ಕ್ಷೇತ್ರದಲ್ಲಿನ ಬದಲಾವಣೆ ಹಾಗೂ ಬೆಳವಣಿಗೆಯ ವೇಗಕ್ಕೆ ಸರಿಸಮಾನವಾದ ಚಿಂತನೆಯನ್ನು ವಿಶ್ವವಿದ್ಯಾಲಯಗಳು ಮಾಡಬೇಕು. ಆವಿಷ್ಕಾರಗಳನ್ನು ಮಾಡುವ ಕೇಂದ್ರವಾಗಬೇಕು. ಸಂಶೋಧನೆಗಳಲ್ಲಿ ಸ್ವಂತಿಕೆ, ಹೊಸತನ ಹಾಗೂ ವಿಭಿನ್ನತೆ ಇರಬೇಕು ಎಂದು ತಿಳಿಸಿದರು.

basavaraj bommai

ತರ್ಕಬದ್ಧ ಚಿಂತನೆಗೆ ಅವಕಾಶ: ವಿಶ್ವವಿದ್ಯಾಲಯಗಳು ತರ್ಕಬದ್ಧ ಚಿಂತನೆಗೆ ಅವಕಾಶ ನೀಡುವ ಜ್ಞಾನದ ಕೇಂದ್ರವಾಗಬೇಕು. ವಿದ್ಯಾರ್ಜನೆಗೆ ಪೂರಕವಾದ ಪರಿಸರ ವಿಶ್ವವಿದ್ಯಾಲಯದಲ್ಲಿ ದೊರೆಯಬೇಕು. ವಿಶ್ವವಿದ್ಯಾಲಯದಲ್ಲಿರುವವರು ತಮ್ಮ ಸೀಮಿತ ಪ್ರಪಂಚದಿಂದ ಹೊರಗೆ ಬರಬೇಕು. ಸಂಶೋಧನೆಗಳನ್ನು ಸಮರ್ಥಿಸಿಕೊಳ್ಳದೆ ಉಳಿದವರು ಅದರ ಉಪಯುಕ್ತತೆಯನ್ನು ನಿರ್ಧರಿಸಲಿ. ವಿಶ್ವವಿದ್ಯಾಲಯಗಳಿಗೆ ಕುಲಪತಿಗಳೆ ಮುಂದಾಳತ್ವ ವಹಿಸುವ ನಾಯಕ. ಅವರು ಇತರರಿಗೆ ಉದಾಹರಣೆಯಾಗಬೇಕು. ಮಾರ್ಗದರ್ಶನ ತೋರಬೇಕು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರಲು ಸರ್ಕಾರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಭರವಸೆ ನೀಡಿದರು.

basavaraj bommai 3 1

ವಿಶ್ವವಿದ್ಯಾಲಯ ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿ : ವಿಶ್ವವಿದ್ಯಾಲಯಕ್ಕೆ ಸುಂದರ ಪರಿಸರ, ರಸ್ತೆ, ಮೂಲಸೌಕರ್ಯಗಳನ್ನು ಒಳಗೊಂಡ ಕಟ್ಟಡವನ್ನು ಒಂದು ವರ್ಷದಲ್ಲಿ ಮುಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಕಟ್ಟಡದ ಪ್ರತಿಯೊಂದು ಕೊಠಡಿಯು ಡಿಜಿಟಲೈಸ್ ಆಗಬೇಕು. ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿಯಂತಿರಬೇಕು ಎಂದು ಸಲಹೆ ನೀಡಿದರು.

basavaraj bommai 4 1

ಇದು ಜ್ಞಾನದ ಶತಮಾನ. ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ. ವಿಶ್ವವಿದ್ಯಾಲಯಗಳ ಸಂಶೋಧನೆಯನ್ನು ಇಡೀ ವಿಶ್ವ ಒಪ್ಪಿಕೊಂಡರೆ ಅದರ ಉಪಯುಕ್ತತೆ ಹೆಚ್ಚುತ್ತದೆ. ವಿಶ್ವವಿದ್ಯಾಲಯದಲ್ಲಿ ಕಳೆದ 10 ವರ್ಷದಲ್ಲಿ ಕೈಗೊಂಡಿರುವ ಪಿಎಚ್.ಡಿ ಸಂಶೋಧನೆ ಹಾಗೂ ಅದರ ಉಪಯುಕ್ತತೆ ಬಗ್ಗೆ ವಿಶ್ಲೇಷಣೆಯನ್ನು ಕೈಗೊಳ್ಳಲು ತಿಳಿಸಿದರು. ಇದನ್ನೂ ಓದಿ: MES ಗಲಭೆಗೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

basavaraj bommai 5 1

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಸಿಎಂ ಅಶ್ವಥ್ ನಾರಾಯಣ, ಶಶಿಕಲಾ ಜೊಲ್ಲೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ ಕವಟಗಿಮಠ, ಅರುಣ ಶಾಹಪೂರ, ಹನಮಂತ ನಿರಾಣಿ, ವಿಧಾನಪರಿಷತ್ ಚುನಾವಣೆಯಲ್ಲಿ ಜಯಶಾಲಿಯಾಗಿರುವ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

TAGGED:Ashwath NarayanBasavaraj BommaibelagaviKittur ChennammaLakshmi HebbalkarNational Education Policyಅಶ್ವತ್ಥನಾರಾಯಣಕಿತ್ತೂರು ರಾಣಿ ಚೆನ್ನಮ್ಮನೂತನ ರಾಷ್ಟ್ರೀಯ ಶಿಕ್ಷಣ ನೀತಿಬಸವರಾಜ ಬೊಮ್ಮಾಯಿಬೆಳಗಾವಿಲಕ್ಷ್ಮಿ ಹೆಬ್ಬಾಳ್ಕರ್
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

bjp jds protest
Bengaluru City

ಅಬಕಾರಿ ಇಲಾಖೆ ಅವ್ಯವಹಾರದ ವಿರುದ್ಧ ‘ದೋಸ್ತಿ’ ಸಮರ; ಸದನದಲ್ಲಿ ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ

Public TV
By Public TV
2 hours ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
2 hours ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
2 hours ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
3 hours ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
3 hours ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?