ಬೆಂಗಳೂರು: ಭಾರೀ ಮಳೆಯಿಂದಾಗಿ ಪೂರ್ಣ ಮನೆ ಹಾನಿಯಾಗಿದ್ದರೆ 1 ಲಕ್ಷ ರೂ. ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಲು ಸೂಚಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾಗಶಃ ಬಿದ್ದ ಮನೆಗಳಿಗೂ ಪರಿಹಾರ ಕೊಡಲು ಸೂಚಿಸಿದ್ದೇವೆ. ಬೆಳೆ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಲಾಗುವುದು. ಜೊತೆಗೆ ಇಂದು ಕೋಲಾರ ಜಿಲ್ಲೆ ಹಾಗೂ ಹೊಸಕೋಟೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ತಿರುಪತಿಯಲ್ಲಿ ಆಣೆಕಟ್ಟು ಬಿರುಕು – ಜನರಲ್ಲಿ ಹೆಚ್ಚಿದ ಆತಂಕ
ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಬಂಧಪಟ್ಟ ಇಲಾಖೆಗಳ ಸಚಿವರು ಭೇಟಿ ನೀಡಬಹುದು. ಉಸ್ತುವಾರಿ ಸಚಿವರಿಗೆ ಆ ಅಧಿಕಾರ ನೀಡಿಲ್ಲ. ಮುಖ್ಯಮಂತ್ರಿಗಳು ಬೇಕಾದರೆ ಸ್ಥಳಗಳಿಗೆ ತೆರಳಿ ವೀಕ್ಷಣೆ ನಡೆಸಬಹುದು ಎಂಬ ಸೂಚನೆ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಾರ್ಟ್ಸ್ ಧರಿಸಿದ್ದಕ್ಕೆ ಬ್ಯಾಂಕ್ ಒಳಗೆ ಬಿಡದ SBI ಸಿಬ್ಬಂದಿ
ಗದಗ ಜಿಲ್ಲೆಯ ಹಾಲಕೇರಿ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ. ಸಂಗನಬಸವ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಅವರ ಅಂತಿಮ ನಮನ ಸಲ್ಲಿಸಲು ಹೋಗುತ್ತಿದ್ದೇನೆ. ಆ ಭಾಗದಲ್ಲಿ ಅತ್ಯಂತ ಪ್ರಭಾವಿ ಶ್ರೀಗಳಾಗಿದ್ದರು. ನಮಗೆ ಮಾರ್ಗದರ್ಶನ ಮಾಡುತ್ತಿದ್ದರು ಎಂದು ಸ್ಮರಿಸಿದರು.