Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನ ಸಮಗ್ರ ತನಿಖೆಯಾಗಲಿ: ಬೊಮ್ಮಾಯಿ

Public TV
Last updated: March 10, 2025 10:17 pm
Public TV
Share
4 Min Read
basavaraj bommai
SHARE

-ಸರ್ಕಾರದ ತಪ್ಪು ಮುಚ್ಚಿಕೊಳ್ಳಲು `ಗ್ರೇಟರ್ ಬೆಂಗಳೂರು’; ಸಂಸದ ಕಿಡಿ

ನವದೆಹಲಿ: ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು. ನಮ್ಮ ಅವಧಿಯಲ್ಲಿ ರನ್ಯಾ ರಾವ್ ನಿರ್ದೇಶಕಿಯಾದ ಕಂಪನಿಗೆ ಜಮೀನು ನೀಡಿರುವುದು ಮುಖ್ಯಮಂತ್ರಿಯ ಹಂತದವರೆಗೂ ಬಂದಿರುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿರಾ ಕೈಗಾರಿಕಾ ಪ್ರದೇಶದಲ್ಲಿ ಮೆ. ಕ್ಸಿರೋಡಾ ಇಂಡಿಯಾ ಪ್ರೈ. ಲಿಮಿಟೆಡ್ ಸಂಸ್ಥೆಗೆ ಜಮೀನು ನೀಡಿದ್ದೇವೆ. ರನ್ಯಾ ರಾವ್ ಕಂಪನಿಯ ನಿರ್ದೇಶಕಿಯಾಗಿದ್ದಾರೆ. ಯಾರೇ ಉದ್ದಿಮೆ ಮಾಡುತ್ತೇವೆ ಎಂದು ಬಂದರೂ ನಾವು ಅವರಿಗೆ ಅಗತ್ಯ ಕರಾರುಗಳನ್ನು ಹಾಕುತ್ತೇವೆ. ಲ್ಯಾಂಡ್ ಆಡಿಟ್ ಕಮಿಟಿ ಅಂತ ಇರುತ್ತದೆ. ಆ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿ ಸೇರಿ ಹಿರಿಯ ಅಧಿಕಾರಿಗಳು ಇರುತ್ತಾರೆ. ಅವರು ಸಂಬಂಧಪಟ್ಟ ಕಂಪನಿಗೆ ಎಷ್ಟು ಜಮೀನು ಬೇಕು. ಯಾವ ಭಾಗದಲ್ಲಿ ಜಮೀನು ಬೇಕಿದೆ ಎನ್ನುವುದನ್ನು ಪರಿಶೀಲಿಸಿ ಶಿಫಾರಸ್ಸು ಮಾಡುತ್ತಾರೆ ಎಂದರು. ಇದನ್ನೂ ಓದಿ: ಬಿಹಾರದ ಆಭರಣ ಮಳಿಗೆಯಲ್ಲಿ ಫಿಲ್ಮಿಸ್ಟೈಲ್‌ನಲ್ಲಿ ದರೋಡೆ – 8 ನಿಮಿಷದಲ್ಲಿ 25 ಕೋಟಿ ಚಿನ್ನಾಭರಣ ದರೋಡೆ!

500 ಕೋಟಿ ರೂ.ಗಳವರೆಗಿನ ಯೋಜನೆಗಳಿಗೆ ಸಂಬಂಧಪಟ್ಟ ಮಂತ್ರಿಗಳ ಹಂತದಲ್ಲಿ ತೀರ್ಮಾನ ಆಗುತ್ತದೆ. ಮುಖ್ಯಮಂತ್ರಿಯವರೆಗೂ ಬರುವುದಿಲ್ಲ ನನ್ನ ಹಂತದವರೆಗೂ ಅದು ಬಂದಿಲ್ಲ. ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಸಿಂಗಲ್ ವಿಂಡೊ ಪ್ರೊಸಿಡಿಂಗ್ ಮೂಲಕ ಹಂಚಿಕೆ ಮಾಡುತ್ತಾರೆ. ಅವರಿಗೆ ಜಮೀನು ಹಂಚಿಕೆ ಮಾಡಿದ ಮೇಲೆ ಹಣ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಅವರು ಹಣ ಕಟ್ಟದಿರುವುದರಿಂದ ಅವರಿಗೆ ಭೂಮಿ ಹಂಚಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮೋದಿ ಅವಧಿಯಲ್ಲಿ ರೈಲ್ವೆ ವಲಯ ಭಾರೀ ಅಭಿವೃದ್ಧಿ ಹೊಂದಿದೆ: ಹೆಚ್‍ಡಿಡಿ

ಉದ್ದಿಮೆ ಸ್ಥಾಪಿಸಲು ಹಲವಾರು ಅರ್ಜಿಗಳು ಬಂದಾಗ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಉದ್ಯಮಗಳಿಗೆ ಜಮೀನು ನೀಡುತ್ತೇವೆ. ಈಗಿನ ಸರ್ಕಾರವೂ ಕೂಡ ಲಕ್ಷಾಂತರ ಕೋಟಿ ರೂ. ಜಮೀನು ಹಂಚಿಕೆ ಮಾಡಿರುತ್ತದೆ. ಯಾರೋ ಮುಂದೆ ಅಪರಾಧ ಮಾಡುತ್ತಾರೆ ಎಂದು ಯಾರಿಗೂ ಗೊತ್ತಿರುವುದಿಲ್ಲ. ಅದನ್ನು ಊಹೆ ಮಾಡಲು ಆಗುವುದಿಲ್ಲ. ನಟಿ ದುಬೈನಿಂದ ಅಕ್ರಮವಾಗಿ ಚಿನ್ನ ತಂದಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲ ಆಯಾಮದಿಂದಲೂ ತನಿಖೆ ನಡೆಯಲಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು. ಇದನ್ನೂ ಓದಿ: ರಂಜಾನ್ ಟೈಮಲ್ಲೇ ಗುಲ್ಮಾರ್ಗ್‌ ಫ್ಯಾಷನ್ ಶೋ – 24 ಗಂಟೆಗಳಲ್ಲಿ ವರದಿ ನೀಡುವಂತೆ ಒಮರ್ ಅಬ್ದುಲ್ಲಾ ಆದೇಶ

ಮಾಧ್ಯಮಗಳಲ್ಲಿ ಇಬ್ಬರು ಸಚಿವರು ಇದರ ಹಿಂದೆ ಇದ್ದಾರೆ ಎಂದು ತೋರಿಸಲಾಗುತ್ತಿದೆ. ಈ ಬಗ್ಗೆ ತನಿಖೆ ಆಗಬೇಕು. ಇದು ಒಂದು ಬಾರಿ ನಡೆದಿರುವಂತೆ ಕಾಣಿಸುತ್ತಿಲ್ಲ. ಇದಕ್ಕೆ ಬೆಂಬಲವಾಗಿ ಇರುವುವವರ ಬಗ್ಗೆ ಸಮಗ್ರವಾಗಿ, ಆಳವಾಗಿ ತನಿಖೆಯಾಗಲಿ. ಅಧಿಕಾರಿಗಳ ಪಾತ್ರ ಇಲ್ಲದೆ ಇಷ್ಟು ದೊಡ್ಡ ಅಕ್ರಮ ನಡೆಯಲು ಸಾಧ್ಯವಿಲ್ಲ. ಇದರ ಹಿಂದಿರುವ ಜಾಲವನ್ನು ಸಂಪೂರ್ಣವಾಗಿ ಭೇದಿಸಬೇಕು. ಸಿಬಿಐ ತನಿಖೆಯಿಂದ ಯಾರ ಪಾತ್ರ ಇದೆ ಎನ್ನುವುದು ಹೊರ ಬರುತ್ತದೆ. ಹೀಗಾಗಿ ಇದರ ಬಗ್ಗೆ ಆಳವಾಗಿ ತನಿಖೆಯಾದರೆ ಎಲ್ಲ ಸತ್ಯವೂ ಹೊರ ಬರಲಿದೆ ಎಂದರು. ಇದನ್ನೂ ಓದಿ: ಬಿಬಿಎಂಪಿ 2ಕ್ಕಿಂತ ಹೆಚ್ಚು ಹೋಳಾಗೋದು ಫಿಕ್ಸ್ – ಸದ್ಯದಲ್ಲೇ `ಗ್ರೇಟರ್ ಬೆಂಗಳೂರು’ ಆಡಳಿತ ಕಾಯ್ದೆ ಜಾರಿಗೆ ಸಿದ್ಧತೆ

ತಪ್ಪು ಮುಚ್ಚಿಕೊಳ್ಳಲು ಗ್ರೇಟರ್ ಬೆಂಗಳೂರು
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಜಾರಿಗೆ ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು, ಬೆಂಗಳೂರು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಸ್ತೆಗಳ ರಿಪೇರಿಯಿಂದ ಹಿಡಿದು ಹೊಸ ರಸ್ತೆ ನಿರ್ಮಾಣ ಮಾಡುವುದರಿಂದ ಹಿಡಿದು, ಚರಂಡಿ ನಿರ್ವಹಣೆ ಮಾಡುವುದನ್ನು ಸರಿಯಾಗಿ ಮಾಡಿಲ್ಲ. ಸುಮ್ಮನೆ 2 ವರ್ಷ ಬ್ರಾಂಡ್ ಬೆಂಗಳೂರು ಎಂದು ಅರ್ಜಿ ತೆಗೆದುಕೊಂಡು ಎಲ್ಲಿ ಹಾಕಿದ್ದಾರೋ ಗೊತ್ತಿಲ್ಲ. ಬಜೆಟ್‌ನಲ್ಲಿಯೂ ಕೂಡ ಕಾರ್ಯಸಾಧುವಾಗುವಂತೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ ಕಿಡಿಕಾರಿದರು. ಇದನ್ನೂ ಓದಿ: ತಂಬಾಕು, ಮದ್ಯದ ಜಾಹೀರಾತು ನಿಯಂತ್ರಿಸಿ – ಬಿಸಿಸಿಐ ಅಧ್ಯಕ್ಷರಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ

ನಮ್ಮ ಕಾಲದಲ್ಲಿ ತೀರ್ಮಾನ ಮಾಡಿರುವ ವಿಶ್ವ ಬ್ಯಾಂಕಿನಿಂದ 1700 ಕೋಟಿ ರೂ. ಸಾಲ ನೀಡುವ ಯೋಜನೆ ಈಗ ಅಂತಿಮವಾಗಿದೆ. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ದೇವರು ಬಂದರೂ ಇದನ್ನು ಸರಿ ಮಾಡಲು ಸಾಧ್ಯವಿಲ್ಲ ಎಂಬ ಸರ್ಕಾರದ ಧೋರಣೆಯಿದೆ. ಬೆಂಗಳೂರಿನ ವಿಸ್ತರಣೆ ಎಷ್ಟಿದೆ ಅಷ್ಟೇ ಇದೆ. ಈಗಾಗಲೇ ವಲಯಗಳಿಗೊಬ್ಬರು ಮುಖ್ಯ ಇಂಜಿನಿಯರ್ ಇದ್ದಾರೆ. ಈಗ ಎಲ್ಲ ವಲಯಗಳಿಗೆ ಆಯುಕ್ತರನ್ನು ಮಾಡಲು ಹೊರಟಿದ್ದಾರೆ. ಅದು ಪರಿಹಾರವಲ್ಲ, ಅದರ ಬದಲು ಯೋಜನಾಬದ್ಧವಾಗಿ ಹಣಕಾಸು ಒದಗಿಸಬೇಕು. ನಮ್ಮ ಕಾಲದಲ್ಲಿ 2 ಉಪನಗರಗಳನ್ನು ಮಾಡಲು ಯೋಚಿಸಿದ್ದೇವು. ಅವುಗಳನ್ನು ಮಾಡಿ ಸಂಪರ್ಕ ಕಲ್ಪಿಸಿ, ಅದರ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಗುಜರಾತ್‌ | 5 ವರ್ಷದ ಬಾಲಕಿಯ ನರಬಲಿ – ದೇವಾಲಯದ ಮೆಟ್ಟಿಲುಗಳ ಮೇಲೆ ರಕ್ತ ಅರ್ಪಿಸಿದ ಪಾಪಿ!

ಪರಿಷ್ಕರಣೆಗೆ ಅವಸರ ಬೇಡ
ಇದೇ ವೇಳೆ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಪರಿಷ್ಕರಣೆ ಮಾಡಲು ಮುಂದಾಗಿರುವ ಕುರಿತು ಅವರು ಪ್ರತಿಕ್ರಿಯಿಸಿದರು. ರೇಷನ್ ಕಾರ್ಡ್ ಪರಿಷ್ಕರಣೆ ಮಾಡುವ ಮೊದಲು ರಾಜ್ಯ ಸರ್ಕಾರ ಅವಸರದ ತೀರ್ಮಾನ ಮಾಡಬಾರದು. ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಎಲ್ಲಾ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಮೊದಲು 2 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿ, ಅಲ್ಲಿ ಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ನಂತರ ರಾಜ್ಯಾದ್ಯಂತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ನಟಿ ರನ್ಯಾಗೆ KIADB ಜಾಗ ಕೊಟ್ಟಿದ್ದೇ ಬಿಜೆಪಿ, ಈಗ ಕಾಂಗ್ರೆಸ್ ಮೇಲೆ ಆರೋಪ ಮಾಡೋ ನೈತಿಕತೆ ಅವರಿಗಿಲ್ಲ: ಹೆಚ್.ಸಿ ಬಾಲಕೃಷ್ಣ

TAGGED:basavarj bommaibjpgold smugglingnewdelhiRanya Raoಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನವದೆಹಲಿಬಸವರಾಜ್ ಬೊಮ್ಮಾಯಿರನ್ಯಾ ರಾವ್‌
Share This Article
Facebook Whatsapp Whatsapp Telegram

Cinema News

Anushree
ಅನುಶ್ರೀ-ರೋಷನ್‌ ಹಳದಿ ಶಾಸ್ತ್ರದ ಫೋಟೋಸ್‌ ವೈರಲ್‌ – ಆ.28ರಂದು ಹಸೆಮಣೆ ಏರಲಿರುವ ನಿರೂಪಕಿ
Bengaluru City Cinema Latest Main Post Sandalwood
radhika pandit ganesh chaturthi
ತವರು ಮನೆಯಲ್ಲಿ ರಾಧಿಕಾ ಪಂಡಿತ್ ಗೌರಿ-ಗಣೇಶ ಹಬ್ಬ; ಕೊಂಕಣಿ ಖಾದ್ಯದ ಲಿಸ್ಟ್ ಅಬ್ಬಬ್ಬಾ!
Cinema Latest Sandalwood Top Stories
Ram Charan
1,000 ಡ್ಯಾನ್ಸರ್ಸ್ ಜೊತೆ ಮೈಸೂರಲ್ಲಿ ರಾಮ್ ಚರಣ್ ಸಿನಿಮಾ ಶೂಟಿಂಗ್
Cinema Latest Mysuru South cinema
Upendra
ಉಪ್ಪಿ ಮನೆಯಲ್ಲಿ ಗಣೇಶ ಹಬ್ಬ ಭಲೇ ಜೋರು
Bengaluru City Cinema Latest Sandalwood
Gowri 3
ಹೀರೋಯಿನ್ ಆಗಿ ಎಂಟ್ರಿ ಕೊಡೋಕೆ ರೆಡಿಯಾಗಿದ್ದಾರೆ ಹಿರಿಯ ನಟಿ ಶೃತಿ ಪುತ್ರಿ
Cinema Latest Sandalwood

You Might Also Like

pramoda devi wadiyar
Districts

ಚಾಮುಂಡೇಶ್ವರಿ ದೇವಸ್ಥಾನ ಹಿಂದೂ ದೇಗುಲವಲ್ಲದೇ ಇದ್ದಿದ್ರೆ ಮುಜರಾಯಿ ವ್ಯಾಪ್ತಿಗೆ ತರುತ್ತಿರಲಿಲ್ಲ – ಪ್ರಮೋದಾ ದೇವಿ ಒಡೆಯರ್‌

Public TV
By Public TV
1 hour ago
Commonwealth Games
Latest

2030ರ ಕಾಮನ್‌ವೆಲ್ತ್ ಗೇಮ್ಸ್‌ನ ಹರಾಜು ಪ್ರಕ್ರಿಯೆಗೆ ಕೇಂದ್ರ ಅಸ್ತು

Public TV
By Public TV
1 hour ago
Gadag Public TV Belaku Impact
Districts

ಗದಗದ ಬಡ ಕುಟುಂಬಕ್ಕೆ `ಪಬ್ಲಿಕ್ ಬೆಳಕು’ – ಸಂಪೂರ್ಣ ಮನೆ ದುರಸ್ತಿ ಮಾಡಿಸಿಕೊಟ್ಟ ಉಸಿರು ಫೌಂಡೇಶನ್

Public TV
By Public TV
2 hours ago
Rahul Gandhi 3
Latest

ಗುಜರಾತ್‌ನಲ್ಲಿ ಹೆಸರೇ ಕೇಳದ ಪಕ್ಷಗಳಿಗೆ 4,300 ಕೋಟಿ ದೇಣಿಗೆ – ರಾಗಾ ಮತ್ತೊಂದು ಬಾಂಬ್‌

Public TV
By Public TV
3 hours ago
J And K Rain
Latest

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ – 2 ದಿನಗಳಲ್ಲಿ 41 ಮಂದಿ ಸಾವು

Public TV
By Public TV
3 hours ago
road cave chamarajapete
Bengaluru City

ಬೆಂಗಳೂರಲ್ಲಿ ಸುರಿದ ಮಳೆಯಿಂದ ಕಳಪೆ ಕಾಮಗಾರಿ ಬಯಲು – ಚಾಮರಾಜಪೇಟೆಯಲ್ಲಿ 50 ಮೀಟರ್ ಉದ್ದದ ರಸ್ತೆ ಕುಸಿತ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?