Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ CM ಸೇರಿ ಬಿಜೆಪಿಯ ಹಿರಿಯ ಸಚಿವರೆಲ್ಲರೂ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ CM ಸೇರಿ ಬಿಜೆಪಿಯ ಹಿರಿಯ ಸಚಿವರೆಲ್ಲರೂ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ

Bengaluru City

ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ CM ಸೇರಿ ಬಿಜೆಪಿಯ ಹಿರಿಯ ಸಚಿವರೆಲ್ಲರೂ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ

Public TV
Last updated: November 17, 2022 3:34 pm
Public TV
Share
4 Min Read
Siddaramaiah
SHARE

ಬೆಂಗಳೂರು: ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

BASAVARAJ BOMMAI 10

ಟ್ವೀಟ್‍ನಲ್ಲಿ ಏನಿದೆ?
“ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು. ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಬಿಜೆಪಿ (BJP) ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು ಬಿಜೆಪಿಯ ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳೀಯವಾಗಿರಲಾರದು. ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ. ಇದನ್ನೂ ಓದಿ: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಮತ ಮಾಹಿತಿಗೆ ಕನ್ನ: ಕಾಂಗ್ರೆಸ್ ಹೊಸ ಬಾಂಬ್

BBMP

ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗದೆ ಇಂತಹದ್ದೊಂದು ಹಗರಣ ನಡೆಸಲು ಸಾಧ್ಯವಿಲ್ಲ, ಅಧಿಕಾರಿಗಳು ಸ್ವಇಚ್ಚೆಯಿಂದ ಇಷ್ಟೊಂದು ಬೇಜವಾಬ್ದಾರಿಯಿಂದ ನಡೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಯವರಿಂದ ಹಿಡಿದು ಬಿಜೆಪಿ ಪಕ್ಷದ ಹಿರಿಯ ಸಚಿವರೆಲ್ಲರೂ (Ministers) ಭಾಗಿಯಾಗಿಯೇ ಈ ಕೆಲಸ ಮಾಡಿದ್ದಾರೆ. ‘ಮೇಲಿನವರ’ ರಕ್ಷಣೆ ಇಲ್ಲದೆ, ಯಾವುದೇ ಪೂರ್ವಪರ ಪರಿಶೀಲನೆ ನಡೆಸದೆ ಮಹಾನಗರ ಪಾಲಿಕೆ “ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡುವಂತೆ ಅನುಮತಿ ನೀಡಲು ಹೇಗೆ ಸಾಧ್ಯ? ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾರರ ಮಾಹಿತಿ ಸಂಗ್ರಹದ ಕೆಲಸವನ್ನು ಚುನಾವಣಾ ಆಯೋಗ ಮಾಡಬೇಕಾಗಿದ್ದು, ಇದನ್ನು ಖಾಸಗಿ ಸಂಸ್ಥೆಗೆ ಒಪ್ಪಿಸುವುದು ಅಪರಾಧವಾಗಿದೆ. ಬಿಬಿಎಂಪಿಯ ಅಧಿಕಾರಿಗಳೇ ಎಂದು ತಪ್ಪಾಗಿ ತಿಳಿದು ಮತದಾರರು ವೈಯಕ್ತಿಕ ಮಾಹಿತಿಯನ್ನು ನೀಡಿದ್ದಾರೆ. ಇದು ವಿಶ್ವಾಸ ದ್ರೋಹವಾಗಿದೆ.

BJP 2

ಚಿಲುಮೆ ಸಂಸ್ಥೆಯ ಮಾಲೀಕ ಕೃಷ್ಣಪ್ಪ ರವಿಕುಮಾರ್ ಎಂಬವರು ಈ ಹಗರಣದ ರೂವಾರಿಯಾಗಿ ಮೇಲ್ನೋಟಕ್ಕೆ ಕಾಣಿಸಿದರೂ ಇದರ ಹಿಂದೆ ಬಿಜೆಪಿ ಸರ್ಕಾರದ ಉನ್ನತ ಸ್ಥಾನದಲ್ಲಿರುವವರ ಕೈವಾಡ ಖಂಡಿತ ಇದೆ. ಈ ಬಗ್ಗೆ ತನಿಖೆ ಮಾಡಿದರೆ ಮಾತ್ರ ಸತ್ಯ ಬಯಲಾಗಲು ಸಾಧ್ಯ. ಯಾವುದೋ ಒಂದು ಸಂಸ್ಥೆ ಅರ್ಜಿ ನೀಡಿ ತಾವು ಮತದಾರರನ್ನು ಜಾಗೃತಗೊಳಿಸುವ ಮತ್ತು ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯವನ್ನು ಉಚಿತವಾಗಿ ಮಾಡುವುದಾಗಿ ತಿಳಿಸಿದಾಗಲೇ ಸಂಸ್ಥೆಯ ಉದ್ದೇಶದ ಬಗ್ಗೆ ಸಂಶಯ ಮೂಡಬೇಕಿತ್ತು. ಹೀಗಿದ್ದರೂ 20 ಆಗಸ್ಟ್ 2022 ರಂದು ಬಿಬಿಎಂಪಿ ಆಯುಕ್ತರು ಅನುಮತಿ ನೀಡಿದ್ದಾರೆ. ಜಾಹೀರಾತು ನೀಡದೆ, ಟೆಂಡರ್ ಕರೆಯದೆ ಬಿಬಿಎಂಪಿ (BBMP) ಒಂದು ಖಾಸಗಿ ಕಂಪನಿಗೆ ಈ ಕಾರ್ಯವನ್ನು ನೀಡಲು ಹೇಗೆ ಸಾಧ್ಯ? ಅನುಮತಿ ನೀಡುವಾಗ ಸಂಸ್ಥೆಯ ಹಿನ್ನೆಲೆಯನ್ನು ಯಾಕೆ ಪರಿಶೀಲಿಸಿಲ್ಲ? ಉಚಿತ ಸೇವೆ ನೀಡುವ ಉದ್ದೇಶದ ಹಿನ್ನೆಲೆಯನ್ನು ಯಾಕೆ ತಿಳಿದುಕೊಂಡಿಲ್ಲ? ಚಿಲುಮೆ ಕಂಪನಿಯವರು ಬಿಬಿಎಂಪಿ ಮೂಲಕ ತಮ್ಮ ನೌಕರರಿಗೆ ಬೂತ್ ಮಟ್ಟದ ಅಧಿಕಾರಿ ಎಂಬ ಗುರುತಿನ ಚೀಟಿ ನೀಡಿದ್ದೇ ಅಕ್ರಮವಾಗಿದೆ. ಕಾನೂನಿನ ಪ್ರಕಾರ ಸರ್ಕಾರಿ, ಅರೆ-ಸರ್ಕಾರಿ ಹಾಗೂ ನಿವೃತ್ತ ಸರ್ಕಾರಿ ನೌಕರರಲ್ಲದವರು ಬೂತ್ ಲೆವೆಲ್ ಆಫೀಸರ್ ಆಗಲು ಅವಕಾಶ ಇಲ್ಲ. ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣ ಬಯಲಾಗಿರುವುದು ಗೊತ್ತಾದ ಕೂಡಲೇ ಬಿಬಿಎಂಪಿಯು ನಿಬಂಧನೆಗಳ ಉಲ್ಲಂಘನೆಯ ಕಾರಣ ನೀಡಿ 2022ರ ನ.16ರಂದು ಖಾಸಗಿ ಸಂಸ್ಥೆಗೆ ನೀಡಿರುವ ಗುತ್ತಿಗೆ ಆದೇಶವನ್ನು ರದ್ದು ಮಾಡಿದ್ದರೂ, ರದ್ದತಿಗೆ ನಿರ್ದಿಷ್ಟ ಕಾರಣ ನೀಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಹೊಂಬಾಳೆ ಸಂಸ್ಥೆಗೂ ಚಿಲುಮೆಗೂ ಸಂಬಂಧ ಇಲ್ಲ: ಕೈ ಆರೋಪಕ್ಕೆ ಅಶ್ವಥ್ ನಾರಾಯಣ್ ತಿರುಗೇಟು

RANGAPPA 1

ಚಿಲುಮೆ ಸಂಸ್ಥೆಯ ಜೊತೆಗಿನ ಒಪ್ಪಂದವನ್ನು ರದ್ದುಮಾಡಿಕೊಂಡಿರುವ ಸಂದರ್ಭದಲ್ಲಿ ಈ ವರೆಗೆ ಅವರು ಸಂಗ್ರಹಿಸಿರುವ ಮಾಹಿತಿಯನ್ನು ಯಾಕೆ ಪಡೆದುಕೊಂಡಿಲ್ಲ? ಸಂಗ್ರಹಿಸಿದ ಮಾಹಿತಿಯನ್ನು ಬಿಬಿಎಂಪಿಗೆ ನೀಡಿದ್ದಾರೆಯೇ? ಬಿಬಿಎಂಪಿ ಅದನ್ನು ಹೇಗೆ ಬಳಸಿಕೊಂಡಿದೆ? ಸದ್ಯಕ್ಕೆ ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆ ಬೆಂಗಳೂರು ಮಹಾನಗರಕ್ಕಷ್ಟೇ ಸೀಮಿತವಾಗಿದ್ದರೂ ಶೀಘ್ರದಲ್ಲಿಯೇ ಇದನ್ನು ಬೇರೆ ಜಿಲ್ಲೆಗಳಿಗೂ ವಿಸ್ತರಿಸುವ ಯೋಚನೆ ಇತ್ತಂತೆ. ಈ ಬಗ್ಗೆಯೂ ತನಿಖೆ ನಡೆಯಬೇಕು. 40% ಭ್ರಷ್ಟಾಚಾರ ಮತ್ತು ಆಂತರಿಕ ಬಿಕ್ಕಟ್ಟಿನಲ್ಲಿ ಮುಳುಗಿಹೋಗಿರುವ ಬಿಜೆಪಿ ಸರ್ಕಾರದ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ವಿಶ್ವಾಸವನ್ನು ಕಳೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ವಾಮಮಾರ್ಗದಿಂದ ಗೆಲ್ಲಲು ಸಂಚು ಹೂಡಿದ್ದಾರೆ. ಇದರಲ್ಲಿ ಮುಖ್ಯಮಂತ್ರಿಗಳು ಮಾತ್ರವಲ್ಲ ಬಿಜೆಪಿ ಪಕ್ಷವೇ ಶಾಮೀಲಾಗಿದೆ. ಇಂತಹ ಹಗರಣಗಳಿಂದ ಜನತೆ ಚುನಾವಣಾ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳಲಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಕೇಂದ್ರ ಚುನಾವಣಾ ಆಯೋಗ ತಕ್ಷಣ ಮಧ್ಯಪ್ರವೇಶಿಸಿ ತನಿಖೆಯಲ್ಲಿ ಸರ್ಕಾರದ ನೀಡಬೇಕು. ಬೆಂಗಳೂರು ಮಹಾನಗರಪಾಲಿಕೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಈ ಹಗರಣವನ್ನು ನಡೆಸಿರುವಂತೆ ಮೇಲ್ನೊಟಕ್ಕೆ ಕಾಣುತ್ತಿದ್ದರೂ ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಇಡೀ ರಾಜ್ಯಕ್ಕೆ ಈ ಆಪರೇಷನ್ ವಿಸ್ತರಿಸುವ ದುರುದ್ದೇಶ ಇದ್ದಂತಿದೆ. ಇದನ್ನೂ ಓದಿ: ಮತ ಕನ್ನ ಆರೋಪ- ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾದ ಬಿಬಿಎಂಪಿ

ಮುಖ್ಯಮಂತ್ರಿ ಬೊಮ್ಮಾಯಿ ಬಿಬಿಎಂಪಿ ಆಯುಕ್ತರು ಹಾಗೂ ಇತರರ ವಿರುದ್ಧ ಇಂದೇ ದೂರು ದಾಖಲಿಸುತ್ತೇವೆ. ಈ ಕೂಡಲೇ ಬಸವರಾಜ ಬೊಮ್ಮಾಯಿ ಅವರನ್ನು ಬಂಧಿಸಬೇಕು. ಒಂದು ವೇಳೆ ಅವರ ವಿರುದ್ಧ ಎಫ್‍ಐಆರ್ (FIR) ದಾಖಲಿಸದಿದ್ದರೆ ಮುಂದಿನ ಕ್ರಮವನ್ನು ನಾವು ಕೈಗೊಳ್ಳುತ್ತೇವೆ. ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಿಸುವ ಈ ರಾಜಕೀಯ ಸಂಚನ್ನು ಬಯಲಿಗೆಳೆಯುವ ಮೂಲಕ ಮಾಧ್ಯಮ ಧರ್ಮವನ್ನು ಎತ್ತಿಹಿಡಿದರುವ ಮಾಧ್ಯಮ ಸಂಸ್ಥೆಗಳಿಗೆ ಅಭಿನಂದನೆಗಳು. ಈ ಸಂಸ್ಥೆಗಳ ಕಾರ್ಯ ಎಲ್ಲ ಮಾಧ್ಯಮ ಸಂಸ್ಥೆಗಳಿಗೆ ಮಾದರಿಯಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು @BJP4Karnataka ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳಿಯವಾಗಿರಲಾರದು. ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ. 4/19#OperationVoter

— Siddaramaiah (@siddaramaiah) November 17, 2022

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpCorrupt Electoral Practiceministerssiddaramaiahಬಸವರಾಜ ಬೊಮ್ಮಾಯಿಬಿಜೆಪಿಬಿಬಿಎಂಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
58 seconds ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
8 minutes ago
AMITSHAH 3
Latest

ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರು, 80% ಆದಾಯ ಚಾಲಕರಿಗೆ: ಅಮಿತ್‌ ಶಾ

Public TV
By Public TV
13 minutes ago
Mantralaya HD Kumaraswamy
Districts

ಗುರುವೈಭವೋತ್ಸವ – ತಿರುಮಲ ತಿರುಪತಿ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ, ಹೆಚ್‌ಡಿಕೆ ದಂಪತಿ ಭಾಗಿ

Public TV
By Public TV
17 minutes ago
SATISH JARKIHOLI 1
Latest

ನಾವ್ಯಾರೂ ಸಿಎಂ ರೇಸ್‌ನಲ್ಲಿ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
43 minutes ago
Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?