Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹೋಟೆಲ್‍ಗಳಿಗೆ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿ: ಬೆಸ್ಕಾಂ ಭರವಸೆ

Public TV
Last updated: May 24, 2022 8:37 pm
Public TV
Share
2 Min Read
bescom
SHARE

ಬೆಂಗಳೂರು: ಹೋಟೆಲ್ ಮತ್ತು ಫಲಹಾರ ಮಂದಿರಗಳಿಗೆ ಕೋವಿಡ್-19 ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿಯನ್ನು ಪ್ರವಾಸೋದ್ಯಮ ಇಲಾಖೆಯಡಿ ನೋಂದಣಿಯಾಗಿರುವ ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ಹೋಟೆಲ್‍ಗಳಿಗೆ ನೀಡಲು ಬೆಸ್ಕಾಂ ಸಮ್ಮತಿಸಿದೆ.

ಬೃಹತ್ ಬೆಂಗಳೂರು ಹೋಟೆಲ್‍ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ನೇತೃತ್ವದ ಸಂಘ ಪದಾಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆದಿದೆ. ಈ ವೇಳೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ.ರಾಜೇಂದ್ರ ಚೋಳನ್ ಅವರು, ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿ ಆಗಿರುವ ಹೋಟೆಲ್ ಮತ್ತು ಫಲಹಾರ ಮಂದಿರಗಳ ವಿವರಗಳನ್ನು ವಲಯವಾರು ನೀಡಿದ್ದಲ್ಲಿ ಏಪ್ರಿಲ್ 2021 ರಿಂದ ಜೂನ್ 2021 ರ ಅವಧಿಯವರೆಗಿನ ನಿಗದಿತ ವಿದ್ಯುತ್ ಶುಲ್ಕದ ವಿನಾಯಿತಿಯನ್ನು ಪಡೆಯಬಹುದು ಭರವಸೆ ಕೊಟ್ಟರು. ಇದನ್ನೂ ಓದಿ: ಗಿಡ ನೆಡುವುದರ ಜೊತೆಗೆ ಸಂರಕ್ಷಿಸಿ: ರಾಜ್ಯಪಾಲರ ಕರೆ 

bescom 1

ಕೋವಿಡ್ ಹಿನ್ನೆಲೆ ಹೋಟೆಲ್ ಮತ್ತು ಫಲಹಾರ ಮಂದಿರಗಳಿಗೆ 3 ತಿಂಗಳ ಕಾಲ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿ ನೀಡಿ ರಾಜ್ಯ ಸರ್ಕಾರ 2021 ಆಗಸ್ಟ್ 16 ರಂದು ಆದೇಶಿಸಿತ್ತು. ನಿಗದಿತ ವಿದ್ಯುತ್ ಶುಲ್ಕದ ವಿನಾಯಿತಿಗೆ ಸಂಬಂಧಿಸಿದಂತೆ ಸುತ್ತೋಲೆಯನ್ನು ಹೊರಡಿಸಲಾಗುವುದು. ಹೋಟೆಲ್‍ಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಬೆಸ್ಕಾಂ ಎಲ್ಲ ರೀತಿಯ ಕ್ರಮ ಕೈಗೊಂಡಿದ್ದು, ಪ್ರಕೃತಿ ವಿಕೋಪದಂತಹ ಸಂದರ್ಭಗಳನ್ನು ಹೊರತು ಪಡಿಸಿ ಹೋಟೆಲ್‍ಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಸಲಾಗುವುದು ಎಂದು ತಿಳಿಸಿದೆ.

ಕುಂಬಳಗೋಡು ಪ್ರದೇಶದಲ್ಲಿ ಉಂಟಾಗಿರುವ ವಿದ್ಯುತ್ ವ್ಯತ್ಯಾಯದ ಕುರಿತು ಹೋಟೆಲ್ ಸಂಘದ ಪದಾಧಿಕಾರಿಗಳು ಬೆಸ್ಕಾಂ ಗಮನಕ್ಕೆ ತಂದಿದ್ದು, ವಿಪರೀತ ಗಾಳಿ ಮಳೆಗೆ 300 ಕ್ಕೂ ಹೆಚ್ಚು ಮರಗಳು ಮತ್ತು 150 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದಿದ್ದರಿಂದ ಕುಂಬಳಗೋಡು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಾಯ ಉಂಟಾಗಿತ್ತು. ದುರಸ್ಥಿಗೊಂಡಿರುವ ವಿದ್ಯುತ್ ಕಂಬಗಳನ್ನು ಸರಿಪಡಿಸಲಾಗಿದ್ದು, ಆ ಪ್ರದೇಶದಲ್ಲಿನ ವಿದ್ಯುತ್ ವ್ಯತ್ಯಾಯವನ್ನು ಸರಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

electricity bescom power

ಕುಂಬಳಗೋಡು ಪ್ರದೇಶದಲ್ಲಿ ಈಗಿರುವ ಟ್ರಾನ್ಸ್ ಫಾರ್ಮರ್ ಮೇಲ್ದರ್ಜೆಗೆ ಏರಿಸಲು ಕೆಪಿಟಿಸಿಎಲ್ ಕಾರ್ಯಪ್ರವರ್ತವಾಗಿತ್ತು. ಈ ಕೆಲಸ ಇನ್ನೊಂದು ವಾರದಲ್ಲಿ ಪೂರ್ಣಗೊಳ್ಳಲಿದೆ ಎಂದು ಬೆಸ್ಕಾಂ ಹೋಟೆಲ್ ಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದೆ. ವಿದ್ಯುತ್ ಸಂಬಂಧಿತ ಯಾವುದೇ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಬೆಸ್ಕಾಂ ಗಮನಕ್ಕೆ ತಂದರೆ, ಅದರ ಆದ್ಯತೆ ಮೇರೆಗೆ ಸರಿಪಡಿಸಲಾಗುವುದು ಎಂದರು. ಇದನ್ನೂ ಓದಿ: ಕಡೇ ಕ್ಷಣದ ಬದಲಾವಣೆ ಮಧ್ಯೆ ಟಿಕೆಟ್ ಘೋಷಣೆ – ಹೈಡ್ರಾಮಾ ಮೂಲಕ ಕಮಲ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ 

ಎಫ್ ಕೆಸಿಸಿಐ ಅಧ್ಯಕ್ಷ ಐ.ಎಸ್.ಪ್ರಸಾದ್ ಮತ್ತು ಹೋಟೆಲ್ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

TAGGED:BESCOMCovid 19Electricity chargesHotelಕೋವಿಡ್‌-19ಬೆಸ್ಕಾಂವಿದ್ಯುತ್ ಶುಲ್ಕಹೋಟೆಲ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
1 hour ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
2 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
5 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
15 hours ago

You Might Also Like

Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
22 seconds ago
Hardhik Vibhuthi 2
Latest

ವಿಮಾನ ದುರಂತ – ನಿಶ್ಚಿತಾರ್ಥ ಮುಗಿಸಿ ಹೊರಟ ಜೋಡಿಯ ದಾರುಣ ಅಂತ್ಯ

Public TV
By Public TV
32 minutes ago
Basavasagar dam
Districts

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Public TV
By Public TV
50 minutes ago
bike taxi
Bengaluru City

ಜೂ.16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಬಂದ್

Public TV
By Public TV
1 hour ago
Prateek Joshi
Belgaum

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಡಾ.ಪ್ರತೀಕ್ ಜೋಶಿ ಬೆಳಗಾವಿಯ ವಿದ್ಯಾರ್ಥಿ – ಕಣ್ಣೀರಿಟ್ಟ ಸಹಪಾಠಿಗಳು

Public TV
By Public TV
2 hours ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?