– 19,000 ಕೋಟಿ ಆಯವ್ಯಯ, ಬೆಟ್ಟದಷ್ಟು ನಿರೀಕ್ಷೆ!
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025 – 26ನೇ ಸಾಲಿನ ಬಜೆಟ್ (BBMP Budget 2025-26) ಇಂದು ಮಂಡನೆ ಆಗ್ತಿದೆ. 19,000 ಕೋಟಿ ರೂ. ಬಜೆಟ್ ಮಂಡಿಸಲು ತಯಾರಿ ಮಾಡಲಾಗಿದೆ.
ಚುನಾಯಿತ ಪ್ರತಿನಿಧಿಗಳು ಇಲ್ಲದೇ 5ನೇ ಬಾರಿಗೆ ಬಿಬಿಎಂಪಿಯ ಅಧಿಕಾರಿಗಳು ಬಜೆಟ್ ಮಂಡನೆ ಮಾಡುತ್ತಿದ್ದಾರೆ. ತುಷಾರ್ ಗಿರಿನಾಥ್ (tushar girinath) ಅಧ್ಯಕ್ಷತೆಯಲ್ಲಿ ವಿಶೇಷ ಆಯುಕ್ತ ಹರೀಶ್ ಕುಮಾರ್ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ನಲ್ಲಿ ಭಾರೀ ನಿರೀಕ್ಷೆ ಇಡಲಾಗಿದೆ. 7 ಸಾವಿರ ಕೋಟಿ ರೂ. ರ್ಕಾರದಿಂದ ನಿರೀಕ್ಷೆ ಇಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗ್ತಿದೆ. ಟೌನ್ ಹಾಲ್ನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಬಜೆಟ್ ಮಂಡನೆ ಮಾಡ್ತಿದ್ದು. ಈ ಭಾರೀ ಬಜೆಟ್ನಲ್ಲಿ ಹಲವು ನಿರೀಕ್ಷೆಗಳನ್ನ ಇಡಲಾಗಿದೆ.
ಬಿಬಿಎಂಪಿ ಬಜೆಟ್ ನಿರೀಕ್ಷೆಗಳೇನು ?
1. ರಸ್ತೆ ಗುಂಡಿ ಮುಕ್ತಿ, ನಗರದ ಸ್ವಚ್ಛತೆ, ಸುಗಮ ಸಂಚಾರ, ಹಸೀರಕರಣ, ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ಸಿಗಲಿದೆ.
2. ಘನತ್ಯಾಜ್ಯ ನಿರ್ವಹಣೆ ಸಮಸ್ಯೆ ಪರಿಹರಿಸುವ ಯೋಜನೆ ರೂಪಿಸಲಾಗಿದೆ.
3. ಪೂರ್ವ ಮತ್ತು ಪಶ್ಚಿಮ, ಉತ್ತರ ಮತ್ತು ದಕ್ಷಿಣ ಭಾಗದ ಸುರಂಗ ನಿರ್ಮಾಣದ ಯೋಜನೆ ಪ್ರಸ್ತಾಪ ಆಗಲಿದೆ.
4. ರಸ್ತೆಗಳಲ್ಲಿ ನೀರು ನಿಲ್ಲದಂತೆ ಪ್ರವಾಹ ನಿಯಂತ್ರಣಕ್ಕೆ ಯೋಜನೆ ರೂಪಿಸುವ ಸಾಧ್ಯತೆ.
5. ಇಂದಿರಾ ಕ್ಯಾಂಟೀನ್ ಗೆ ಹೆಚ್ಚಿನ ಅನುದಾನ.. ಹೆಚ್ಚುವರಿಯಾಗಿ 52 ಹೊಸ ಇಂದಿರಾ ಕ್ಯಾಂಟೀನ್ ನಿರ್ಮಾಣ ಸಾಧ್ಯತೆ.
6. ಪ್ರತಿ ವಿಧಾನಸಭ ಕ್ಷೇತ್ರಕ್ಕೆ ಅಂಬ್ಯೂಲೆನ್ಸ್ ಘೋಷಣೆ ಸಾಧ್ಯತೆ.
7. ಬಿಬಿಎಂಪಿ 20 ಆಸ್ಫತ್ರೆ ಗಳನ್ನ ಮೇಲ್ದರ್ಜೆಗೆ ಏರಿಸಲಿದ್ದಾರೆ.
8. ಬಿಬಿಎಂಪಿ ಶಾಲೆ.ಕಾಲೇಜು ಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ.. ಪ್ರತಿ ಶಾಲೆ.ಕಾಲೇಜು ಗಳಿಗೂ ಮೂಲಭೂತ ಸೌಕರ್ಯ ವ್ಯವಸ್ಥೆ.
9. ಸರ್ಕಾರದ ಸಹಭಾಗಿತ್ವದಲ್ಲಿ ಬೃಹತ್ ಕಾಮಗಾರಿಗಳ ನಿರ್ಮಾಣಕ್ಕೆ ನಿಗಮ ಸ್ಥಾಪನೆ ಸಾಧ್ಯತೆ
10. ನಗರದ ಟ್ರಾಫಿಕ್ ಕಂಟ್ರೋಲ್ಗೆ ಪ್ಲೈಓವರ್.. ಟನಲ್ ರಸ್ತೆ, ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣ.
11. ಮಳೆಗಾಲದಲ್ಲಿ ರಾಜಕಾಲುವೆ ನೀರು ರಸ್ತೆಗೆ ಬರದಂತೆ ತಡೆಗೋಡೆ ನಿರ್ಮಾಣ.
12. ಮೆಟ್ರೋ ನಿಗಮದ ಜೊತೆ ಸೇರಿ ಡಬಲ್ ಡೆಕ್ಕರ್ ರಸ್ತೆ ನಿರ್ಮಾಣ ಸಾಧ್ಯತೆ.
13. ಸಾರ್ವಜನಿಕರಿಗೆ ತೆರಿಗೆ ಕಟ್ಟಲು ದಿನದ 24 ಗಂಟೆ ಅನ್ ಲೈನ್ ವ್ಯವಸ್ಥೆ.
14. ಪ್ರಸಕ್ತ ವರ್ಷ 6 ಸಾವಿರ ಕೋಟಿ ತೆರಿಗೆ ವಸೂಲಿಗೆ ಪ್ರಸ್ತಾವನೆ ಸಾಧ್ಯತೆ
15. ಮಳೆಗಾಲದಲ್ಲಿ ಒಣಗಿದ ಮರ.ಕೊಂಬೆಗಳ ತೆರವಿಗೆ ಹೆಚ್ಚಿನ ಅನುದಾನ. ಮಳೆಗಾಲದಲ್ಲಿ ಒಣಗಿದ ಮರ.ಕೊಂಬೆಗಳ ತೆರವಿಗೆ ಹೆಚ್ಚುವರಿ ಸಿಬ್ಬಂದಿಗಳ ನೇಮಕ.