Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್ ತೆರವುಗೊಳಿಸುವ ಕೆಲಸ ಇನ್ನಷ್ಟು ವೇಗವಾಗಿ ನಡೆಯಲಿ: ಗೌರವ್ ಗುಪ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್ ತೆರವುಗೊಳಿಸುವ ಕೆಲಸ ಇನ್ನಷ್ಟು ವೇಗವಾಗಿ ನಡೆಯಲಿ: ಗೌರವ್ ಗುಪ್ತ

Bengaluru City

ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್ ತೆರವುಗೊಳಿಸುವ ಕೆಲಸ ಇನ್ನಷ್ಟು ವೇಗವಾಗಿ ನಡೆಯಲಿ: ಗೌರವ್ ಗುಪ್ತ

Public TV
Last updated: February 28, 2022 7:52 pm
Public TV
Share
2 Min Read
bbmp
SHARE

ಬೆಂಗಳೂರು: ನಗರದಲ್ಲಿನ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್‍ಗಳನ್ನು ತೆರವುಗೊಳಿಸುವ ಕೆಲಸ ಇನ್ನಷ್ಟು ವೇಗವಾಗಿ ನಡೆಯಬೇಕಿದ್ದು, ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಧಿಕಾರಿಗಳು ತತ್‍ಕ್ಷಣ ಕಾರ್ಯಪ್ರವೃತ್ತರಾಗಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಮುಖ್ಯ ಆಯುಕ್ತರಾದ ಗೌರವ್ ಗುಪ್ತರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

WhatsApp Image 2022 02 28 at 5.55.44 PM

ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಬ್ಯಾನರ್ಸ್‍ಗಳ ತೆರವುಗೊಳಿಸುವಿಕೆ ಬಗ್ಗೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್‍ಗಳನ್ನು ವ್ಯಾಪಕವಾಗಿ ಅಳವಡಿಸಲಾಗುತ್ತಿದೆ. ಆಯಾ ವಲಯ ವ್ಯಾಪ್ತಿಯಲ್ಲಿಯ ಸ್ಥಳೀಯ ಅಧಿಕಾರಿಗಳು ಯಾವುದೇ ಫ್ಲೆಕ್ಸ್‍ಗಳನ್ನು ಅಳವಡಿಸಲು ಬಿಡಬಾರದು. ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸುವಂತಹವರ ಮೇಲೆ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎಫ್‍ಐಆರ್ ದಾಖಲಿಸಲು ಸೂಚನೆ ನೀಡಿದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

ಚುನಾವಣೆಯ ಸಂದರ್ಭದಲ್ಲಿ ಹೇಗೆ ನಗರವು ಬ್ಯಾನರ್ಸ್, ಫ್ಲೆಕ್ಸ್‍ಗಳಿಂದ ಮುಕ್ತವಾಗಿರುತ್ತದೆಯೋ ಅದೇ ರೀತಿ ಈಗಲೂ ಕೂಡ ನಗರವು ಬ್ಯಾನರ್ಸ್, ಫ್ಲೆಕ್ಸ್‍ಗಳಿಂದ ಮುಕ್ತವಾಗಿರಬೇಕು. ನಗರದಲ್ಲಿ ಎಲ್ಲೆಲ್ಲಿ ಹೆಚ್ಚಾಗಿ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸಲಾಗಿದೆಯೋ ಅಂತಹ ಸ್ಥಳಗಳಲ್ಲಿ ಪೊಲೀಸ್ ಸಹಯೋಗದ ಜೊತೆಗೆ ಮಾರ್ಷಲ್‍ಗಳನ್ನು ಸಹ ನಿಯೋಜನೆ ಮಾಡಿಕೊಂಡು ತೆರವುಗೊಳಿಸಲು ಮುಂದಾಗಬೇಕು. ಪಾಲಿಕೆಯ ಶಿಲ್ಟ್ ಅಂಡ್ ಟ್ರ್ಯಾಕ್ಟರ್, ಪ್ರಹಾರಿ ಸೇರಿದಂತೆ ಹೆಚ್ಚುವರಿಯಾಗಿ ಇನ್ನಿತರೆ ವಾಹನಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು ತೆರವು ಕಾರ್ಯಾರಣೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

WhatsApp Image 2022 02 28 at 5.55.44 PM 1 1

ನಗರದಲ್ಲಿ ಫ್ಲೆಕ್ಸ್, ಬ್ಯಾನರ್ಸ್, ಬಂಟಿಗ್ಸ್, ಭಿತ್ತಿಪತ್ರ, ಬಾವುಟಗಳು ಸೇರಿದಂತೆ ಇತ್ಯಾದಿ ಜಾಹೀರಾತು/ಪ್ರಕಟಣೆಗಳ ಅಳವಡಿಕೆಯು ಬಿಬಿಎಂಪಿ ಕಾಯ್ದೆ 2020 ಮತ್ತು ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಕಲಂ(3)ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದರು.

ಆದರೂ ಸಹ ನಗರದಲ್ಲಿ ಮತ್ತೆ ಮತ್ತೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾರ್ನರ್‍ಗಳನ್ನು ಅಳವಡಿಸಿ ನಗರದ ಸೌಂದರ್ಯ ಹಾಳಾಗುವಂತಹ ಕೆಲಸ ಮಾಡಲಾಗುತ್ತಿದೆ. ಈ ಸಂಬಂಧ ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಅಧಿಕಾರಿಗಳು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ತೆರವು ಕಾರ್ಯಾಚರಣೆ ಮಾಡಿ, ಯಾವುದೇ ಅನಧಿಕೃತ ಫ್ಲೆಕ್ಸ್‍ಗಳು ಇರದಂತೆ ಕ್ರಮವಹಿಸಲು ಸೂಚನೆ ನೀಡಿದರು.  ಇದನ್ನೂ ಓದಿ: ನಮ್ಮ ಸ್ವಂತ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಪೊಲೀಸ್ ಇಲಾಖೆಯಿಂದ ಸಹಯೋಗ ನೀಡಲು ಮನವಿ:
ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್, ಬಂಟಿಗ್ಸ್‍ಗಳನ್ನು ಅಳವಡಿಸುವ ಪ್ರಕ್ರಿಯೆ ಹೆಚ್ಚಾಗಿದ್ದು, ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಸಿಬ್ಬಂದಿಯು ಅನಧಿಕೃತ ಫ್ಲೆಕ್ಸ್‍ಗಳನ್ನು ತೆರವುಗೊಳಿಸುವ ವೇಳೆ ಪಾಲಿಕೆ ಅಧಿಕಾರಿಗಳ ಜೊತೆ ತೆರಳಿ ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು.

WhatsApp Image 2022 02 28 at 5.55.45 PM 1

ಇದಕ್ಕೆ ಪೊಲೀಸ್ ಇಲಾಖೆಗೆ ಸಹಕಾರ ಅತ್ಯಗತ್ಯ ಎಂದು ಮುಖ್ಯ ಆಯುಕ್ತರು ನಗರ ಪೆÇಲೀಸ್ ಆಯುಕ್ತರಾದ ಕಮಲ್ ಪಂತ್‍ರವರಿಗೆ ಮನವಿ ಮಾಡಿದರು. ಈ ವೇಳೆ ನಗರ ಪೆÇಲೀಸ್ ಆಯುಕ್ತರಾದ ಕಮಲ್ ಪಂತ್‍ರವರು ಪ್ರತಿಕ್ರಿಯಿಸಿ, ಪಾಲಿಕೆಯ ಜೊತೆಗೆ ನಮ್ಮ ಅಧಿಕಾರಿಗಳು ಕೈಜೋಡಿಸಿ ಕಾರ್ಯನಿರ್ವಹಿಸಲಿದ್ದು, ಪಾಲಿಕೆ ಅಧಿಕಾರಿಗಳಿಗೆ ಬೇಕಾದಂತಹ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಪಾಲಿಕೆಯ ಎಲ್ಲಾ ವಲಯ ಆಯುಕ್ತರುಗಳು, ಹಣಕಾಸು ವಿಭಾಗದ ಅಪರ ಆಯುಕ್ತರು ವೆಂಕಟೇಶ್. ಎಸ್, ಎಲ್ಲಾ ವಲಯ ಜಂಟಿ ಆಯುಕ್ತರುಗಳು, ಎಲ್ಲಾ ವಲಯ ಮುಖ್ಯ ಇಂಜಿನಿಯರ್‌ಗಳು ಎಲ್ಲಾ ವಿಭಾಗೀಯ ಕಾರ್ಯಪಾಲಕ ಇಂಜಿನಿಯರ್‍ಗಳು ಇತರ ಅಧಿಕಾರಿಗಳು ಉಪಸ್ಥಿರಿದ್ದರು.

TAGGED:BannersbengaluruBuntingsClearflexgaurav guptapoliceಗೌರವ್ ಗುಪ್ತತೆರವುಪೊಲೀಸ್ಫ್ಲೆಕ್ಸ್ಬಂಟಿಂಗ್ಸ್ಬೆಂಗಳೂರುಬ್ಯಾನರ್ಸ್
Share This Article
Facebook Whatsapp Whatsapp Telegram

Cinema news

yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories

You Might Also Like

Coffee beans washed away by rain in Chikkamagaluru
Chikkamagaluru

ಚಿಕ್ಕಮಗಳೂರಲ್ಲಿ ವರ್ಷದ ಮೊದಲ ಮಳೆಗೆ ಕೊಚ್ಚಿ ಹೋದ ಕಾಫಿ ಬೀಜ – ರೈತರ ಕಣ್ಣೀರು

Public TV
By Public TV
20 minutes ago
CT Ravi 1
Bengaluru City

ನರೇಗಾ ಬಗ್ಗೆ ಚರ್ಚೆಗೆ ಸಿದ್ಧ, ಸರ್ಕಾರ ವಿಶೇಷ ಅಧಿವೇಶನ ನಡೆಸಲಿ – ಸಿ.ಟಿ.ರವಿ

Public TV
By Public TV
22 minutes ago
sabarimala kerala karnataka
Chikkaballapur

ಕೇರಳಿಗರ ಕ್ಯಾತೆ; ಕರ್ನಾಟಕದ ಮಾಲಾಧಾರಿಗಳ ವಾಹನಗಳನ್ನು 100 ಕಿಮೀ ದೂರದಲ್ಲೇ ತಡೆದ ಕೇರಳ ಸರ್ಕಾರ

Public TV
By Public TV
57 minutes ago
Operation Gang Bust Delhi Police Arrests 280 Gangsters In 48 hour Crackdown
Crime

ಆಪರೇಷನ್ ಗ್ಯಾಂಗ್ ಬಸ್ಟ್ | 48 ಗಂಟೆಯಲ್ಲಿ 280 ದರೋಡೆಕೋರರನ್ನು ಬಂಧಿಸಿದ ದೆಹಲಿ ಪೊಲೀಸರು

Public TV
By Public TV
1 hour ago
rahul gandhi mysuru airport
Latest

ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ, ಡಿಸಿಎಂ

Public TV
By Public TV
2 hours ago
Makar Sankranti
Latest

23 ವರ್ಷಗಳ ಬಳಿಕ ಮಕರ ಸಂಕ್ರಾಂತಿಯಂದೇ ಷಟ್ತಿಲಾ ಏಕಾದಶಿ – ಏನಿದರ ವಿಶೇಷತೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?