Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಡವರು ಕಷ್ಟಪಟ್ಟು ಕಟ್ಟಿರುವ ಮನೆಯನ್ನು ಉಳಿಸುವುದಕ್ಕಾಗಿ ಸಲಹೆ ನೀಡಿದ್ದೇನೆ ಅಷ್ಟೇ: ನಂದೀಶ್ ರೆಡ್ಡಿ

Public TV
Last updated: September 14, 2022 10:13 am
Public TV
Share
2 Min Read
NANDISH REDDY 1
SHARE

ಬೆಂಗಳೂರು: ನನ್ನ ವಾದ ಹಾಗಾಗಿರಲಿಲ್ಲ. ಕಳೆದ 8 ವರ್ಷಗಳ ಹಿಂದೆ ನೀರು ಹೋಗಲು ಮೋರಿ ಕಟ್ಟಿದ್ದಾರೆ. ಇದೀಗ ನೀರು ಹೋಗುತ್ತಿರುವ ಜಾಗ ಬಿಟ್ಟು ಬೇರೆ ಜಾಗ ಗುರುತಿಸುತ್ತಿದ್ದಾರೆ. ಅಲ್ಲಿ ಮನೆಗಳಿವೆ ಹಾಗಾಗಿ ಬಡವರು ಕಷ್ಟಪಟ್ಟು ಕಟ್ಟಿರುವ ಮನೆಗಳನ್ನು ಉಳಿಸುವುದಕ್ಕಾಗಿ ಸಲಹೆ ನೀಡಿದ್ದೇನೆ ಅಷ್ಟೇ. ನಾನು ಅಲ್ಲಿ ವಾದಿಸಿದ್ದಲ್ಲ. ನನ್ನ ಅಭಿಪ್ರಾಯ ಹೇಳಿದ್ದು ಎಂದು ತೆರವು ಕಾರ್ಯಕ್ಕೆ ಅಡ್ಡಿಪಡಿಸಿದ ವಿಚಾರವಾಗಿ ಬಿಜೆಪಿ ಮುಖಂಡ ನಂದೀಶ್ ರೆಡ್ಡಿ (Nandish Reddy) ಸ್ಪಷ್ಟನೇ ನೀಡಿದ್ದಾರೆ.

NANDISH REDDY 2

ಮಹದೇವಪುರದಲ್ಲಿ ತೆರವು ವೇಳೆ ಬಿಜೆಪಿ ಮುಖಂಡ ನಂದೀಶ್ ರೆಡ್ಡಿ (Nandish Reddy) ಕಿರಿಕ್ ಮಾಡಿದ್ದರು. ಚಿನ್ನಪ್ಪನಹಳ್ಳಿ (Chinnapana Halli) ಒತ್ತುವರಿ ತೆರವು (Demolition Of Illegal Structures) ಕಾರ್ಯಚರಣೆ ವೇಳೆ ಮಧ್ಯಪ್ರವೇಶ ಮಾಡಿದ ಅವರು, ಪಾಲಿಕೆ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದ್ದರು.

ಈ ಬಗ್ಗೆ ಪಬ್ಲಿಕ್ ಟಿವಿ (Public TV) ಜೊತೆ ಮಾತನಾಡಿದ ಅವರು, ಬಸವನಪುರ ವಾರ್ಡ್‍ನಲ್ಲಿ ಒತ್ತುವರಿ ಮಾಡಿ ಮನೆ ನಿರ್ಮಿಸಿದ್ದರು. ನಾನು ಶಾಸಕನಾದ ಕೆಲವೇ ತಿಂಗಳಲ್ಲಿ ಅಲ್ಲಿ ನೀರು ನಿಂತು ಸಮಸ್ಯೆ ಆಗಿತ್ತು. ಬಡವರೆಲ್ಲ ಅಲ್ಲಿ ಮನೆ ಕಟ್ಟಿಕೊಂಡಿದ್ದರು. ಅವರಿಗೆ ರಾಜಕಾಲುವೆ ಒತ್ತುವರಿ ಬಗ್ಗೆ ಗೊತ್ತಿರಲಿಲ್ಲ. ಈ ವೇಳೆ ಸರ್ಕಾರದಿಂದ ವಿಶೇಷ ಅನುಮತಿ ಪಡೆದು ರಸ್ತೆಯ ಒಳಭಾಗದಲ್ಲಿ ನೀರು ಹೋಗುವ ರೀತಿಯ ಕಾಮಗಾರಿ ಮಾಡಿಸಿದ್ದೇನೆ. ನಿಯಮದ ಪ್ರಕಾರ ಮನೆಗಳನ್ನು ಕೆಡವಬೇಕಾಗಿತ್ತು. ಆದರೆ ಆರೀತಿ ಮಾಡದೆ ಪರಿಹಾರ ಕಂಡುಕೊಂಡಿದ್ದೇವೆ ಎಂದರು. ಇದನ್ನೂ ಓದಿ: ಇಂದು ಬಿಜೆಪಿ ಮುಖಂಡನಿಂದಲೇ ತೆರವು ಕಾರ್ಯಕ್ಕೆ ಅಡ್ಡಿ- ಪಾಲಿಕೆ ಅಧಿಕಾರಿಗಳ ಜೊತೆ ಕಿರಿಕ್

NANDISH REDDY

ಹಾಗಾಗಿ ಚಿನ್ನಪ್ಪನಹಳ್ಳಿಯಲ್ಲೂ ಈ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂದು ಪರಿಹಾರ ಸೂಚಿಸಿದ್ದೇನೆ. ಇದೀಗ ಇರುವ ಮ್ಯಾಪ್‍ನ್ನು ಗುರುತಿಸಲು ಸಾಧ್ಯವಿಲ್ಲ. ಈ ಹಿಂದಿನ ಸರ್ವೇ ಕಲ್ಲು ಇದೀಗ ಎಲ್ಲೂ ಸಿಗಲ್ಲ. ಕೆರೆ ನೀರು, ರಾಜಕಾಲುವೆ ನೀರು ಹೇಗೆ ಹೋಗಬೇಕೆಂಬುದಕ್ಕೆ ಇದೀಗ ಪರಿಹಾರ ಕಂಡುಕೊಳ್ಳಲು ಸಾಧ್ಯ. ಇದೀಗ ಬಂದಿರುವ ತಂತ್ರಜ್ಞಾನಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಕಟ್ಟಿಂಗ್ ಮೆಷಿನ್‍ಗಳ ಮೂಲಕ ಎಷ್ಟು ಜಾಗ ಬೇಕು ಅಷ್ಟನ್ನು ಮಾತ್ರ ತೆರವುಗೊಳಿಸಬಹುದಾಗಿದೆ ಅಂತಹ ಕ್ರಮಗಳನ್ನು ಅಳವಡಿಸಿ ಎಂದು ಸಲಹೆ ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಆಪರೇಷನ್ ಬುಲ್ಡೋಜರ್‌ಗೆ 3ನೇ ದಿನ- ಇಂದೂ ನಡೆಯಲಿದೆ ನಲಪಾಡ್ ಅಕಾಡೆಮಿ ಒತ್ತುವರಿ ತೆರವು!

ರಾಜಕಾಲುವೆಯನ್ನು ಗೊತ್ತಿದ್ದು ಒತ್ತುವರಿ ಮಾಡಿದ್ದರೆ ಅಂತದ್ದನ್ನು ತೆರವುಗೊಳಿಸಿ. ಪ್ರಭಾವಿಗಳನ್ನು ಬಿಟ್ಟು ಬಡವರ ಮನೆಗಳನ್ನು ಒಡೆಯುವುದಲ್ಲ. ಯಾರೆಲ್ಲ ಒತ್ತುವರಿ ಮಾಡಿದ್ದಾರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕೆಂದರು.

Live Tv
[brid partner=56869869 player=32851 video=960834 autoplay=true]

TAGGED:bbmpChinnapana HalliNandish Reddyಒತ್ತುವರಿನಂದೀಶ್ ರೆಡ್ಡಿಬಿಜೆಪಿಮಹಾದೇವಪುರ
Share This Article
Facebook Whatsapp Whatsapp Telegram

You Might Also Like

Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
17 minutes ago
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
18 minutes ago
Temba Bavuma
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
19 minutes ago
Samir Kumar Sinha plane crash
Latest

ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

Public TV
By Public TV
60 minutes ago
Crime

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮಂಗಳೂರಿಗೆ ಆಗಮಿಸಿದ ಎನ್‍ಐಎ ತಂಡ

Public TV
By Public TV
1 hour ago
Latest

NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?