Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಮಾರ್ಗಸೂಚಿ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಮಾರ್ಗಸೂಚಿ ಪ್ರಕಟ

Bengaluru City

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಮಾರ್ಗಸೂಚಿ ಪ್ರಕಟ

Public TV
Last updated: August 20, 2025 10:08 pm
Public TV
Share
3 Min Read
Ganesha Idol 1
SHARE

ಬೆಂಗಳೂರು: ಗಣೇಶೋತ್ಸವಕ್ಕೆ ಇನ್ನೂ ಕೆಲವೇ ದಿನಗಳು ಬಾಕಿಯಿರುವ ಹಿನ್ನೆಲೆ ಬಿಬಿಎಂಪಿ (BBMP) ಮಾರ್ಗಸೂಚಿ ಪ್ರಕಟಿಸಿದೆ.

ಬೆಂಗಳೂರಿನಾದ್ಯಂತ (Bengaluru) ವಲಯವಾರು 75 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ ಮಾಡಲಾಗಿದ್ದು, ಇಲಾಖಾವಾರು ನೋಡಲ್ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ.ಇದನ್ನೂ ಓದಿ: UGCET/NEET: 2ನೇ ಸುತ್ತಿನ ಕೌನ್ಸೆಲಿಂಗ್ ಆರಂಭ – ಕೆಇಎ

ಮಾರ್ಗಸೂಚಿಯಲ್ಲಿ ಏನಿದೆ?
1.ಗಣೇಶ ಹಬ್ಬದ ನಿಮಿತ್ತ ಸಾರ್ವಜನಿಕವಾಗಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ಉಪವಿಭಾಗ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಲಾದ ಸಹಾಯಕ ಕಾರ್ಯಪಾಲಕ ಅಭಿಯಂತರರುಗಳ ಕಾರ್ಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

2.ನೋಡಲ್ ಅಧಿಕಾರಿಗಳು ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ಏಕಗವಾಕ್ಷಿಯಲ್ಲಿ ತ್ವರಿತವಾಗಿ ಅನುಮತಿ ನೀಡಲು ಕ್ರಮಕೈಗೊಳ್ಳಬೇಕು.

3.ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಯ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಗೊಳಿಸಬೇಕು.

4.ಸದರಿ ವಸ್ತುಗಳನ್ನು ಬಳಸಿ ತಯಾರಿಸುವ, ಮಾರಾಟ ಮಾಡುವ ಪ್ರದೇಶಗಳನ್ನು ಸಂಬಂಧಪಟ್ಟ ಬಿಬಿಎಂಪಿಯ ಉಪವಿಭಾಗದ ನೋಡಲ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಖುದ್ದಾಗಿ ಪರಿಶೀಲಿಸಿ ನೋಟಿಸ್ ನೀಡಬೇಕು.

5.ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಸುತ್ತಿದ್ದಲ್ಲಿ ಹಾಗೂ ಮಾರಾಟ ಮಾಡುತ್ತಿದ್ದಲ್ಲಿ ದಂಡ ವಿಧಿಸಿ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿ, ನಿಷೇಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಕ್ರಮವಹಿಸಬೇಕು.

6.ವಲಯ ಆಯುಕ್ತರು, ವಲಯ ಮಟ್ಟದಲ್ಲಿ ಮೇಲ್ವಿಚಾರಣೆ ನಡೆಸಬೇಕು. ವಶಪಡಿಸಿಕೊಳ್ಳಲಾದ ಮೇಲ್ಕಂಡ ವಸ್ತುಗಳನ್ನು ನಿಯಮಾನುಸಾರ ವಿಲೇವಾರಿಗೊಳಿಸಲು ಕ್ರಮವಹಿಸಬೇಕು.

7.ಗಣೇಶಮೂರ್ತಿ ತಯಾರಿಕೆದಾರರಿಗೆ ಪರಿಸರ ಸ್ನೇಹಿ/ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಮಾತ್ರ ತಯಾರಿಸಲು ಜಾಹೀರಾತು ನೀಡುಬೇಕು.

8.ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ತಮ್ಮ ಮನೆಗಳಲ್ಲಿ, ಬಕೇಟ್‌ಗಳಲ್ಲಿ ವಿಸರ್ಜನೆಗೊಳಿಸಿ, ಬರುವ ಮಣ್ಣನ್ನು ಕೈತೋಟಗಳಿಗೆ, ಹೂವಿನ ಕುಂಡಗಳಿಗೆ ಬಳಸಲು ಅರಿವು ಮೂಡಿಸಬೇಕು.

9.ದೊಡ್ಡ ಗಾತ್ರದ ಮೂರ್ತಿಗಳ ವಿಸರ್ಜನೆಗೆ ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳಲ್ಲಿ ವಿಸರ್ಜನೆ/ನಿಮಜ್ಜನ ಸ್ಥಳಗಳನ್ನು ಗುರುತಿಸಿ, ಸದರಿ ಸ್ಥಳಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪ್ರಚುರಪಡಿಸಬೇಕು.

10.ವಾರ್ಡ್ ವ್ಯಾಪ್ತಿಯಲ್ಲಿ ಸಂಚಾರಿ ವಾಹನ ಮೂಲಕ ವಿಸರ್ಜನೆಗೆ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು.

11.ಪಾಲಿಕೆಯ ವ್ಯಾಪ್ತಿಯ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಸದರಿ ಸ್ಥಳಗಳ ಸಮೀಪದಲ್ಲಿ ತಾತ್ಕಾಲಿಕ ವಿಸರ್ಜನೆ ಸ್ಥಳಗಳನ್ನು ನಿರ್ಮಿಸಬೇಕು. ಸದರಿ ವಿಸರ್ಜನೆಯಿಂದ ಬರುವ ಮಣ್ಣು, ಪೂಜಾ ಹೂಗಳು ಹಾಗೂ ಪ್ಲಾಸ್ಟಿಕ್ ಇತ್ಯಾದಿ ವಸ್ತುಗಳನ್ನು ವಿಂಗಡಿಸಬೇಕು. ಹಸಿತ್ಯಾಜ್ಯವನ್ನು ಹಸಿತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ, ಒಣತ್ಯಾಜ್ಯವನ್ನು ಒಣತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸಬೇಕು. ವಿಸರ್ಜನಾ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಮೂರ್ತಿಗಳನ್ನು ವಿಸರ್ಜಿಸಲು ಪ್ರತ್ಯೇಕ ತಂಡಗಳನ್ನು ನೇಮಿಸಬೇಕು ಹಾಗೂ ಕಿಯಾಸ್, ಆಂಬ್ಯುಲೆನ್ಸ್ ವ್ಯವಸ್ಥೆ, ವೈದ್ಯರು ಮತ್ತು ಶುಶ್ರೂಷಕಿಯರನ್ನು ಪ್ರಾಥಮಿಕ ಚಿಕಿತ್ಸೆ ನೀಡಲು ನೇಮಿಸಿ, ಎಲ್ಲಾ ಪಿಹೆಚ್‌ಸಿಗಳ ಬಳಿಯಲ್ಲಿ ಹೆಚ್ಚುವರಿ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸಿದ್ಧವಿರುವಂತೆ ಕ್ರಮವಹಿಸಬೇಕು. ಬೆಳಕಿನ ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ, ಧ್ವನಿವರ್ಧಕ ವ್ಯವಸ್ಥೆ ಮತ್ತು ನುರಿತ ಈಜುಗಾರರನ್ನು ಒಳಗೊಂಡಂತೆ ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ಹಾಜರಿರುವಂತೆ ಕ್ರಮವಹಿಸಬೇಕು.

12.ಪರಿಸರ ಸ್ನೇಹಿ ಗಣೇಶ ಆಚರಣೆಯ ನಿಮಿತ್ತ ವಲಯ ಆಯುಕ್ತರು ವಲಯಕ್ಕೆ ಒಬ್ಬರನ್ನು ಮೇಲುಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಿ, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ವಾರ್ಡಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಲು ಅಗತ್ಯ ಕ್ರಮವಹಿಸಬೇಕು.

13.ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಯಲ್ಲಿದ್ದು, ವಲಯ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಿ ಕ್ರಮಕೈಗೊಳ್ಳಬೇಕು.

14.ಪರಿಸರ ಸ್ನೇಹಿ ಗಣೇಶ ಆಚರಣೆಗೆ ಪ್ರೋತ್ಸಾಹ ನೀಡುಬೇಕು ಹಾಗೂ ಬಿಬಿಎಂಪಿ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಬೆಸ್ಕಾಂ ಹಾಗೂ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಹೊರಡಿಸುವ ಷರತ್ತುಗೊಳಪಡಿಸಿ, ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲು ಕ್ರಮವಹಿಸಬೇಕು.ಇದನ್ನೂ ಓದಿ: ನಾನು ಹಣಕ್ಕಾಗಿ ಹೀಗೆ ಮಾಡಿಲ್ಲ, ಮಗಳು ಇಲ್ಲ ಅಂತ ಕೊರಗುತ್ತಿದ್ದೀನಿ: ಸುಜಾತಾ ಭಟ್ ಕಣ್ಣೀರು

TAGGED:bbmpbengaluruEco Friendly GaneshaGuidelinesಗಣೇಶೋತ್ಸವಬಿಬಿಎಂಪಿಬೆಂಗಳೂರುಮಾರ್ಗಸೂಚಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Ravi waters
Latest

ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ – ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ

Public TV
By Public TV
19 minutes ago
BMW buried
Latest

ಮಗನ ಸಾವಿನ ನೋವಿನಲ್ಲಿ 6 ಕೋಟಿ ಮೌಲ್ಯದ BMW ಕಾರನ್ನ ಸಮಾಧಿ ಮಾಡಿದ ತಂದೆ

Public TV
By Public TV
48 minutes ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
1 hour ago
rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
9 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
10 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?