ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ.
ವಾರ್ಡ್ 121 ಬಿನ್ನಿಪೇಟೆಯ ಮಹದೇವಮ್ಮ ನಾಗರಾಜ್ ಮೃತಪಟ್ಟ ಸದಸ್ಯೆಯಾಗಿದ್ದು, ಇವರು ಕುಟುಂಬ ಸಮೇತ ಪ್ರಸಿದ್ಧ ಕ್ಷೇತ್ರ ತಿರುಪತಿಗೆ ಹೋಗಿದ್ದರು. ಇಂದು ಮುಂಜಾನೆ ದರ್ಶನ ಮುಗಿಸಿ ಹಿಂದಿರುಗುವಾಗ ಮಾರ್ಗ ಮಧ್ಯದಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮಹದೇವಮ್ಮ ಅವರ ಮೃತದೇಹವನ್ನು ತಿರುಪತಿಯಿಂದ ಬೆಂಗಳೂರಿಗೆ ರವಾನಿಸಲಾಗಿದೆ. ಬಿಬಿಎಂಪಿ ಮೇಯರ್, ಆಯುಕ್ತರು, ಪಾಲಿಕೆ ಸದಸ್ಯರು ಮಹದೇವಮ್ಮ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.