– ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳ ಆಧಾರದಲ್ಲಿ ತಾರತಮ್ಯ ಮಾಡದಂತೆ ನಿರ್ದೇಶನ
– ರೈತನಿಗೆ ಅಪಮಾನದಂಥ ಪ್ರಕರಣ ಮರುಕಳಿಸಿದ್ರೆ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು: ಪಂಚೆಯುಟ್ಟಿದ್ದ ರೈತನಿಗೆ ಜಿಟಿ ಮಾಲ್ (GT Mall) ಅಪಮಾನ ಮಾಡಿದ್ದು ರಾಜ್ಯಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಮಾಲ್ಗಳಿಗೆ ಬಿಬಿಎಂಪಿ (BBMP) ಮಾರ್ಗಸೂಚಿ ಬಿಡುಗಡೆ ಮಾಡಿದೆ.
- Advertisement -
ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ವಾಣಿಜ್ಯ ಸಮುಚ್ಛಯಗಳು ಹಾಗೂ ಇತರೆ ಅಂಗಡಿಗಳ ಮಾಲೀಕರಿಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಇದನ್ನೂ ಓದಿ: ಪಂಚೆಯುಟ್ಟ ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ
- Advertisement -
- Advertisement -
ಸಾರ್ವಜನಿಕರಿಗೆ ಪ್ರವೇಶ ಸಂದರ್ಭದಲ್ಲಿ ಭಾಷೆ, ಜಾತಿ, ಜನಾಂಗ, ಧರ್ಮ, ಉಡುಪು ಮತ್ತು ಜನ್ಮಸ್ಥಳ ಆಧಾರದಲ್ಲಿ ತಾರತಮ್ಯ ಮಾಡಬಾರದು. ಎಲ್ಲಾ ವಾಣಿಜ್ಯ ಸಮುಚ್ಚಯಗಳು ಉಡುಪಿನ ಆಧಾರದ ಮೇಲೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಣೆ ಮಾಡದಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಬೇಕು ಎಂದು ಸೂಚಿಸಿದೆ.
- Advertisement -
ರೈತನಿಗೆ ಅಪಮಾನ ಮಾಡಿದ ರೀತಿಯ ಪ್ರಕರಣಗಳು ಮರುಕಳಿಸಿದರೆ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ ಭಾರತೀಯ ನ್ಯಾಯ ಸಂಹಿತೆ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ರಾಜ್ಯದ ಎಲ್ಲಾ ಮಾಲ್ಗಳಿಗೂ ಮಾರ್ಗಸೂಚಿ: ಡಿಕೆಶಿ ಘೋಷಣೆ