ಬೆಂಗಳೂರು: ರಸ್ತೆಯಲ್ಲಿ ನೀರು ನಿಂತಾಗ ಸರ್ಕಾರದ (Karnataka Government) ವಿರುದ್ಧ ಪ್ರತಿಭಟನೆ (Protest) ನಡೆಸಿದ್ದ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ (mohammed haris nalapad) ನಾಟಕ ಒಂದೇ ವಾರದಲ್ಲಿ ಬಯಲಾಗಿದೆ.
ಮೂಲಸೌಕರ್ಯಗಳನ್ನೂ ಒದಗಿಸಲು ವಿಫಲವಾದ ಬಿಜೆಪಿಯು ಬೆಂಗಳೂರನ್ನು ಮುಳುಗಿಸಿದೆ. ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ. pic.twitter.com/eJ40lUQyWQ
— Mohammed Haris Nalapad (@nalapad) September 6, 2022
ರಾಜಕಾಲುವೆ (Rajkaluve) ಒತ್ತುವರಿ ಮಾಡಿ ಕಟ್ಟಡ ಕಟ್ಟಿದ ಪರಿಣಾಮ ಮಹಾದೇವಪುರ ವಿಧಾನ ಸಭಾ ಕ್ಷೇತ್ರದ ಕೆಲವೆಡೆ ರಸ್ತೆಯಲ್ಲಿ ನೀರು ನಿಂತಿತ್ತು. ಈ ಸಂದರ್ಭದಲ್ಲಿ ಟ್ರ್ಯಾಕ್ಟರ್ ಏರಿ ನಲಪಾಡ್ ಪ್ರತಿಭಟನೆ ನಡೆಸಿದ್ದರು. ಬಳಿಕ ಜಲಾವೃತಗೊಂಡ ರಸ್ತೆಯಲ್ಲಿ ಗಾಳಿ ತುಂಬಿದ ರಬ್ಬರ್ ಟ್ಯೂಬ್ ಮೇಲೆ ಕುಳಿತು ಸಂಚರಿಸುವ ಮೂಲಕ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದರು. ಆದರೆ ಈಗ ನಲಪಾಡ್ ನಿರ್ದೇಶಕರಾಗಿರುವ ನಲಪಾಡ್ ಅಕಾಡೆಮಿ ರಾಜಕಾಲುವೆ ಒತ್ತುವರಿ ಮಾಡಿಕೊಂಡ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: 40percentsarkara ವೆಬ್ಸೈಟ್ ಓಪನ್ – ಬಿಜೆಪಿ ಅಂದ್ರೆ ಭ್ರಷ್ಟಾಚಾರ ಅಭಿಯಾನ ಆರಂಭಿಸಿದ ಕಾಂಗ್ರೆಸ್
ಚಲ್ಲಘಟ್ಟದ ಎಂಬೆಸಿ ಗಾಲ್ಫ್ ಲಿಂಕ್ ಬಿಸಿನೆಸ್ ಪಾರ್ಕ್ ಬಳಿ ನಲಪಾಡ್ ಅಕಾಡೆಮಿ (Nalapad Academy) ಸ್ಥಾಪನೆಯಾಗಿದೆ. ಒತ್ತುವರಿ ಮಾಡಿ ಅಕಾಡೆಮಿಯ ಕಾಪೌಂಡ್ ಕಟ್ಟಿದ ಹಿನ್ನೆಲೆಯಲ್ಲಿ ಇಂದು ಜೆಸಿಬಿ ಜೊತೆ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರು. ಜೆಸಿಬಿ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಪಿಎ, ನೋಟಿಸ್ ನೀಡಿಲ್ಲ. ಹೇಗೆ ತೆರವು ಮಾಡುತ್ತೀರಾ ಎಂದು ಅವಾಜ್ ಹಾಕಿದರು. ಜೆಸಿಬಿ (JCB) ಕಾರ್ಯಾಚರಣೆ ನಡೆಸುತ್ತಿದ್ದಂತೆ ಸ್ಥಗಿತಕ್ಕೆ ಸೂಚನೆ ನೀಡಿದರು. ಬಿಬಿಎಂಪಿ (BBMP) ಅಧಿಕಾರಿಗಳಿಗೆ ಗೇಟು ತೆಗೆಯಲು ಕೂಡ ಅವಕಾಶ ಕೊಡಲಿಲ್ಲ. ಹೀಗಾಗಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.
ಕಾರ್ಯಾಚರಣೆ ಸ್ಥಗಿತಗೊಂಡ ಬೆನ್ನಲ್ಲೇ ಪಬ್ಲಿಕ್ ಟಿವಿ (Public TV) ನಿರಂತರ ವರದಿ ಮಾಡಿತ್ತು. ದೊಡ್ಡವರಿಗೆ ಒಂದು ನ್ಯಾಯ? ಬಡವರಿಗೆ ಒಂದು ನ್ಯಾಯ ಸರಿಯೇ ಎಂದು ಕೇಳಿತ್ತು. ನಿರಂತರ ವರದಿಯ ಬಳಿಕ ಬಿಬಿಎಂಪಿ ಜೆಸಿಬಿಗಳು ನಲಪಾಡ್ ಅಕಾಡೆಮಿ ಕಾಂಪೌಂಡ್ನ್ನು ಧರೆಗೆ ಉರುಳಿಸಿದೆ. ಇದನ್ನೂ ಓದಿ: ದೀದಿ ವಿರುದ್ಧ ಬಿಜೆಪಿ ಪ್ರತಿಭಟನೆ – ಪೊಲೀಸರಿಂದ ಜಲಫಿರಂಗಿ ಅಸ್ತ್ರ ಬಳಕೆ
ವಾರದ ಹಿಂದೆ ಮಳೆ ಬಂದಾಗ ಪ್ರತಿಭಟನೆ ನಡೆಸಿದ್ದ ನಲಪಾಡ್, ʻತೊಲಗಲಿ ತೊಲಗಲಿ, ಬಿಜೆಪಿ ತೊಲಗಲಿ, ಜೀವವಿದ್ದರೆ ಜೀವನ – ಬಿಜೆಪಿಯಿದ್ದರೆ ದಹನ, ರಾಜಕಾಲುವೆ ನಿರ್ಮಿಸಿ, ಮಳೆಯಿಂದ ಜನರನ್ನು ರಕ್ಷಿಸಿ ಎಂಬಿತ್ಯಾದಿ’ ಘೋಷಣೆ ಕೂಗುತ್ತ ಪ್ಲಾಸ್ಟಿಕ್ ಟ್ಯೂಬ್ ಮೇಲೆ ಕುಳಿತು ಮೊಹಮ್ಮದ್ ನಲಪಾಡ್ ಪ್ರತಿಭಟನೆ ನಡೆಸಿದ್ದರು. ನಲಪಾಡ್ಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಾಥ್ ನೀಡಿದ್ದರು.