ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರೋರಾತ್ರಿ ಗುಂಡಿ ಮುಚ್ಚುವ ಕೆಲಸಗಳು ಪ್ರಾರಂಭವಾಗಿದೆ. ಬಿಬಿಎಂಪಿ ಮಧ್ಯರಾತ್ರಿಯಿಂದಲೇ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯದಲ್ಲಿ ತೊಡಗಿಕೊಂಡಿದೆ.
ಹೌದು. ರಸ್ತೆಗುಂಡಿಗಳನ್ನು ಮುಚ್ಚುವಂತೆ ಹೈಕೋರ್ಟ್ ಚಾಟಿ ಬೀಸಿದೆ. ಈ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ತಡರಾತ್ರಿಯಿಂದಲೇ ಗುಂಡಿಗಳನ್ನು ಮುಚ್ಚುವ ಕಾರ್ಯಾಚರಣೆ ಪ್ರಾರಂಭಿಸಿದೆ.
ನಗರದ ಕೆಆರ್ ಸರ್ಕಲ್, ಚಾಲುಕ್ಯ ಸಿಗ್ನಲ್ ಸೇರಿದಂತೆ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದೆ. ಹೈಕೋರ್ಟ್ ನಗರದ್ಯಾಂತ ಎಷ್ಟು ಗುಂಡಿಗಳನ್ನು ಮುಚ್ಚಿದ್ದೀರಾ ಅಂತಾ ವಿವಿರಣೆ ಕೇಳಿತ್ತು. ಈ ಬೆನ್ನಲ್ಲೆ ರಾತ್ರಿ ಚಳಿಬಿಟ್ಟು ಬಿಬಿಎಂಪಿ ಕಾರ್ಯಚರಣೆಗೆ ಇಳಿದಿದೆ ಎನ್ನಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv