ಬೆಳಗಾವಿ: ನಗರದ ನಿವಾಸಿ ಅವಿನಾಶ್ ಪೋತದಾರಗೆ (Avinash Potdar) ಬಿಸಿಸಿಐ (BCCI) ಮಹತ್ವದ ಜವಾಬ್ದಾರಿ ನೀಡಿದೆ. ನಾಳೆ ನಡೆಯುವ ದಕ್ಷಿಣ ಆಫ್ರಿಕಾ ಮತ್ತು ಭಾರತ (India vs South Africa) ನಡುವಿನ ಟಿ-20 (T20) ಪಂದ್ಯಕ್ಕೆ ಪರೀವೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಇಲ್ಲಿನ ಜಾಧವ್ ನಗರದ ನಿವಾಸಿ ಆಗಿರುವ ಅವಿನಾಶ್ ಪೋತದಾರ್ ಕಳೆದ ಎರಡು ದಶಕಗಳಿಂದ ಸತತವಾಗಿ ಕೆಎಸ್ಸಿಎ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಎಸ್ಸಿಎ ಧಾರವಾಡ ವಲಯದ ಕನ್ವೀನರ್ ಆಗಿರುವ ಅವಿನಾಶ್ ಪೋತದಾರ್ ಉದ್ಯಮಿಯು ಆಗಿದ್ದಾರೆ. ಇದನ್ನೂ ಓದಿ: ಭಾರತ Vs ಆಸ್ಟ್ರೇಲಿಯಾ ಹೈವೋಲ್ಟೆಜ್ ಪಂದ್ಯದ ನಡುವೆ ಮೊಳಗಿತು ಜೈಶ್ರೀರಾಮ್ ಉದ್ಘೋಷ
ಕಬ್ಬು ನುರಿಸುವ ಕಾರ್ಖಾನೆ, ಸಿನಿಮಾ ಟಾಕೀಸ್ ಸೇರಿದಂತೆ ಹಲವು ಉದ್ಯಮಗಳು ಅವಿನಾಶ್ ಪೋತದಾರ್ ನಡೆಸುತ್ತಿದ್ದಾರೆ. ಇದೀಗ ನಾಳೆಯಿಂದ ನಡೆಯುವ ಭಾರತ-ದಕ್ಷಿಣ ಆಫ್ರಿಕಾ ಟಿ-20 ಸರಣಿಗೆ ಪರಿವೀಕ್ಷಕರಾಗಿ ಆಯ್ಕೆ ಆಗಿದ್ದಾರೆ. ನಾಳೆ ತಿರುವನಂತಪುರಂನಲ್ಲಿ ಚೊಚ್ಚಲ ಟಿ-20 ಪಂದ್ಯದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಪಂದ್ಯಗೆದ್ದ ಖುಷಿ – ರೋಹಿತ್ಗೆ ಹೊಡೆದು ಸಂಭ್ರಮಿಸಿದ ಕೊಹ್ಲಿ