Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಷಭ್‌ ಪಂತ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ರಿಷಭ್‌ ಪಂತ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ

Cricket

ರಿಷಭ್‌ ಪಂತ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ

Public TV
Last updated: April 4, 2024 12:52 pm
Public TV
Share
2 Min Read
Delhi Capitals Rishab Pant
SHARE

ವಿಶಾಖಪಟ್ಟಣಂ: ಸತತ ಎರಡು ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್‌ ಮಾಡಿದ್ದಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡದ ನಾಯಕ ರಿಷಭ್‌ ಪಂತ್‌ಗೆ ಬಿಸಿಸಿಐ (BCCI) 24 ಲಕ್ಷ ರೂ. ದಂಡ ವಿಧಿಸಿದೆ.

ರಿಷಭ್‌ ಪಂತ್‌ (Rishabh Pant) ಅವರಿಗೆ 24 ಲಕ್ಷ ರೂ. ದಂಡ ವಿಧಿಸಿದರೆ ತಂಡದ ಇಂಪ್ಯಾಕ್ಟ್‌ ಆಟಗಾರ ಅಭಿಷೇಕ್‌ ಸೇರಿದಂತೆ ಉಳಿದ ಆಟಗಾರರಿಗೆ 6 ಲಕ್ಷ ರೂ. ದಂಡ ವಿಧಿಸಲಾಗಿದೆ.

ಬುಧವಾರ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ವಿರುದ್ಧ ನಿಧಾನಗತಿಯ ಬೌಲಿಂಗ್‌ ಮಾಡಿದ್ದರೆ, ಮಾರ್ಚ್‌ 21 ರಂದು ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ವಿರುದ್ದದ ಪಂದ್ಯದಲ್ಲಿ ಡೆಲ್ಲಿ ನಿಧಾನಗತಿಯ ಬೌಲಿಂಗ್‌ ಮಾಡಿತ್ತು.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಕೋಲ್ಕತ್ತಾ 7 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 272 ರನ್ ಹೊಡೆದಿತ್ತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ 17.2 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್‌ ಆಯ್ತು. ಇದನ್ನೂ ಓದಿ: 2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು – ಐಪಿಎಲ್‌ ಇತಿಹಾಸದಲ್ಲಿ ಮತ್ತೊಂದು ವಿಶೇಷ ಸಾಧನೆ

KKR 2

24 ಲಕ್ಷ ಯಾಕೆ?
ಐಪಿಎಲ್‌ನಲ್ಲಿ ಮೊದಲ ಬಾರಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಎರಡನೇ ಬಾರಿ ಈ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ರೂ. ದಂಡದ ಜೊತೆ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ.

ಐಪಿಎಲ್‌ ನಿಯಮದ ಪ್ರಕಾರ ಒಂದು ತಂಡ 20 ಓವರ್‌ಗಳನ್ನು 90 ನಿಮಿಷದ ಒಳಗಡೆ ಮುಗಿಸಬೇಕು. ಈ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣ ಮಾಡದೇ ಇದ್ದರೂ 20ನೇ ಓವರ್‌ ಅನ್ನು 90ನೇ ನಿಮಿಷದಲ್ಲೇ ಆರಂಭಿಸಬೇಕು. ಈ ನಿಯಮವನ್ನು ಮೊದಲ ಬಾರಿ ಉಲ್ಲಂಘಿಸಿದರೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ.

DC 2

ಪ್ರತಿ ಪಂದ್ಯದಲ್ಲಿ 2 ನಿಮಿಷ 30 ಸೆಕೆಂಡಿನ 4 ಸ್ಟ್ರಟೆಜಿಕ್‌ ಟೈಮ್‌ ಔಟ್‌ ಬ್ರೇಕ್‌ಗಳು ಇರುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ ತಂಡ 6-9 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು. ಎರಡನೇ ಸ್ಟ್ರಟೆಜಿಕ್‌ ಟೈಮ್‌ ಔಟ್‌ ಅನ್ನು ಬ್ಯಾಟಿಂಗ್ ತಂಡ 13-16 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು.  ಇದನ್ನೂ ಓದಿ: ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆ – ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆ?

ದಂಡ ಯಾಕೆ?
ಐಪಿಎಲ್‌ ಅಂದ್ರೆ ಬಿಸಿನೆಸ್‌. ಇಲ್ಲಿ ಹಣದ ಹೊಳೆಯೇ ಹರಿಯುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಪ್ರತಿ ಸೆಕೆಂಡ್‌ ಬಹಳ ಮುಖ್ಯ.

Delhi Capitals 2

ಮಳೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಪಂದ್ಯಕ್ಕೆ ಅಡ್ಡಿಯಾದರೆ ಅದು ಬೇರೆ ವಿಷಯ. ಆದರೆ ಒಂದು ತಂಡ ನಿಧಾನಗತಿ ಬೌಲಿಂಗ್‌ ಮಾಡಿದರೆ ಅದು ಐಪಿಎಲ್‌ ದಿನದ ವಹಿವಾಟಿನ ಮೇಲೆ ಪರಿಣಾಮ ಬೀರುತ್ತದೆ. ವೆಚ್ಚಗಳು ಜಾಸ್ತಿಯಾಗುತ್ತದೆ.

ಐಪಿಎಲ್‌ಗೆ ಹೆಚ್ಚಿನ ಆದಾಯ ಬರುತ್ತಿರುವುದು ಟಿವಿ ರೈಟ್ಸ್‌ನಿಂದ. ಟಿವಿಯಲ್ಲಿ ಪ್ರತಿ ಸೆಕೆಂಡ್‌ ಬಹಳ ಮುಖ್ಯ. ಅದರಲ್ಲೂ 2 ಪಂದ್ಯ ಒಂದೇ ದಿನ ನಿಗದಿಯಾದರೆ ಎರಡನ್ನು ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ. ಯಾಕೆಂದರೆ ಜಾಹೀರಾತುಗಳು ಮೊದಲೇ ಬುಕ್‌ ಆಗಿರುತ್ತದೆ.

ಏನೇ ಮಾಡಿದರೂ ಶಿಸ್ತು ಇರಬೇಕು. ಹೀಗಾಗಿ ಯಾರಿಗೂ ಸಮಸ್ಯೆ ಆಗದೇ ಇರಲು ಮತ್ತು ಎಲ್ಲ ಸರಿಯಾದ ಸಮಯಕ್ಕೆ ಮುಕ್ತಾಯವಾಗಲು ಪಂದ್ಯ ಮುಗಿಯಲು ಸಮಯವನ್ನು ನಿಗದಿ ಮಾಡಲಾಗಿದೆ. ಹೆಚ್ಚು ಸಮಯ ತೆಗೆದುಕೊಂಡರೆ ದಂಡ ವಿಧಿಸಲಾಗುತ್ತದೆ. ಈ ಕಾರಣಕ್ಕೆ ಶಿಸ್ತುಬದ್ಧವಾಗಿ ನಡೆದುಕೊಂಡ ತಂಡಕ್ಕೆ ಫೇರ್‌ ಪ್ಲೇ ಅಂಕಗಳನ್ನು ನೀಡಲಾಗುತ್ತದೆ. ಇಬ್ಬರು ಫೀಲ್ಡ್‌ ಅಂಪೈರ್‌ ಮತ್ತು ಮೂರನೇ ಅಂಪೈರ್‌ ಈ ಅಂಕವನ್ನು ತಂಡಗಳಿಗೆ ನೀಡುತ್ತಾರೆ.

 

TAGGED:bcciDelhi CapitalsRishabh Pantಐಪಿಎಲ್ಕ್ರಿಕೆಟ್ಡೆಲ್ಲಿ ಕ್ಯಾಪಿಟಲ್ಸ್ಬಿಸಿಸಿಐರಿಷಭ್ ಪಂತ್
Share This Article
Facebook Whatsapp Whatsapp Telegram

Cinema news

Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories
Rishab Shetty
ಕಾಗದದ ಮೇಲೆ ಹುಟ್ಟಿದ ಪಾತ್ರ ಜೀವ ಪಡೆದಾಗ… `ಕಾಂತಾರ’ದ ಆತ್ಮಕಥೆ ಬಿಚ್ಚಿಟ್ಟ ರಿಷಬ್
Cinema Latest Sandalwood Top Stories

You Might Also Like

Shehbaz Sharif
Latest

ಪಾಕ್‌ ಪ್ರಧಾನಿಗೆ ವಿಶ್ವವೇದಿಕೆಯಲ್ಲಿ ಅವಮಾನ – ಪುಟಿನ್‌ ಭೇಟಿಗಾಗಿ 40 ನಿಮಿಷ ಕಾದು ಕುಳಿತ ಶೆಹಬಾಜ್ ಷರೀಫ್

Public TV
By Public TV
4 minutes ago
Gadag Bidar BAMS Student Death
Bidar

ನೇಣುಬಿಗಿದ ಸ್ಥಿತಿಯಲ್ಲಿ BAMS ವಿದ್ಯಾರ್ಥಿ ಶವ ಪತ್ತೆ – ಕಾಲೇಜು ವಿರುದ್ಧ FIR, ಮುಗಿಲುಮುಟ್ಟಿದ ಪೋಷಕರ ಆಕ್ರಂದನ

Public TV
By Public TV
10 minutes ago
DK Shivakumar and siddaramaiah 2
Bengaluru City

ಸಿಎಂ-ಡಿಸಿಎಂ ಶನಿವಾರ ದೆಹಲಿ ಪ್ರಯಾಣ – ಡಿಕೆ ಆಪ್ತರೂ ಕೂಡ ದಿಲ್ಲಿಗೆ ತೆರಳಲು ಸಿದ್ಧತೆ

Public TV
By Public TV
60 minutes ago
Rishab Shetty
Dakshina Kannada

ರಿಷಬ್ ಹರಕೆ ನೇಮೋತ್ಸವ ವಿವಾದ – ಹಿರಿಯರು ಹೇಳಿದ ಉಪದೇಶದ ರೀತಿ ದೈವ ನರ್ತನ ಮಾಡಿದ್ದೇನೆ: ಮುಖೇಶ್

Public TV
By Public TV
1 hour ago
Ganiga Ravikumar
Districts

ಮಂಡ್ಯದಲ್ಲಿ ಟ್ರಾಮಾ ಕೇರ್ ಸೆಂಟರ್‌ಗೆ ಜಾಗ ಕೊಡಲು ಸಿದ್ಧ – ರವಿ ಗಣಿಗ

Public TV
By Public TV
2 hours ago
Rahul Gandhi Lok Sabha
Latest

ದೆಹಲಿ ವಾಯು ಮಾಲಿನ್ಯ ಕುರಿತು ಚರ್ಚೆಗೆ ರಾಹುಲ್ ಮನವಿ – ಕೇಂದ್ರ ಸಮ್ಮತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?