ಬೆಂಗಳೂರು: ಡಿಬಾರ್ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
- Advertisement 2
ಮೃತ ದುರ್ದೈವಿಯನ್ನು ಭವ್ಯ(21) ಎಂದು ಗುರುತಿಸಲಾಗಿದೆ. ಕೋರಮಂಗಲದ ಖಾಸಗಿ ಕಾಲೇಜಿನಲ್ಲಿ ಭವ್ಯ ಮೊದಲ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಆದರೆ ನಿನ್ನೆ ನಡೆದ ಎಕ್ಸಾಂನಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಆರೋಪಿಸಿ ಡಿಬಾರ್ ಮಾಡಿದ್ದರು. ಈ ವಿಚಾರವನ್ನು ಭವ್ಯ ಸೋದರಿ ದಿವ್ಯಾಗೆ ಕರೆ ಮಾಡಿ ನನ್ನನ್ನು ಡಿಬಾರ್ ಮಾಡಿದ್ದಾರೆ ಹಾಗಾಗಿ ನಾನು ಬದುಕುವುದಿಲ್ಲ ಎಂದು ನೋವು ಹಂಚಿಕೊಂಡಿದ್ದರು. ಇದನ್ನೂ ಓದಿ: ಮೈಸೂರಿನಲ್ಲಿದೆ ಕಾಡುವ ಕಥನ: ಕೇವಲ ಪ್ರೀತಿಕಥೆಯಲ್ಲ ರೋಚಕತೆಯೂ ಇಲ್ಲುಂಟು
- Advertisement 3
- Advertisement 4
ಇದರಿಂದಾಗಿ ಗಾಬರಿಗೊಂಡ ದಿವ್ಯಾ ಕೂಡಲೇ ಭವ್ಯ ಅವರ ತಂದೆಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಅಷ್ಟೊತ್ತಿಗೆ ಭವ್ಯ ಮೃತಪಟ್ಟಿದ್ದಾರೆ. ಇದೀಗ ಈ ಸಂಬಂಧ ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಜಿಮ್ ಟ್ರೇನರ್ ಅಂಜನ್ ಈಗ ಹೀರೋ: ‘ಅಂಜನ್’ ಟ್ರೈಲರ್ ಬಿಡುಗಡೆ ಮಾಡಿದ ಶಾಸಕ ರವಿ ಸುಬ್ರಮಣ್ಯಂ