ಬೆಂಗಳೂರು: ಲೇಟ್ ನೈಟ್ ಲಾಂಗ್ ಡ್ರೈವ್ ಹೋಗೋ ಯುವಕ ಯುವತಿಯರೇ ಎಚ್ಚರವಾಗಿರಿ. ಯಾಕಂದ್ರೆ ನಡುರಸ್ತೆಯಲ್ಲಿ ಬೈಕ್ ಅಡ್ಡ ಹಾಕುತ್ತಾರೆ. ಅಲ್ಲದೆ ಬೆದರಿಸಿ ಸುಲಿಗೆ ಮಾಡುತ್ತಾರೆ. ಅಂತೆಯೇ ಲವರ್ಸ್ ಗಳನ್ನೇ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಬೆಂಗಳೂರಿನ ಹೊರವಲಯದ ದೇವನಹಳ್ಳಿ ಪೊಲೀಸರು ಕಾರು ಚಾಲಕ ಸುಬ್ರಮಣಿ ಸೇರಿ ಅನಿಲ್ ಕುಮಾರ್ ಹಾಗೂ ಪವನ್ ಕುಮಾರ್ನನ್ನು ಬಂಧಿಸಿದ್ದಾರೆ. ಇವರು ಸಿಟಿ ಹೊರವಲಯದಲ್ಲಿ ಲೈಟ್ ನೈಟ್ ಲಾಂಗ್ ಬರುವ ಪ್ರೇಮಿಗಳನ್ನು ಸುಲಿಗೆ ಮಾಡುತ್ತಿದ್ದರು. ಇದನ್ನೂ ಓದಿ: ಕುಡಿದ ಮತ್ತಲ್ಲಿ ವಕೀಲನ ಹಲ್ಲು ಮುರಿಯುವಂತೆ ಹಲ್ಲೆ – ದೊಡ್ಡವರ ಮಕ್ಕಳಿಂದ ಗೂಂಡಾವರ್ತನೆ
ಜುಲೈ 8ರಂದು ಬೈಕ್ ನಲ್ಲಿ ಬರುತ್ತಿದ್ದ ಯುವಕ- ಯುವತಿಯರನ್ನು ಅಡ್ಡಗಟ್ಟಿದ್ರು. ಅಲ್ಲದೆ ಯುವಕನಿಗೆ ರಾಡ್ ನಿಂದ ಹಲ್ಲೆ ಮಾಡಿ ಕತ್ತಿನಲ್ಲಿ ಚಿನ್ನದ ಚೈನ್ ಕಸಿದು, ಯುವತಿ ಮುಂದೆಯೇ ಹಲ್ಲೆ ಮಾಡಿದ್ರು. ನಂತರ ಹತ್ತಿರದ ಎಟಿಎಂ ಗೆ ಕರೆದುಕೊಂಡು ಹೋಗಿ 15,000 ಹಣ ಡ್ರಾ ಮಾಡಿಸಿಕೊಂಡು ಹೋಗಿದ್ದರು.
ಈ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ವೇಳೆ ನಗರದ ಹೊರವಲಯಕ್ಕೆ ಬರುವ ಲವರ್ಸ್ ಗಳನ್ನೇ ಟಾರ್ಗೆಟ್ ಸುಲಿಗೆ ಮಾಡ್ತಿರೋದು ಬೆಳಕಿಗೆ ಬಂದಿದೆ. ಕೃತ್ಯಕ್ಕೆ ಬಳಸಿದ್ದ ಕಾರು, ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.