Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷದ ಸಂಭ್ರಮಾಚರಣೆಗೆ ಹೆಚ್ಚಿನ ಭದ್ರತೆ – ಬೆಂಗಳೂರು ಪೊಲೀಸರಿಗೆ 35 ಅಂಶಗಳ ಟಾಸ್ಕ್‌ ಕೊಟ್ಟ ಕಮಿಷನರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸ ವರ್ಷದ ಸಂಭ್ರಮಾಚರಣೆಗೆ ಹೆಚ್ಚಿನ ಭದ್ರತೆ – ಬೆಂಗಳೂರು ಪೊಲೀಸರಿಗೆ 35 ಅಂಶಗಳ ಟಾಸ್ಕ್‌ ಕೊಟ್ಟ ಕಮಿಷನರ್

Bengaluru City

ಹೊಸ ವರ್ಷದ ಸಂಭ್ರಮಾಚರಣೆಗೆ ಹೆಚ್ಚಿನ ಭದ್ರತೆ – ಬೆಂಗಳೂರು ಪೊಲೀಸರಿಗೆ 35 ಅಂಶಗಳ ಟಾಸ್ಕ್‌ ಕೊಟ್ಟ ಕಮಿಷನರ್

Public TV
Last updated: December 21, 2022 11:51 am
Public TV
Share
6 Min Read
Pratap Reddy
SHARE

ಬೆಂಗಳೂರು: ನಗರದಲ್ಲಿ ಈಗಾಗಲೇ ಹೊಸ ವರ್ಷದ (New Year) ಸಂಭ್ರಮದ ತಯಾರಿ ಆರಂಭಗೊಂಡಿದೆ. ಈ ನಡುವೆ ಹೊಸ ವರ್ಷಸಂಭ್ರಮಾಚರಣೆಯ ಹೊಣೆ, ಭದ್ರತಾ ಹೊಣೆಯನ್ನು ಎಸಿಪಿ (ACP), ಡಿಸಿಪಿ (DCP) ಹಾಗೂ ಹೆಚ್ಚುವರಿ ಪೊಲೀಸ್ ಆಯಕ್ತರು ಇನ್ಸ್‌ಪೆಕ್ಟರ್‌ಗಳ ಹೆಗಲಿಗೆ ಹೊರಿಸಲಾಗಿದೆ. ಭದ್ರತೆಗೆ ಯಾವೇಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು 35 ಅಂಶಗಳನ್ನು ಒಳಗೊಂಡ ಪಟ್ಟಿಯೊಂದಿಗೆ ಕಮಿಷನರ್ ಪ್ರತಾಪ್ ರೆಡ್ಡಿ (Pratap Reddy) ಹೊಸ ಟಾಸ್ಕ್ ನೀಡಿದ್ದಾರೆ.

Happy NewYear

ಆಯಾ ವಲಯ, ವಿಭಾಗದ ಬಂದೂಬಸ್ತ್ ಪ್ಲಾನ್ ಗಳನ್ನು ಡಿಸೆಂಬರ್ 21ರ ಒಳಗೆ ಕಮಿಷನರ್ ಕಛೇರಿಗೆ ಒಂದು ಪ್ರತಿ ನೀಡುವಂತೆ ಸೂಚನೆ ನೀಡಲಾಗಿದೆ. ಈ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.

35 ಅಂಶಗಳ ಟಾಸ್ಕ್:
1) ಉಪ ಪೊಲೀಸ್ ಆಯುಕ್ತರುಗಳು ತಮ್ಮ ಅಧೀನದ ಎಲ್ಲಾ ಪೊಲೀಸ್ ಠಾಣೆಗಳಿಗೆ ಇಲಾಖಾ ವತಿಯಿಂದ ಹಂಚಿಕೆಯಾಗಿರುವ ಎಲ್ಲಾ ದ್ವಿ-ಚಕ್ರ ವಾಹನಗಳನ್ನು ಮೊಬೈಲ್ ಪೆಟ್ರೋಲಿಂಗ್ ವಾಹನಗಳನ್ನಾಗಿ ಉಪಯೋಗಿಸಿ ಸೂಕ್ತ ಗಸ್ತು ನಿರ್ವಹಿಸುವ ಬಗ್ಗೆ ಕ್ರಮ ಕೈಗೊಳ್ಳುವುದು.

2) ಉಪ ಪೊಲೀಸ್ ಆಯುಕ್ತರುಗಳು ಹೊಸ ವರ್ಷಾಚರಣೆ ಬಂದೋಬಸ್ತ್ ಯೋಜನೆಯಲ್ಲಿ ವಲಯವಾರು ಬಂದೋಬಸ್ತ್ ಮತ್ತು ಸೆಕ್ಟರ್ ಮೊಬೈಲ್‍ಗಳನ್ನು ಕರ್ತವ್ಯಕ್ತಿ ನಿಯೋಜಿಸಿ, ಅವುಗಳಿಗೆ ನಿಗದಿತ ಸಮಯ ಹಾಗೂ ನಿಗದಿತ ರೂಟ್ ಅನ್ನು ಕೊಟ್ಟು, ಸೆಕ್ಟರ್ ಪೆಟ್ರೋಲಿಂಗ್ ಅನ್ನು ವ್ಯವಸ್ಥಿತವಾಗಿ ಏರ್ಪಡಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಸ್ನೇಹಿತರನ್ನು ಮೆಚ್ಚಿಸಲು ಪಾರ್ಟಿಗೆ ಗನ್ ತೆಗೆದುಕೊಂಡು ಹೋದ ವ್ಯಕ್ತಿ ಪೊಲೀಸರಿಗೆ ಅತಿಥಿಯಾದ

NEW YEAR 2

3) ಹೊಸ ವರ್ಷಾಚರಣೆಯನ್ನು ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಮುಂಗಡವಾಗಿ ಮಾಹಿತಿ ಸಂಗ್ರಹಿಸಿ ಅಂತಹ ಸಂಘ ಸಂಸ್ಥೆಗಳ ಚಲನವಲನಗಳ ಬಗ್ಗೆ ಗುಪ್ತ ಮಾಹಿತಿ ಸಂಗ್ರಹಿಸಿ, ಅಗತ್ಯ ಮುನ್ನೆಚ್ಚಕ ಕ್ರಮಗಳನ್ನು ಕೈಗೊಳ್ಳುವುದು.

4) ಉಪ ಪೊಲೀಸ್ ಆಯುಕ್ತರುಗಳು ಎಲ್ಲಾ ಮಾಲ್‍ಗಳ ವ್ಯವಸ್ಥಾಪಕರಿಗೆ ಲಿಖಿತವಾದ ಸೂಚನೆ ನೀಡಿ, ಅವರುಗಳು ಮಾಲ್‍ಗಳಿಗೆ ಒಳಬರುವ ವ್ಯಕ್ತಿಗಳ ವೈಯಕ್ತಿಕ ಶೋಧನೆ ಹಾಗೂ ಅವರುಗಳ ಲಗೇಜುಗಳ ಪರಿಶೀಲನೆಯನ್ನು ಹೆಚ್.ಹೆಚ್.ಎಂಡಿ/ಡಿ.ಎಫ್.ಎಂ.ಡಿ. ಇವುಗಳನ್ನು ಅಳವಡಿಸಿ ಪರಿಶೀಲನೆ ಮಾಡುವ ಅಗತ್ಯತೆ ಬಗ್ಗೆ ಮತ್ತೊಮ್ಮೆ ತಿಳಿಸುವುದು.

5) ಮಾಲ್‍ಗಳಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳು ಸುಸ್ಥಿತಿಯಲ್ಲಿರುವ ಬಗ್ಗೆ, ಮಾಲ್‍ಗಳಿಗೆ ಆಗಮಿಸುವ ವಾಹನಗಳನ್ನೂ ಸಹ ಸೂಕ್ತವಾಗಿ ಪರಿಶೀಲಿಸಿದ ನಂತರ ಒಳಪ್ರವೇಶಿಸಲು ಅನುಮತಿ ನೀಡುವ ಬಗ್ಗೆ ಸಂಬಂಧಪಟ್ಟ ಮಾಲ್‍ಗಳ ಮಾಲೀಕರುಗಳಿಗೆ ಸೂಕ್ತ ತಿಳುವಳಿಕೆ ನೀಡುವುದು.

6) ಎಲ್ಲಾ ಪಿಐರವರುಗಳು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಡಿ.31 ರಂದು ರಾತ್ರಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡು ಮೇಲುಸ್ತುವಾರಿ ವಹಿಸುವುದು. ಇದನ್ನೂ ಓದಿ: ಕಾರಿನಲ್ಲೇ ನೈಟ್ರೋಜನ್‌ ಸಿಲಿಂಡರ್‌ ಲೀಕ್‌ ಮಾಡ್ಕೊಂಡು ಸೀನಿಯರ್‌ ಟೆಕ್ಕಿ ಆತ್ಮಹತ್ಯೆ

7) ಬಂದೋಬಸ್ತ್‌ಗೆ ನೇಮಕವಾದ ಸಿಬ್ಬಂದಿ ಮೇಲಾಧಿಕಾರಿಗಳ ಆದೇಶವಿಲ್ಲದೆ ಸ್ಥಳವನ್ನು ಬಿಡಬಾರದು.

New Year 3 copy

8) ಠಾಣಾ ವ್ಯಾಪ್ತಿಯಲ್ಲಿ ಪ್ರಮುಖ ಸ್ಥಳಗಳಲ್ಲಿ ವಾಹನ ತಪಾಸಣಾ ಪಾಯಿಂಟ್/ಪಿಕೆಟಿಂಗ್ ಪಾಯಿಂಟ್ ಸಿಬ್ಬಂದಿ ನಿಯೋಜಿಸುವುದು.

9) ಬಂದೋಬಸ್ತ್‌ಗೆ ನೇಮಕ ಮಾಡಿದ ಎಲ್ಲಾ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರತಕ್ಕದ್ದು ಹಾಗೂ ಸಿಬ್ಬಂದಿ ಹೆಲೈಟ್ ಮತ್ತು ಲಾಠಿಗಳನ್ನು ಹೊಂದಿರತಕ್ಕದ್ದು.

10) ಎಲ್ಲಾ ಸಿಬ್ಬಂದಿ, ಅಧಿಕಾರಿಗಳು ಜೆರ್ಸಿ ಹಾಗೂ ರೈನ್ ಕೋಟ್ ಹೊಂದಿರತಕ್ಕದ್ದು.

11) ರಾತ್ರಿ ಸಮಯದಲ್ಲಿ ಸಾರ್ವಜನಿಕರು ಮದ್ಯಪಾನ ಸೇವಿಸಿ ಬರುವ ಸಂಭವವಿರುವುದರಿಂದ ಅಧಿಕಾರಿ ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತಿಸಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಟ್ಟೆಚ್ಚರ ವಹಿಸುವುದು.

new year bag 1

12) ಪ್ರಮುಖವಾಗಿ ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಹೆಚ್ಚಿನ ಜನಸಂದಣಿ ಇರುತ್ತದೆ. ಇಂತಹ ಸಮಯದಲ್ಲಿ ಕಿಸೆ ಕಳ್ಳತನ, ಸರ ಅಪಹರಣ ಇತ್ಯಾದಿಗಳು ನಡೆಯುವ ಸಾಧ್ಯತೆಗಳಿರುವುದರಿಂದ ಅಧಿಕಾರಿ ಮತ್ತು ಸಿಬ್ಬಂದಿ, ಸಂಶಯಾಸ್ಪದ ವ್ಯಕ್ತಿಗಳ ಮೇಲೆ ತೀವ್ರ ನಿಗಾವಹಿಸುವುದು ಮತ್ತು ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸುವುದು

13) ಹೆಣ್ಣು ಮಕ್ಕಳನ್ನು ಚುಡಾಯಿಸುವವರ ವಿರುದ್ಧ ಕೂಡಲೇ ಗಮನಹರಿಸಿ ಕಾನೂನಿನಡಿಯಲ್ಲಿ ಬಂಧನಕ್ಕೆ ಒಳಗಾಗಿಸುವುದು.

14) ಕುಡಿದು ರಸ್ತೆಗಳ ಮೇಲೆ ಬಾಟಲಿಗಳನ್ನು ಹೊಡೆದು/ಎಸೆದು ದಾಂಧಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಅಗತ್ಯ ಕಾನೂನು ಕ್ರಮ ಜರುಗಿಸುವುದು. ಇದನ್ನೂ ಓದಿ: ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

15) ಮದ್ಯ ಮಾರಾಟ ಮಾಡುವ ಎಲ್ಲಾ ಸ್ಥಳಗಳ ಮಾಲೀಕರಿಗೆ ಕಲಂ.21 ಕರ್ನಾಟಕ ಅಬಕಾರಿ ಕಾಯ್ದೆ ಅಡಿಯಲ್ಲಿ ನೋಟಿಸ್ ಅನ್ನು ಜಾರಿ ಮಾಡುವುದು. ಸದರಿ ಅಂಗಡಿಗಳಲ್ಲಿ/ ಅದರ ಸಮೀಪದಲ್ಲಿ ಆಗುವ ಗಲಾಟೆ, ದೊಂಬಿ, ಮಹಿಳೆಯರನ್ನು ಚುಡಾಯಿಸುವುದು, ಬಾಟಲಿಗಳನ್ನು ಎಸೆಯುವುದು ಇತ್ಯಾದಿಗಳು ನಡೆದರೆ ಅವರನ್ನೇ ಹೊಣೆಗಾರರೆಂದು ಮಾಡಲಾಗುವುದು ಎಂದು ತಿಳಿಸತಕ್ಕದ್ದು.

new year party

16) ಜನರು ಸೇರುವ ರಸ್ತೆಗಳನ್ನು ಮತ್ತು ಪ್ರದೇಶಗಳನ್ನು ಗುರುತಿಸಿ ರಾತ್ರಿ ವೇಳೆಯಲ್ಲಿ ರೆಕಾರ್ಡ್ ಆಗುವಂತಹ ಸಿಸಿಟಿವಿ. ಕ್ಯಾಮೆರಾಗಳನ್ನು ಅಳವಡಿಸುವುದು.

17) ಎಲ್ಲಾ ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುವಂತೆ ಖಚಿತಪಡಿಸಿಕೊಳ್ಳುವುದು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳುವುದು.

18) ಡಿ.31 ರಂದು ಸಂಜೆ 6 ಗಂಟೆಯಿಂದ ಮರುದಿನ ಜ.1ರ ವರೆಗೆ ಬೆಳಗ್ಗೆ 6 ಗಂಟೆವರೆಗೆ ಎಲ್ಲಿಯೂ ವಿದ್ಯುತ್ ಕಡಿತವಾಗದಂತೆ ಬೆಸ್ಕಾಂ ಅಧಿಕಾರಿಗಳೊಂದಿಗೆ ಸಮಾಲೋಚಿಸುವುದು.

19) ಜನ ಹೆಚ್ಚಿಗೆ ಸೇರುವ ರಸ್ತೆಗಳಾದ ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸ್ಥಳಾವಕಾಶಕ್ಕನುಗುಣವಾಗಿ ಜನರ ಆಗಮನ ಮತ್ತು ನಿರ್ಗಮನವನ್ನು ನಿಯಂತ್ರಿಸುವುದು.

20) ಅಬಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಂಪರ್ಕವನ್ನಿಟ್ಟುಕೊಂಡು ಪಬ್‍ಗಳು, ಬಾರ್ & ರೆಸ್ಟೋರೆಂಟ್‍ಗಳು, ವೈನ್‍ಶಾಪ್‍ಗಳು ಇತ್ಯಾದಿ ಸ್ಥಳಗಳಲ್ಲಿ ಅನಧಿಕೃತವಾದ ಮಾರಾಟದ ಬಗ್ಗೆ ಜಂಟಿ ತಪಾಸಣೆಯನ್ನು ಕೈಗೊಳ್ಳುವುದು.

21) ಹೊಸ ವರ್ಷಾಚರಣೆಯ ಸಂದರ್ಭವನ್ನು ಬಳಸಿಕೊಂಡು ದಾಂಧಲೆ ಮಾಡುವ ಕಿಡಿಗೇಡಿಗಳ ವಿರುದ್ಧ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು.

New Year 3

22) ಎಲ್ಲಾ ಠಾಣೆಯ ಅಧಿಕಾರಿಗಳು, ಎಲ್ಲಾ ಉಪ ವಿಭಾಗಾಧಿಕಾರಿಗಳು ಚಟುವಟಿಕೆಯಲ್ಲಿರುವ ರೌಡಿಗಳು ಹಾಗೂ ಅವರ ಚಟುವಟಿಕೆಗಳ ಬಗ್ಗೆ ನಿಗಾ ವಹಿಸುವುದು

23) ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಕಬ್ಬನ್ ರೋಡ್‍ಗಳಲ್ಲಿ ವಾಹನ ನಿಲುಗಡೆಯನ್ನು ನಿಷೇದಿಸಿದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು. ಇದನ್ನೂ ಓದಿ: ಭೈರಿದೇವರಕೊಪ್ಪ ದರ್ಗಾ ತೆರವು ಕಾರ್ಯಾಚರಣೆ ಆರಂಭ

23) ಪ್ರಮುಖ ಫೈಓವರ್‌ಗಳ ಮೇಲೆ ವಾಹನ ಸಂಚಾರವನ್ನು ನಿಷೇಧಿಸಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು.

24) ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲಾ ಅಧಿಕಾರಿಗಳು ತಮ್ಮ ವಾಹನಗಳಿಗೆ ಪಿ.ಎ. ಸಿಸ್ಟಮ್ ಅಳವಡಿಸಿಕೊಳ್ಳುವುದು.

25) ಗಸ್ತು ಮತ್ತು ಪಾಯಿಂಟ್‍ಗಳಿಗೆ ನೇಮಕ ಮಾಡಿರುವ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಸ್ಥಳಗಳಲ್ಲಿ ಏನಾದರೂ ವಿಶೇಷತೆ ಕಂಡುಬಂದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ತಿಳುವಳಿಕೆ ನೀಡುವುದು.

26) ಇತ್ತೀಚಿನ ಭಯೋತ್ಪಾದಕ ಚಟುವಟಿಕೆಗಳ ಹಿನ್ನೆಲೆಯಲ್ಲಿ, ಕೆಲವು ಸಮಾಜ ಘಾತುಕ ಚಟುವಟಿಕೆಗಳು ಶಾಂತಿಭಂಗವನ್ನುಂಟು ಮಾಡುವ ಸಂಭವವಿದ್ದು ಅಂತಹವರ ಮೇಲೆ ಸೂಕ್ತ ನಿಗಾವಹಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು.

27) ಠಾಣೆಯ ಎಲ್ಲಾ ಹೊಯ್ಸಳ ಮತ್ತು ಚೀತಾಗಳು ಠಾಣಾ ಸರಹದ್ದಿನಲ್ಲಿ ಚುರುಕಾದ ಗಸ್ತು ಕರ್ತವ್ಯವನ್ನು ನಿರ್ವಹಿಸುವುದು.

28) ಬಂದೋಬಸ್ತ್ ಕರ್ತವ್ಯಕ್ಕೆ ಅವಶ್ಯಕತೆ ಇರುವ ಹೋಂಗಾಡ್ರ್ಸ್, ಸಿವಿಲ್ ಡಿಫೆನ್ಸ್ ಅಧಿಕಾರಿಗಳು, ಅಗ್ನಿಶಾಮಕ ವಾಹನಗಳು, ಅಂಬುಲೆನ್ಸ್ ವಾಹನಗಳು ಇತ್ಯಾದಿಗಳ ಬಗ್ಗೆ ಡಿ.31 ಒಳಗಾಗಿ ಕೋರಿಕೆಯನ್ನು ಈ ಕಛೇರಿಗೆ ಕಳುಹಿಸುವುದು.

New Year 1 copy

29) ಈ ಸಂಬಂಧ ಏರ್ಪಡಿಸಿರುವ ಬಂದೋಬಸ್ತ್ ಯೋಜನೆಯನ್ನು ಡಿ.31ರ ಒಳಗಾಗಿ ಈ ಕಛೇರಿಯ ಈಮೇಲ್ ableintbcp@ksp.gov.in ಗೆ ಹಾಗೂ ಒಂದು ಪ್ರತಿಯನ್ನು ಈ ಕಳುಹಿಸಿಕೊಡಲು ಸೂಚಿಸಿದೆ

30) ಉಪ ಪೊಲೀಸ್ ಕಮಿಷನರ್, ನಿಯಂತ್ರಣ ಕೋಣೆಯವರು ವಿಭಾಗೀಯ ಉಪ ಪೊಲೀಸ್ ಆಯುಕ್ತರುಗಳು ಕೋರಿರುವಂತೆ ಕೆ.ಎಸ್.ಆರ್.ಪಿ, ಸಿ.ಎ.ಆರ್ ತುಕಡಿಗಳನ್ನು ಮತ್ತು ಇತರೆ ವಾಹನಗಳನ್ನು ಅವರನ್ನು ಸಂಪರ್ಕಿಸಿ ಅವಶ್ಯಕತೆಗನುಗುಣವಾಗಿ ಅವರ ಕೋರಿಕೆಯ ಮೇರೆಗೆ ನಿಗದಿತ ಸ್ಥಳಗಳಿಗೆ ನಿಯೋಜಿಸುವುದು

31) ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಬಂದೋಬಸ್ತ್ ಯೋಜನೆಯಲ್ಲಿ ನಿಯೋಜಿಸಿರುವ ಸ್ಥಳಗಳನ್ನು ಹೊರತುಪಡಿಸಿ ಇನ್ಯಾವುದಾದರೂ ಸೂಕ್ಷ್ಮ/ಪ್ರಮುಖ ಸ್ಥಳಗಳಿದ್ದಲ್ಲಿ ಅಂತಹ ಸ್ಥಳಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸುವುದು.

32) ಉಪ ಪೊಲೀಸ್ ಆಯುಕ್ತರುಗಳು/ಸಹಾಯಕ ಪೊಲೀಸ್ ಆಯುಕ್ತರುಗಳು ತಮ್ಮ ವಿಭಾಗದ ಮತ್ತು ಉಪ ವಿಭಾಗಗಳ ಸಂಪೂರ್ಣ ಬಂದೋಬಸ್ತ್ ಉಸ್ತುವಾರಿಯನ್ನು ನೋಡಿಕೊಳ್ಳುವುದು.

33) ವಿಶೇಷ ಪೊಲೀಸ್ ಆಯುಕ್ತರು, ಸಂಚಾರದವರು ಸಂಚಾರ ವ್ಯವಸ್ಥೆಯ ಪೂರ್ಣ ಉಸ್ತುವಾರಿ ವಹಿಸುವುದು. ಇದನ್ನೂ ಓದಿ: ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿಯಲ್ಲಿ ಶಾರುಖ್ ಖಾನ್: ಈ ಸ್ಥಾನ ಪಡೆದ ಏಕೈಕ ಭಾರತದ ನಟ

34) ಅಪರ ಪೊಲೀಸ್ ಆಯುಕ್ತರು, ಪೂರ್ವ ಮತ್ತು ಪಶ್ಚಿಮ ರವರು ತಮ್ಮ ವಲಯಗಳ ಬಂದೋಬಸ್ತ್ ಮಾಡಿಕೊಳ್ಳುವುದು.

35) ಮಹಿಳೆಯರನ್ನು ಚುಡಾಯಿಸುವುದು ಕಂಡುಬಂದಲ್ಲಿ ಸದರಿ ಸ್ಥಳಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವುದು.

Live Tv
[brid partner=56869869 player=32851 video=960834 autoplay=true]

TAGGED:bengaluruNew Yearpolicepratap reddyಕಮಿಷನರ್ಬೆಂಗಳೂರುಹೊಸ ವರ್ಷ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Rajasthan Refinery Unit Fire
Latest

ನಾಳೆ ಪಿಎಂ ಮೋದಿ ಉದ್ಘಾಟಿಸಬೇಕಿದ್ದ 79,000 ಕೋಟಿ ಮೌಲ್ಯದ ರಿಫೈನರಿ ಘಟಕಕ್ಕೆ ಬೆಂಕಿ

Public TV
By Public TV
12 minutes ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

Public TV
By Public TV
45 minutes ago
bjp flag
Bengaluru City

ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ – ಇಡಿ ದಾಳಿಗೆ ಬಿಜೆಪಿ ಟೀಕೆ

Public TV
By Public TV
51 minutes ago
Sadhvi Satish Sail
Latest

ಮಗಳು ಬಿಸಿನೆಸ್ ಮಾಡಲಿ ಅಂತ ಸಿಎಂ, ಡಿಸಿಎಂ ಬಳಿ ಬುದ್ದಿ ಹೇಳಿಸಿದ್ದೆ: ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮಗಳ ಬಗ್ಗೆ ಸತೀಶ್‌ ಸೈಲ್‌ ಮಾತು

Public TV
By Public TV
1 hour ago
Doctor Ramesh who was supposed to marry his wifes sister tomorrow murdered Sirsi KHB Colony
Crime

ಇಂದು ಮದುವೆ ಆಗ್ಬೇಕಿದ್ದ ವೈದ್ಯನ ಹತ್ಯೆ ಕೇಸ್‌ – ಚಿನ್ನದ ಆಸೆಗೆ ಸ್ನೇಹಿತನಿಂದಲೇ ಮರ್ಡರ್‌

Public TV
By Public TV
1 hour ago
Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?