ಯಾರೂ ಯಾಕೆ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ- ನೋವನ್ನು ಅಕ್ಷರ ರೂಪಕ್ಕಿಳಿಸಿದ ಚಂದನಾ ಹೇಳಿದ್ದೇನು..?

Public TV
2 Min Read
CNG TEACHER

ಚಾಮರಾಜನಗರ: ಖಾಸಗಿ ಕಾಲೇಜಿನ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಚಂದುಳ್ಳಿ ಚೆಲುವೆಯ ಸಾವು ಎಲ್ಲರಿಗೂ ಶಾಕ್ ತಂದುಕೊಟ್ಟಿದೆ. ಈಕೆಯ ಸಾವಿನ ಸುದ್ದಿ ತಿಳಿದು ನೂರಾರು ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಎಲ್ಲದಕ್ಕಿಂತ ಹೆಚ್ಚಾಗಿ ಪಾಲಕರು ಮರುಗಿದ್ದಾರೆ.

CNG LECTURE 1

ಆಕೆ ಬಾಳಿ ಬದುಕಬೇಕಿದ್ದ ಯುವತಿ. ಆದ್ರೆ ಆಕೆಗೆ ಏನಾಯ್ತೋ ಏನೋ ತನ್ನ ಹುಟ್ಟುಹಬ್ಬದ ದಿನವೇ ತನ್ನ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾಳೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಉಪನ್ಯಾಸಕಿ ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ಚೆಲುವೆ. ಚಂದನಾ ಚಾಮರಾಜನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೆಎಸ್‍ಎಸ್ ಕಾಲೇಜಿನ ಹಾಸ್ಟೆಲ್‍ನಲ್ಲೇ ವಾಸ್ತವ್ಯ ಹೂಡಿದ್ದಳು. ಇದನ್ನೂ ಓದಿ: ಪಾಕ್ ರಾಜಕಾರಣಿ ಸಂಬಂಧಿ ಕಾರ್ ಓವರ್‌ಟೇಕ್ – ಹಿಂದೂ ಕುಟುಂಬದ ಮೇಲೆ ದಾಳಿ

Police Jeep

ಈಕೆ ಎಲ್ಲರ ಜೊತೆಯಲ್ಲೂ ಉತ್ತಮ ಬಾಂದವ್ಯ ಹೊಂದಿದ್ರು. ಇವತ್ತು ಆಕೆಯ ಹುಟ್ಟುಹಬ್ಬ ಇತ್ತು. ಹೀಗಾಗಿ ಆಕೆಯ ಸ್ನೇಹಿತರು, ವಿದ್ಯಾರ್ಥಿಗಳು ಶುಭಾಶಯ ಕೋರಿದ್ರು. ಆದ್ರೆ ಇದಾದ ನಂತರ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಜೊತೆ ಕೊಠಡಿಯಲ್ಲಿದ್ದ ಸ್ನೇಹಿತರು ಹೊರಹೋದ ನಂತರ ತನ್ನ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಡೆತ್ ನೋಟ್‍ನಲ್ಲಿ ಬಯಲಾದ ಸತ್ಯ
ಆತ್ಮಹತ್ಯೆಗೂ ಮುನ್ನ ಚಂದನಾ ಡೆತ್‍ನೋಟ್ ಬರೆದಿಟ್ಟಿದ್ದು, ಯಾಕೆ ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಪ್ರಾರಂಭಿಸಿದ್ದು, ತನ್ನ ಮನದಾಳದ ನೋವನ್ನು ಅಕ್ಷರ ರೂಪ ನೀಡಿ ಕೊನೆಗೆ ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

letter

ತನ್ನ ಇಬ್ಬರು ಅಕ್ಕಂದಿರಿಗೆ ಸಾರಿ ಕೇಳಿರುವ ಚಂದನಾ, ತಂಗಿಯನ್ನು ಉದ್ದೇಶಿಸಿ ಯಾವುದೇ ಕಾರಣಕ್ಕೂ ಉಪನ್ಯಾಸಕಿ ಹುದ್ದೆಗೆ ಬರಬೇಡ ಎಂದು ತನ್ನ ಕೊನೆಯ ಸಲಹೆಯನ್ನು ಕೊಟ್ಟಿದ್ದಾರೆ.

ತಂದೆ ಜೊತೆ ಕೊನೆಯ ಬಾರಿ ಪಾನಿಪೂರಿ
ಇಂದು ಚಂದನಾಳ ಹುಟ್ಟುಹಬ್ಬವಾಗಿದ್ದು, ಆಕೆಯ ತಂದೆ ಕೇಕ್ ಕಟ್ ಮಾಡಿಸಲು ಸಕಲ ಸಿದ್ಧತೆಯನ್ನು ನಡೆಸಿದ್ದರು. ಸೋಮವಾರ ಸಂಜೆ ಅಷ್ಟೇ ಮಗಳೊಟ್ಟಿಗೆ ಪಾನಿಪೂರಿ ಸೇವಿಸಿ ಊರಿಗೆ ಬರುವಂತೆ ಹೇಳಿದ್ದರಂತೆ, ಬೆಳಗ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಕೂಡಲೇ ಅವರ ತಂದೆ ಹಾಸ್ಟೆಲ್‍ನ ಸೆಕ್ಯೂರಿಟಿಗೆ ಕರೆ ಮಾಡಿ ಚಂದನಾ ಫೋನ್ ತೆಗೆಯುತ್ತಿಲ್ಲವೆಂದು ತಿಳಿಸಿದ್ದಾರೆ. ಈ ವೇಳೆ ಚಂದನಾ ಕೊಠಡಿ ಬಳಿ ಹೋದ ವಾರ್ಡನ್ ಚಂದನಾ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಇದನ್ನೂ ಓದಿ:  ಮೊಹರಂ ಹಬ್ಬದಲ್ಲೂ ಅಪ್ಪು – ಹೊಂಡದಲ್ಲಿ ಪುನೀತ್ ಫೋಟೋ ಹಿಡಿದು ಬಂದ ಬಾಲಕ 

CNG LECTURE 2

ಕೂಡಲೇ ಆತ ಹಾಸ್ಟೆಲ್‍ನ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾನೆ. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *