ಚಾಮರಾಜನಗರ: ಶವಸಂಸ್ಕಾರಕ್ಕೆ (Funeral) ತೆರಳಿದ್ದ ವೇಳೆ ಹೆಜ್ಜೇನು ದಾಳಿ (Bee Attack) ನಡೆಸಿ ಹಲವರು ಗಾಯಗೊಂಡ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.
ಹೆಜ್ಜೇನು ದಾಳಿಯಲ್ಲಿ 42 ಮಂದಿ ಗಾಯಗೊಂಡಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದ ಮಹಾದೇವಯ್ಯ ಎಂಬವರ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಅಂತ್ಯಸಂಸ್ಕಾರದಲ್ಲಿ ಬೆಂಕಿ ಹಾಕಿದ್ದ ಹೊತ್ತಲ್ಲಿ ಮರದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದೆ. ಇದನ್ನೂ ಓದಿ: ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ: ಸ್ಕೇಟರ್ಗಳಿಗೆ ಚಿನ್ನ, ಬೆಳ್ಳಿ ನಾಣ್ಯ ನೀಡಿ ಗೌರವ
ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಹೆಚ್ಒ ಚಿದಂಬರಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ ಮೋರ್ಚಾದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ