ಬೆಳಗಾವಿ: ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆಯಲ್ಲೇ ನಕಲಿ ಪಾಸ್ ಹಾವಳಿ ಹೆಚ್ಚಾಗಿದೆ. ಪರಿಣಾದ ಇಲಾಖೆಯೂ 4.38 ಲಕ್ಷ ರೂ. ನಷ್ಟ ಅನುಭವಿಸಿದೆ.
ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲವಾಗಲು ಸರ್ಕಾರ ರಿಯಾಯಿತಿ ದರದಲ್ಲಿ ಬಸ್ ಪಾಸ್ ನೀಡುತ್ತಿದೆ. ಆದರೆ ಕಾರ್ಮಿಕರು ವಿದ್ಯಾರ್ಥಿಗಳ ಬಸ್ ಪಾಸ್ ಪಡೆದಿರುವ ಬಗ್ಗೆ ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದ ಉದ್ಯಮಬಾಗದ 21 ಕಾರ್ಮಿಕರು ವಿದ್ಯಾರ್ಥಿಗಳೆಂದು ಸುಳ್ಳು ದಾಖಲೆಗಳನ್ನು ನೀಡಿ ಒಂದು ಶೈಕ್ಷಣಿಕ ವರ್ಷದ ಅವಧಿಗೆ ಸಾರಿಗೆ ಸಂಸ್ಥೆಯಿಂದ ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಂತವರ ವಿರುದ್ಧ ಸಾರಿಗೆ ಸಂಸ್ಥೆಯ ಸಿಬ್ಬಂದಿ ದೂರು ದಾಖಲಿಸಿದ್ದಾರೆ.
2019ರ ಜೂನ್ 27ರಿಂದ 2020ರ ಏಪ್ರೀಲ್ ಅಂತ್ಯದ ವರೆಗೆ ಚಾಲ್ತಿಯಲ್ಲಿರುವಂತೆ ಪಾಸ್ ಉಪಯೋಗಿಸುತ್ತಿದ್ದರು. ಈ ಅವಧಿಯಲ್ಲಿ ಸಾರಿಗೆ ಸಂಸ್ಥೆಗೆ 4.38 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ದೂರು ದಾಖಲಿಸಿದ್ದಾರೆ.