Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂರು ದಿನಗಳ ಕಾರ್ಯಾಚರಣೆ ವಿಫಲ – ಕೊನೆಗೂ ಬದುಕಲಿಲ್ಲ ಬಾಲಕಿ ಕಾವೇರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮೂರು ದಿನಗಳ ಕಾರ್ಯಾಚರಣೆ ವಿಫಲ – ಕೊನೆಗೂ ಬದುಕಲಿಲ್ಲ ಬಾಲಕಿ ಕಾವೇರಿ

Belgaum

ಮೂರು ದಿನಗಳ ಕಾರ್ಯಾಚರಣೆ ವಿಫಲ – ಕೊನೆಗೂ ಬದುಕಲಿಲ್ಲ ಬಾಲಕಿ ಕಾವೇರಿ

Public TV
Last updated: April 25, 2017 12:09 pm
Public TV
Share
6 Min Read
cauvery borewell
SHARE

ಬೆಳಗಾವಿ: ರಾಜ್ಯ ಸರ್ಕಾರಕ್ಕೆ. ಜನಕ್ಕೆ ಎಷ್ಟು ಬಲಿ ಬೇಕೋ ಗೊತ್ತಿಲ್ಲ. ಕಳೆದ 3 ದಿನಗಳಿಂದ ನಡೀತಿದ್ದ ರಕ್ಷಣಾ ಕಾರ್ಯ ಫಲಿಸಲಿಲ್ಲ. ಅಥಣಿಯ ಝಂಜರವಾಡದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 6 ವರ್ಷದ ಬಾಲಕಿ ಕಾವೇರಿ ಬದುಕಲಿಲ್ಲ.

ಕಾವೇರಿ ಬದುಕಿ ಬರಲಿ ಅನ್ನೋ ಕೋಟಿ ಕೋಟಿ ಜನರ ಪ್ರಾರ್ಥನೆ ಆ ದೇವರಿಗೆ ತಲುಪಲಿಲ್ಲ. ಶನಿವಾರ ರಾತ್ರಿ 8 ಗಂಟೆಗೆ ಶುರುವಾದ ಕಾರ್ಯಾಚರಣೆ ಇವತ್ತು ರಾತ್ರಿ 8 ಗಂಟೆ ವರೆಗೂ ನಡೆಯಿತು. ಸತತ 48 ಗಂಟೆಗಳ ಕಾರ್ಯಾಚರಣೆ ಬಳಿಕ ಸುಮಾರು 25 ಅಡಿ ಆಳದಲ್ಲಿ ಬಾಲಕಿ ಕಾವೇರಿ ಶವ ಸಿಕ್ಕಿದೆ.

ಶವ ಕೊಳೆತಿರೋದ್ರಿಂದ ಅರ್ಧ ಶವ ಸಿಕ್ಕಿದೆ. ಇನ್ನರ್ಧ ಶವ ಸಿಗಬೇಕಿದೆ. ಅರ್ಧ ದೇಹ ಸಿಕ್ಕಿರೋದನ್ನ ರಕ್ಷಣಾ ಸಿಬ್ಬಂದಿ ಖಚಿತಪಡಿಸಿದ್ದಾರೆ. ಇನ್ನು ಈ ಬಗ್ಗೆ ಐಜಿ ರಾಮಚಂದ್ರ ರಾವ್ ಕೂಡಾ ಪಬ್ಲಿಕ್ ಟಿವಿ ಜೊತೆ ಮಾತಾಡಿ, ಶವ ಕೊಳೆತು ವಾಸನೆ ಬರ್ತಿದೆ. ಸಾವಿನ ಬಗ್ಗೆ ವೈದ್ಯರೇ ಖಚಿತಪಡಿಸಬೇಕು ಅಂತಾ ಹೇಳಿದ್ದಾರೆ. ಪೂರ್ತಿಯಾಗಿ ಶವ ಸಿಕ್ಕ ಬಳಿಕ ಅಧಿಕೃತ ಘೋಷಣೆ ಮಾಡೋ ಸಾಧ್ಯತೆ ಇದೆ.

ಸಂಜೆಯೇ ಕಾವೇರಿ ಬದುಕಿರೋದು ಅನುಮಾನ ಅಂತಾ ಪರೋಕ್ಷವಾಗಿ ಜಿಲ್ಲಾಧಿಕಾರಿ ಜಯರಾಮ್ ಹೇಳಿದ್ರು. ಬಾಲಕಿಯ ಯಾವುದೇ ಚಲನವಲನ ಇಲ್ಲ. ಕಾರ್ಯಾಚರಣೆ ಸ್ಥಳದಲ್ಲಿ ಕೊಳೆತ ವಾಸನೆ ಬರ್ತಿದೆ ಅಂತಾ ಕೂಡಾ ಹೇಳಲಾಗಿತ್ತು. ಆದರೂ ದೊಡ್ಡ ಆಸೆಯೊಂದಿಗೆ ಕಾರ್ಯಾಚರಣೆ ಮುಂದುವರಿದಿತ್ತು.

ಕಾರ್ಯಾಚರಣೆ ಹೀಗಿತ್ತು: 27 ಅಡಿ ಆಳದಲ್ಲಿ ಕಾವೇರಿಯ ಕೈಗಳು ಕ್ಯಾಮೆರಾಗೆ ಕಾಣಿಸಿದ್ದವು. ಹುಕ್ ಮೂಲಕ ಬಾಲಕಿಯನ್ನು ಐದಾರು ಬಾರಿ ಮೇಲೆತ್ತುವ ಪ್ರಯತ್ನ ಮಾಡಿದ್ರೂ ಯಶಸ್ವಿಯಾಗಲಿಲ್ಲ. ದೊಡ್ಡ ಗಾತ್ರದ ಬಂಡೆಗಳು ಸಿಕ್ಕಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗಿತ್ತು.

ಎನ್‍ಡಿಆರ್‍ಎಫ್ ಸಿಬ್ಬಂದಿ, ಎಂಎಲ್‍ಐಆರ್‍ಸಿ ಸಿಬ್ಬಂದಿಗಳಿಂದ ಕಾರ್ಯಾಚರಣೆ ಶನಿವಾರ ರಾತ್ರಿಯಿಂದಲೇ ನಡೆದಿತ್ತು. ಅವಸರ ಮಾಡಿದ್ರೆ ಬಾಲಕಿ ಕಾವೇರಿ ದೇಹಕ್ಕೆ ತೊಂದರೆಯಾಗುವ ಸಾಧ್ಯತೆಗಳಿರುವ ನಿಟ್ಟಿನಲ್ಲಿ ಈವರೆಗೂ ಸೂಕ್ಷ್ಮವಾಗಿ ಕಾರ್ಯಾಚರಣೆ ಮಾಡಿದ್ದೇವು ಅಂತಾ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹೇಳಿದ್ದಾರೆ.

ಸತತ ಕಾರ್ಯಾಚರಣೆಯ ಬಳಿಕ ಬಾಲಕಿ ಪತ್ತೆಯಾಗದ ಹಿನ್ನೆಲೆಯಲ್ಲಿ ರಂಧ್ರ ನಿರ್ಮಾಣ ಮಾಡಲು ನಿರ್ಧರಿಸಿದ್ದೇವು. ಆದ್ರೆ ಈ ವೇಳೆ ಬಂಡೆ ಕಲ್ಲುಗಳು ಅಡ್ಡಿಪಡಿಸಿದವು. ನಂತ್ರ ಯಂತ್ರೋಪಕರಣಗಳನ್ನು ಬಳಸಿ ರಂಧ್ರ ಕೊರೆಯುವುದಾಗಿ ನಿರ್ಧರಿಸಲಾಯಿತು. ಅಂತೆಯೇ ಕಾರ್ಯಾಚರಣೆ ಕೊನೆ ಹಂತ ತಲುಪಿತು ಅಂತಾ ಎನ್‍ಡಿಆರ್‍ಎಫ್ ಟೀಂನ ಅಧಿಕಾರಿ ಭಜೇಂದರ್ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಹೇಳಿದ್ರು.

ಬಾಲಕಿ ಕಾವೇರಿ ಕೊಳವೆ ಬಾವಿಯಲ್ಲಿ ಸಿಲುಕಿ 36 ಗಂಟೆ ನಂತ್ರ ಕೊಳವೆ ಬಾವಿ ಪಕ್ಕದಲ್ಲೇ 25 ಅಡಿ ಆಳದಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಯಿತು. ಬಾಲಕಿಯ ಕಾರ್ಯಾಚರಣೆಗೆ 2 ಹಿಟಾಚಿ, 2 ಜೆಸಿಬಿ ಬಳಕೆ ಮಾಡಲಾಗಿದ್ದು, ಇನ್ನು ಸ್ಥಳದಲ್ಲಿ ಅಗ್ನಿಶಾಮಕ ದಳ, ಎನ್‍ಡಿಆರ್‍ಎಫ್, ಎಂಎಲ್‍ಐಆರ್‍ಸಿ ಅಧಿಕಾರಿಗಳು ಹಾಗೂ ಹಟ್ಟಿ ಚಿನ್ನದ ಗಣಿಯ ನುರಿತ ತಜ್ಞರ ತಂಡವು ಕಾರ್ಯಾಚರಣೆ ನಡೆಸಿತ್ತು.

ಸರ್ಕಾರಕ್ಕೆ ಕಾವೇರಿ ತಾಯಿ ಮನವಿ: ನಮ್ಗೆ ಆಗಿರೋ ಆದ ಪರಿಸ್ಥಿತಿ ಬೇರೆಯವರಿಗೆ ಆಗೋದು ಬೇಡ, ಪರಿಹಾರವೂ ನಮ್ಗೆ ಬೇಡ. ರಾಜ್ಯದಲ್ಲಿ ಇರುವ ಎಲ್ಲಾ ತೆರೆದ ಬೋರ್‍ವೆಲ್‍ಗಳನ್ನ ಮುಚ್ಚಿಸಿ ಅಂತಾ ಕಾವೇರಿ ತಾಯಿ ಸವಿತಾ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದು, ನಮಗೆ ಪರಿಹಾರ ಬೇಡ ಏನೂ ಬೇಡ ಗೋಳಿಟ್ಟಿದ್ದಾರೆ.

ಸಾಂತ್ವನ ಹೇಳಲು, ಮನೋಸ್ಥೈರ್ಯ ತುಂಬಲು ಸಂಬಂಧಿಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು ಕುಟುಂಬದವರ ಬಳಿ ತೆರಳುತ್ತಿದ್ದಂತೆಯೇ ಅವರ ದುಃಖದ ಕಟ್ಟೆಯೊಡೆಯುತ್ತಿತ್ತು. ರೋದನ ಮುಗಿಲು ಮುಟ್ಟುತ್ತಿತ್ತು. ನೆತ್ತಿ ಸುಡುವ ಬಿಸಿಲನ್ನು ಲೆಕ್ಕಿಸದೇ ಸಂಬಂಧಿಕರು, ನೆರೆಹೊರೆಯವರು ಜಾಲಿ ಮರದ ಕೆಳಗೆ ಕುಳಿತು ಒಬ್ಬರನ್ನೊಬ್ಬರು ಸಂತೈಸುತ್ತಿದ್ದರು. ಬಾಲಕಿಯ ಉಳಿವಿಗಾಗಿ ಒಂದೆಡೆ ಪ್ರಾರ್ಥಿಸುತ್ತಿದ್ದರೆ, ಇನ್ನೊಂದೆಡೆ ಕಣ್ಣೀರ ಕೋಡಿ ಹರಿಯುತ್ತಿದ್ದ ದೃಶ್ಯಗಳು ಸೋಮವಾರ ಬಾಲಕಿಯ ರಕ್ಷಣಾ ಕಾರ್ಯಾಚರಣೆ ಸ್ಥಳದಲ್ಲಿ ಗೋಚರಿಸಿತ್ತು,

ಶೋಭಾ ಕರಂದ್ಲಾಜೆ ಕಿಡಿ: ಬೋರ್‍ವೆಲ್ ದುರಂತಕ್ಕೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಮಾತಾಡಿದ ಅವರು, ಸರ್ಕಾರದ ನಿರ್ಲಕ್ಷ್ಯದಿಂದ ಕೊಳವೆ ಬಾವಿ ದುರಂತಗಳು ಸಂಭವಿಸ್ತಿವೆ ಅಂತಾ ಆರೋಪ ಮಾಡಿದ್ರು. ಈ ನಡುವೆ ಕೊಳವೆ ಬಾವಿ ಮುಚ್ಚಲು ಬಿತ್ತಿ ಪತ್ರಗಳ ಮೂಲಕ ಅರಿವು ಮೂಡಿಸ್ತೇನೆ ಅಂತಾ ಸಚಿವ ಕೃಷ್ಣೇಭೈರೇಗೌಡ ಹೇಳಿದ್ದಾರೆ.

ರಿಯಾಲಿಟಿ ಚೆಕ್: ತೆರೆದ ಕೊಳವೆ ಬಾವಿಗಳಿಗೆ ಮುಗ್ಧ ಮಕ್ಕಳು ಬಲಿಯಾಗ್ತಿದ್ರೂ ನಮ್ಮ ಜನ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ಇವತ್ತು ನಿಮ್ಮ ಪಬ್ಲಿಕ್ ಟಿವಿ ಸಾಕಷ್ಟು ಕಡೆ ರಿಯಾಲಿಟಿ ಚೆಕ್ ಮಾಡಿದೆ. ಚಿಕ್ಕಬಳ್ಳಾಪುರದ ಕೆಲವೆಡೆ ಫೇಲ್ ಆಗಿರೋ ಕೊಳವೆ ಬಾವಿಗಳಿಗೆ ಗೋಣಿಚೀಲ ಮುಚ್ಚಿ ಮೇಲೊಂದು ಚಪ್ಪಡಿಗಲ್ಲು ಇಟ್ಟಿದ್ದಾರೆ.

ಬಳ್ಳಾರಿಯ ದಮ್ಮೂರಿನಲ್ಲಿ ಕುಡಿಯುವ ನೀರಿಗೆ ಕೊರೆಸಿದ 2 ಕೊಳವೆ ಬಾವಿಗಳನ್ನು ಮುಚ್ಚದೇ ಹಾಗೇ ಬಿಡಲಾಗಿದೆ. ರಾಯಚೂರಿನ ಲಿಂಗಸೂಗೂರಿನ ಮಸ್ಕಿಯಲ್ಲಿ ಕೆಲವೆಡೆ ಬೋರ್‍ವೆಲ್‍ಗಳನ್ನು ಮಚ್ಚೇ ಇಲ್ಲ. ಬೀದರ್‍ನ ಹಮೀಲಾಪೂರ ಗ್ರಾಮದ ಬಳಿ 15 ವರ್ಷಗಳ ಹಿಂದೆ ಕೊರೆಸಿದ್ದ ಬೋರ್‍ವೆಲ್ ಈಗಲೂ ಬಲಿಗಾಗಿ ಕಾಯ್ತಿದೆ.

ಈ ನಡುವೆ ಖಾಸಗಿ ಜಮೀನುಗಳಲ್ಲಿರುವ ಕೊಳವೆ ಬಾವಿಗಳನ್ನ ಮುಚ್ಚದೇ ಇದ್ದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸೋದಾಗಿ ಕೋಲಾರ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ. ನೆಮ್ಮದಿ ವಿಚಾರ ಅಂದ್ರೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಸುತ್ತಮುತ್ತ ಶಾಸಕ ಟಿ. ರಘುಮೂರ್ತಿ ಓಡಾಡಿ ತೆರೆದ ಕೊಳವೆ ಬಾವಿಗೆ ಕಲ್ಲು, ಮಣ್ಣು ಹಾಕಿ ಮುಚ್ಚಿದ್ರು.

ಈ ಹಿಂದಿನ ಪ್ರಕರಣಗಳು: ನಮ್ಮಲ್ಲಿ ಜಾಗೃತಿ ಮೂಡಿಸಿದ್ರೂ ಜನ ಎಚ್ಚೆತ್ತುಕೊಳ್ಳಲ್ಲ. ಸರ್ಕಾರಗಳು ತಲೆ ಕೆಡಿಸಿಕೊಳ್ಳಲ್ಲ. ಇದಕ್ಕೆ ನಿದರ್ಶನ ಬಾಲಕಿ ಕಾವೇರಿ ಘಟನೆ. ರಾಜ್ಯದಲ್ಲಿ ಈ ಹಿಂದೆಯೂ ಕೊಳವೆ ಬಾವಿ ದುರಂತಗಳು ನಡೆದಿವೆ.

* 2000 – ದಾವಣಗೆರೆ – ಬಾಲಕ ಕರಿಯ ಸಾವು
* 2006 – ಬಾಗಲಕೋಟೆ – ಸಿಕ್ಕೇರಿಯ ಮಹಿಳೆ ಕಲ್ಲವ್ವ ರಕ್ಷಣೆ
* 2007 – ರಾಯಚೂರಿನ ಮಾನ್ವಿ – 8ರ ಪೋರ ಸಂದೀಪ್ ಸಾವು
* 2007 – ಕಲಬುರಗಿ – 5 ವರ್ಷದ ಬಾಲಕ ನವನಾಥ ರಕ್ಷಣೆ
* 2009 – ವಿಜಯಪುರ – 6 ವರ್ಷದ ಬಾಲಕಿ ಕಾಂಚನಾ ಸಾವು
* 2014 – ವಿಜಯಪುರ – 4 ವರ್ಷದ ಅಕ್ಷತಾ ಸಾವು
* 2014 – ಬಾಗಲಕೋಟೆ- 6 ವರ್ಷದ ಬಾಲಕ ತಿಮ್ಮಣ್ಣ ಸಾವು
* 2017 – ಗದಗ – ರೀಬೋರ್ ವೇಳೆ ಇಬ್ಬರ ಸಾವು

ನಾವು ಕಲಿಯಬೇಕಾದ ಪಾಠ ಏನು
– ಖಾಸಗಿ ಸ್ಥಳಗಳಲ್ಲಿ ಫೇಲ್ ಆದ ಬೋರ್‍ವೆಲ್‍ಗಳನ್ನು ಗ್ರಾಮ ಲೆಕ್ಕಾಧಿಕಾರಿ ಅಥವಾ ಪಿಡಿಓಗಳೇ ಖುದ್ದು ನಿಂತು ಮುಚ್ಚಿಸಬೇಕು.
– ಮುಚ್ಚಿದ ಬಳಿಕ ಗ್ರಾಮ ಪಂಚಾಯ್ತಿಯಿಂದ ಸರ್ಟಿಫಿಕೇಟ್ ತಗೋಬೇಕು
– ಇದು ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಘೋಷಣೆ ಆಗಬೇಕು
– ತೆರೆದ ಕೊಳವೆ ಬಾವಿ ಮುಚ್ಚುವ ಬಗ್ಗೆ ಸರ್ಕಾರದಿಂದ ದೊಡ್ಡ ಅಭಿಯಾನ ಆಗಬೇಕು
– ಸರ್ಕಾರದ ಅಭಿಯಾನವನ್ನು ಜನರೇ ಎಚ್ಚೆತ್ತುಕೊಂಡು ಜನಾಂದೋಲನ ಮಾಡಬೇಕು
– ತೆರೆದ ಕೊಳವೆ ಬಾವಿ ಕಂಡರೇ ಜಮೀನಿನ, ಜಾಗದ ಮಾಲೀಕರ ಮೇಲೆ ಕ್ರಿಮಿನಲ್ ಕೇಸ್ ಹಾಕಬೇಕು
– ಕೊಳವೆ ಬಾವಿ ಮುಚ್ಚದಿದ್ದರೆ ಕೊಳವೆ ಬಾವಿ ಕೊರೆಯುವ ಏಜೆನ್ಸಿಗಳನ್ನೂ ಹೊಣೆ ಮಾಡಬೇಕು

ನಡೆದಿದ್ದೇನು?: ಅಜಿತ್ ಮಾದರ ಮತ್ತು ಸವಿತಾ  ದಂಪತಿ ಕೂಲಿ ಅರಸಿ ಬಾಗಲಕೋಟೆ ಜಿಲ್ಲೆಯಿಂದ ಇಲ್ಲಿಗೆ ಬಂದಿದ್ದರು. ಬೆಸಿಗೆ ಆರಂಭವಾದಾಗಿನಿಂದ ಕೆಲಸ ಸಿಗುವುದೂ ಕಡಿಮೆ ಆಗಿದೆ. ಹೀಗಾಗಿ ಅಜಿತ್ ಮಾದರ ಕೂಲಿ ಹುಡುಕಿಕೊಂಡು, ಸಿಕ್ಕಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಅಂತೆಯೇ ಬೆಳಗಾವಿಯಲ್ಲಿ ಬಂದು ಕುಟುಂಬ ನೆಲೆಸಿತ್ತು. ಹೆಂಡತಿ ಸವಿತಾ ಮಕ್ಕಳನ್ನು ನೋಡಿಕೊಂಡು ಮನೆಯಲ್ಲಿದ್ದರು.

ಶನಿವಾರ ಸಂಜೆ ತೋಟದ ವಸತಿಯಲ್ಲಿ ದೊಡ್ಡ ಮಗಳು ಅನ್ನಪೂರ್ಣಾಳನ್ನು ಬಿಟ್ಟು, ಚಿಕ್ಕವರಾದ ಕಾವೇರಿ ಹಾಗೂ ಪವನ್‍ನನ್ನು ಕರೆದುಕೊಂಡು ಕಟ್ಟಿಗೆ ಆಯಲು ಬಂದಿದ್ದರು. ಈ ಹೊತ್ತಿನಲ್ಲಿ ಮಕ್ಕಳಿಬ್ಬರೂ ಹೊಲದ ದಾರಿಯ ಪಕ್ಕದಲ್ಲಿ ಆಡುತ್ತಿದ್ದರು. ಮೂರ್ನಾಲ್ಕು ದಿನಗಳ ಹಿಂದಷ್ಟೇ ಹೊಲವನ್ನು ಗಳೆ ಹೊಡೆದಿದ್ದರಿಂದ ದೊಡ್ಡ ದೊಡ್ಡ ಮಣ್ಣಿನ ಹೆಂಟೆಗಳು ಎದ್ದು ನಿಂತಿದ್ದವು. ಆ ಹೆಂಟೆಗಳ ನಡುವೆಯೇ ತೆರೆದ ಕೊಳವೆ ಬಾವಿ ಇರುವುದು ಮಕ್ಕಳಿಗೆ ತಿಳಿದಿರಲಿಲ್ಲ. ಆಡುತ್ತ ಹೋದ ಕಾವೇರಿ ಕಾಲು ಜಾರಿ ಬಿದ್ದಿದ್ದಳು. ಇದನ್ನು ಕಂಡ ಆಕೆಯ ತಮ್ಮ ಪವನ ಗಾಬರಿಯಿಂದ ಚೀರಿದ್ದ. ಮಗನ ದನಿ ಕೇಳುತ್ತಿದ್ದಂತೆಯೇ ಅಲ್ಲಿಗೆ ಧಾವಿಸಿದ ತಾಯಿಯ ಮುಂದೆ `ಅಕ್ಕ ಇದರಾಗ ಬಿದ್ಲು…’ ಎಂದು ಪವನ್ ಕುಣಿಯೊಂದನ್ನು ತೋರಿಸಿದ್ದಾನೆ. ಕೂಡಲೇ ಮಗಳ ರಕ್ಷಣೆಗೆ ಮುಂದಾದ ಸವಿತಾ, ಹಗ್ಗವೊಂದನ್ನು ಬಿಟ್ಟು ಕಾವೇರಿಯನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡಿದ್ದರು.

cauvery borewell 4

 

cauvery borewell 3

cauvery borewell 2

blg mother
5f5d4c5b 2f08 485a 8a6e 8e78d7066925

kaveri 11

kaveri 10

kaveri 9

kaveri 8

kaveri 7

kaveri 6

kaveri 5

kaveri 4

kaveri 3

kaveri f

borewell tragedy blg 2

blg kaveri 2

blg 1 1

Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
13 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
39 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?