Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾರಕಿಹೊಳಿ Vs ಕತ್ತಿ| ಡಿಸಿಸಿ ಫೈಟ್‌ ತಾರಕಕ್ಕೆ – ನಿರ್ದೇಶಕನಿಗೆ ನಡು ರಸ್ತೆಯಲ್ಲೇ ಪತ್ನಿಯಿಂದ ಕಪಾಳ ಮೋಕ್ಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಜಾರಕಿಹೊಳಿ Vs ಕತ್ತಿ| ಡಿಸಿಸಿ ಫೈಟ್‌ ತಾರಕಕ್ಕೆ – ನಿರ್ದೇಶಕನಿಗೆ ನಡು ರಸ್ತೆಯಲ್ಲೇ ಪತ್ನಿಯಿಂದ ಕಪಾಳ ಮೋಕ್ಷ

Belgaum

ಜಾರಕಿಹೊಳಿ Vs ಕತ್ತಿ| ಡಿಸಿಸಿ ಫೈಟ್‌ ತಾರಕಕ್ಕೆ – ನಿರ್ದೇಶಕನಿಗೆ ನಡು ರಸ್ತೆಯಲ್ಲೇ ಪತ್ನಿಯಿಂದ ಕಪಾಳ ಮೋಕ್ಷ

Public TV
Last updated: September 9, 2025 7:36 am
Public TV
Share
2 Min Read
Belagavi DCC Bank Election Fight 2
SHARE

– ಪ್ರಾಥಮಿಕ ಕೃಷಿ ಪತ್ತಿನ ನಿರ್ದೇಶಕನಿಗೆ ರಸ್ತೆಯಲ್ಲೇ ಕ್ಲಾಸ್‌

ಬೆಳಗಾವಿ: ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹಾಗೂ ಮಾಜಿ ಸಂಸದ ರಮೇಶ ಕತ್ತಿ (Ramesh Katti) ನಡುವಿನ ಡಿಸಿಸಿ ಬ್ಯಾಂಕ್‌ ಚುನಾವಣೆಯ (DCC Bank Election) ಫೈಟ್ ಜೋರಾಗಿದ್ದು, ಇಬ್ಬರ ನಡುವಿನ ತಿಕ್ಕಾಟದಿಂದ ಶಾಂತವಾಗಿದ್ದ ಹುಕ್ಕೇರಿ ಕ್ಷೇತ್ರದಲ್ಲಿ ಗಲಾಟೆ ನಡೆದಿದೆ.

ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ರಾಜೇಂದ್ರ ಪಾಟೀಲ ವಿರುದ್ಧ ಅಕ್ಟೋಬರ್ 19 ರಂದು ಚುನಾವಣೆ ನಡೆಯಲಿದೆ. ಒಂದು ಪ್ರಾಥಮಿಕ ಕೃಷಿ ಪತ್ತಿನಿಂದ ಒಂದು ಮತ ಚಲಾಯಿಸುವ ಅಧಿಕಾರ ಇರುತ್ತದೆ. ಹುಕ್ಕೇರಿ ತಾಲೂಕಿನಲ್ಲಿ ಒಟ್ಟು 90 ಕೃಷಿ ಪತ್ತಿನ ಸಂಘಗಳಿದ್ದು ಒಟ್ಟು 90 ಮತಗಳ ಚಲಾವಣೆ ಆಗಬೇಕಿದೆ.

ಪ್ರಾಥಮಿಕ ಕೃಷಿ ಪತ್ತಿನ ಬಹುಮತವಿರುವ ನಿರ್ದೇಶಕರು ಆ ಒಂದು ಮತದ ಹಕ್ಕನ್ನ ಓರ್ವ ನಿರ್ದೇಶಕರಿಗೆ ನೀಡುವ ಕುರಿತು ಠರಾವ್ ಪಾಸ್ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕತ್ತಿ ಹಾಗೂ ಜಾರಕಿಹೊಳಿ ಬಣಗಳು ನಿರ್ದೇಶಕರನ್ನು ಓಲೈಕೆ ಜೊತೆಗೆ ಹೈ ಜಾಕ್ ಮಾಡಿ ತಮ್ಮ ಬೆಂಬಲಿಗ ನಿರ್ದೇಶಕರಿಗೆ ಮತದಾನದ ಹಕ್ಕನ್ನು ಪಡೆಯಲು ಮುಂದಾಗಿದ್ದಾರೆ.  ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಲಿಂಗಾಯತರನ್ನೇ ಆಯ್ಕೆ ಮಾಡುತ್ತೇವೆ : ಬಾಲಚಂದ್ರ ಜಾರಕಿಹೊಳಿ‌

Belagavi DCC Bank Election Fight 1

ಈ ಕಾರಣಕ್ಕೆ ಪ್ರತಿನಿತ್ಯ ಹುಕ್ಕೇರಿ ತಾಲೂಕಿನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ನಿರ್ದೇಶಕರ ಬಹುಮತ ಪಡೆಯಲು ಹರಸಾಹಸ ನಡೆಸುತ್ತಿದ್ದಾರೆ. ಇದಕ್ಕಾಗಿ ಸತೀಶ್‌ ಜಾರಕಿಹೊಳಿ ಎದುರೇ ಗಲಾಟೆ ಆಗಿದೆ. ಜಾರಕಿಹೊಳಿ ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನ ಪತ್ನಿ ನಿರ್ದೇಶಕನ ಕೊರಳು ಪಟ್ಟಿ ಹಿಡಿದು ಎಳೆದಾಡಿ ಕಪಾಳ ಮೋಕ್ಷ ಮಾಡಿ ರಸ್ತೆಯಲ್ಲೇ ತರಾಟೆ ತೆಗೆದುಕೊಂಡಿದ್ದಾಳೆ.

ಮದಿಹಳ್ಳಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿಗೆ ಪತ್ನಿ ಲಗಮವ್ವ ಏಟು ನೀಡಿದ್ದಾಳೆ. ಗಂಡ ಹೆಂಡತಿ ಜಗಳ ಬಿಡಿಸಲು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪೊಲೀಸರು ಸುಸ್ತಾಗಿ ಹೋಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಬಂದ ಮಾಜಿ ಸಂಸದ ರಮೇಶ್ ಕತ್ತಿ ಕೂಡ ಬಂದಿದ್ದರಿಂದ ಎರಡು ಗುಂಪುಗಳ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ತಲುಪಿತ್ತು.

ಬೆಳವಣಿಗೆಗಳ ನಡುವೆ ಬೆಲ್ಲದ ಬಾಗೇವಾಡಿ ಗ್ರಾಮದ ಕತ್ತಿ ಒಡೆತನದ ವಿಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ತಡರಾತ್ರಿ ಹೈಡ್ರಾಮಾ ನಡೆಯಿತು. ಪಾಶ್ಚಾಪೂರ ಗ್ರಾಮದ 6 ಪಿಕೆಪಿಎಸ್ ನಿರ್ದೇಶಕರನ್ನು ಯಮಕನಮರಡಿ ಪೊಲೀಸರು ಬಂದು ವಾಪಸ್ ಪಾಶ್ಚಾಪೂರ ಗ್ರಾಮಕ್ಕೆ ಕರೆ ತಂದಿದ್ದಾರೆ.

Belagavi DCC Bank Election Fight 3

ಕೆಲದಿನಗಳಿಂದ ಕಾಣೆಯಾಗಿದ್ದಾರೆ ಎಂದು ಕುಟುಂಬಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಯಮಕನಮರಡಿ ಪಿಐ ಜಾವೇದ ಮುಶಾಪೂರೆ ವಿಎಸ್‌ಎಲ್ ಕಾರ್ಖಾನೆಗೆ ತೆರಳಿ ವಾಪಸ್‌ ಕಳಿಸುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಯಾವುದೇ ಕಾರಣಕ್ಕೂ ವಾಪಸ್ ಕಳುಹಿಸಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪೊಲೀಸರು ಹಾಗೂ ರಮೇಶ ಕತ್ತಿ ನಡುವೆ ವಾಗ್ವಾದ ನಡೆದಿದೆ. ಬಳಿಕ ಪೊಲೀಸರು ನಿರ್ದೇಶಕರನ್ನು ವಾಪಸ್‌ ಪಾಶ್ಚಾಪೂರ ಗ್ರಾಮಕ್ಕೆ ಕರೆ ತಂದು ಕುಟಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಒಟ್ಟಿನಲ್ಲಿ ದಿನದಿಂದ ದಿನಕ್ಕೆ ಕತ್ತಿ ಹಾಗೂ ಜಾರಕಿಹೊಳಿ ಕುಟುಂಬಗಳ ತಿಕ್ಕಾಟ ತಾರಕಕ್ಕೇರುತ್ತಿದ್ದು, ಮುಂದೆ ಬೆಳಗಾವಿ ಜಿಲ್ಲೆಯಲ್ಲಿ ಈ ಎರಡು ಕುಟುಂಬಗಳ ರಣಯುದ್ಧ ಹೊಸ ಅಧ್ಯಾಯ ಬರೆಯುವದರಲ್ಲಿ ಸಂಶಯವೇ ಇಲ್ಲ.

TAGGED:belagavidcc bankRamesh kattiSatish jarkiholiಕಾಂಗ್ರೆಸ್ಡಿಸಿಸಿ ಬ್ಯಾಂಕ್ ಚುನಾವಣೆಬೆಳಗಾವಿಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
11 minutes ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
21 minutes ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
60 minutes ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
1 hour ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
2 hours ago
Supreme Court 1
Court

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?