Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಯೋಜನೆಯಡಿ ಅಭಿವೃದ್ಧಿಗೊಂಡ ಕೆರೆಗೆ ಬಾಗಿನ ಅರ್ಪಿಸಿದ ವೀರೇಂದ್ರ ಹೆಗ್ಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಧರ್ಮಸ್ಥಳ ಯೋಜನೆಯಡಿ ಅಭಿವೃದ್ಧಿಗೊಂಡ ಕೆರೆಗೆ ಬಾಗಿನ ಅರ್ಪಿಸಿದ ವೀರೇಂದ್ರ ಹೆಗ್ಗಡೆ

Belgaum

ಧರ್ಮಸ್ಥಳ ಯೋಜನೆಯಡಿ ಅಭಿವೃದ್ಧಿಗೊಂಡ ಕೆರೆಗೆ ಬಾಗಿನ ಅರ್ಪಿಸಿದ ವೀರೇಂದ್ರ ಹೆಗ್ಗಡೆ

Public TV
Last updated: January 31, 2020 11:59 am
Public TV
Share
3 Min Read
blg veeredra heggade
SHARE

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಲಿಂಗನಮಠ ಗ್ರಾಮದ ಚನ್ನಬಸವೇಶ್ವರ ಸಮುದಾಯ ಭವನದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಗ್ರಾಮದ ಕೆರೆ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗ್ರಾಮದ ಕೆರೆ ಲೋಕಾರ್ಪಣೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ ಮತ್ತು ಸುಜ್ಞಾನ ನಿಧಿ ಶಿಷ್ಯವೇತನ ಕಾರ್ಯಕ್ರಮಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆ ಅವರು ಚಾಲನೆ ನೀಡಿದರು.

ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರನ್ನು ಮತ್ತು ನಾಗರಿಕರನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಕೆಲ ವರ್ಷಗಳಲ್ಲಿ ಬರಗಾಲ ಬಂದ ಪ್ರದೇಶಗಳ ನಾಗರಿಕರು ಮಳೆಗಾಗಿ ಕಪ್ಪೆಗಳ ಮದುವೆ ಮಾಡಿದ್ದರು. ಕೆಲವೆಡೆ ಕತ್ತೆಗಳ ಮೆರವಣಿಗೆ ಮಾಡಿ ವರುಣನಕೃಪೆ ಬೇಡಿದ್ದರು. ಆದರೆ ಬೆಳೆಯುತ್ತಿರುವ ಜನಸಂಖ್ಯೆ ಅನುಗುಣವಾಗಿ ನೀರಿನ ಲಭ್ಯತೆಯ ಬಗ್ಗೆ ಯಾರೊಬ್ಬರೂ ತಲೆ ಕೆಡಿಸಿಕೊಳ್ಳಲಿಲ್ಲ. ಜಲಮೂಲಗಳನ್ನು ಸಂರಕ್ಷಿಸದೇ ಕುಡಿಯುವ ನೀರಿಗಾಗಿ ಸರ್ಕಾರವನ್ನು ಜನರು ದೂರುತ್ತಾರೆ. ಈ ಸಮಸ್ಯೆ ಅರಿತ ಧರ್ಮಸ್ಥಳ ಯೋಜನೆ ರಾಜ್ಯಾದ್ಯಂತ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಸರ್ಕಾರ, ಸ್ಥಳೀಯರು ಮತ್ತು ಯೋಜನೆಯ ಸಹಭಾಗಿತ್ವದಲ್ಲಿ ಕೆರೆಗಳನ್ನು ಅಭಿವೃದ್ಧಿಪಡಿಸುವ ಕೆಲಸಕ್ಕೆ ಕೈಹಾಕಿ ಯಶಸ್ವಿಯಾಗಿದೆ. ಈ ಕಾರ್ಯಕ್ರಮದ ಮೂಲಕ ಜಲಮೂಲಗಳ ಸಂರಕ್ಷಣೆಯಿಂದ ಮಾತ್ರ ಜೀವಜಲ ಪಡೆಯಲು ಸಾಧ್ಯ ಎಂಬ ಸಂದೇಶವನ್ನು ಮನುಕುಲಕ್ಕೆ ನೀಡುವ ಉದ್ದೇಶವನ್ನು ಯೋಜನೆ ಹೊಂದಿದೆ ಎಂದು ಮಾಹಿತಿ ನೀಡಿದರು.

Veerendra Heggade

ಹಿಂದಿನ ದಿನಗಳಲ್ಲಿ ಮನೆ ಕೆಲಸಗಳಿಗೆ ಮಾತ್ರ ಸೀಮಿತರಾಗಿದ್ದ ಗೃಹಿಣಿಯರಿಗೆ ಪ್ರಪಂಚ ಜ್ಞಾನ, ವ್ಯವಹಾರ ಜ್ಞಾನ, ಸ್ವಾವಲಂಬನೆ, ಉಳಿತಾಯ ಮನೋಭಾವ ಮತ್ತಿತರ ಜೀವನ ಪರಿವರ್ತನೆ ತರುವ ಸಂಗತಿಗಳನ್ನು ಒದಗಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಶೇಷ ಪ್ರಯತ್ನ ಕೈಗೊಂಡಿದೆ. ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರ ಸಬಲೀಕರಣದತ್ತ ಹೆಜ್ಜೆ ಹಾಕುವ ಪ್ರಯತ್ನ ನಡೆದಿದೆ ಎಂದರು.

ಸಮಾವೇಶದಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ ವಿತರಿಸಿ ಮಾತನಾಡಿದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್, ಧರ್ಮಸ್ಥಳ ಮಹಿಳಾ ಸ್ವ-ಸಹಾಯ ಸಂಘಗಳ ಮಾದರಿಯಲ್ಲಿ ತಾವೂ ಸಹ ಈ ಹಿಂದೆ ಅರಿಷಿನ-ಕುಂಕುಮ ಕಾರ್ಯಕ್ರಮ ಆಯೋಜಿಸುವ ಮೂಲಕ ತಾಲೂಕಿನ ಸಾವಿರಾರು ಮಹಿಳೆಯನ್ನು ಸಂಘಟಿಸಿ ಮಹಿಳಾ ಸಬಲೀಕರಣದತ್ತ ಪ್ರಯತ್ನ ನಡೆಸಿರುವುದಾಗಿ ಹೇಳಿದರು. ಬಳಿಕ ಅವರು ತಾಲೂಕಿನ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಯೋಜನೆಯ ವತಿಯಿಂದ ಮಂಜೂರಾದ ಅನುದಾನದ ಚೆಕ್ ವಿತರಿಸಿದರು.

mng veerendra hegde

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಚಿಕ್ಕಮುನವಳ್ಳಿ ಆರೂಢಮಠದ ಶಿವಪುತ್ರ ಶ್ರೀಗಳು ಆಶೀರ್ವಚನ ನೀಡಿದರು. ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ಬಿ ಹಿರೇಮಠ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಯೋಜನಾಧಿಕಾರಿಗಳಾದ ಪ್ರಭಾಕರ ನಾಯ್ಕ, ಮಂಜುನಾಥ ಹೆಗಡೆ, ಸುರೇಂದ್ರ ಆಚಾರ್ಯ, ಪ್ರಶಾಂತ ನಾಯ್ಕ, ಪುರುಷೋತ್ತಮ, ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಲ್ಲಿಕಾರ್ಜುನ ವಾಲಿ, ಒಕ್ಕೂಟದ ಅಧ್ಯಕ್ಷೆ ಅನ್ನಪೂರ್ಣ ಬಾಗೇವಾಡಿ, ಬಿಜೆಪಿ ಬ್ಲಾಕ್ ಅಧ್ಯಕ್ಷ ಸಂಜಯ ಕುಬಲ, ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೊಚೇರಿ, ರಾಜು ರಪಾಟಿ, ಅಪ್ಪಯ್ಯ ಕೋಡೊಳಿ, ವ್ಯವಸ್ಥಾಪಕ ಬಸವರಾಜ ಕುರಹಟ್ಟಿ, ಜೀವನದಾಸ್ ಕುಮಾರ, ಪ್ರವೀಣ ದೊಡಮನಿ ಸೇರಿದಂತೆ ಯೋಜನೆಯ ಅಧಿಕಾರಿಗಳು, ಸಿಬ್ಬಂದಿ, ಸೇವಾ ಪ್ರತಿನಿಧಿಗಳು, ಸ್ವ-ಸಹಾಯ ಸಂಘಗಳ ಒಕ್ಕೂಟ ಪದಾಧಿಕಾರಿಗಳು, ಸದಸ್ಯರು, ಲಿಂಗನಮಠ ಹಾಗೂ ಸುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಈಶಸ್ತವನ ಪಠಿಸಿದರು. ಜಿಲ್ಲಾ ನಿರ್ದೇಶಕ ಶೀನಪ್ಪ ಮೂಲ್ಯ ಸ್ವಾಗತಿಸಿದರು. ಸಂತೋಷ ನಾಯ್ಕ ನಿರೂಪಿಸಿದರು. ರಿಯಾಜ್ ಅತ್ತಾರ ವಂದಿಸಿದರು. ಯೋಜನೆಯ ಸ್ವ-ಸಹಾಯ ಸಂಘಗಳ ಸಾಧನಾ ಸಮಾವೇಶಕ್ಕೆ ಚಾಲನೆ ನೀಡಬೇಕಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ. ಬದಲಿಗೆ ತಮ್ಮ ಸಂದೇಶವನ್ನು ಆಪ್ತರ ಮೂಲಕ ಕಳಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಜೊತೆಗೆ ಆಹ್ವಾನ ಪತ್ರಿಕೆಯಲ್ಲಿ ನಮೂದಿಸಿದಂತೆ ಜಿ.ಪಂ. ಸದಸ್ಯೆ ಅಂಜನಾ ದೇಸಾಯಿ, ತಾ.ಪಂ. ಸದಸ್ಯೆ ಪೂಜಾ ಹರಿಜನ ಅವರೂ ಸಹ ಕಾರ್ಯಕ್ರಮದಿಂದ ದೂರ ಉಳಿದಿದ್ದರು.

TAGGED:belagaviDharmasthala ProjectDr Virendra HeggadelakePublic TVಕೆರೆಡಾ.ವೀರೇಂದ್ರ ಹೆಗ್ಗಡೆಧರ್ಮಸ್ಥಳ ಯೋಜನೆಪಬ್ಲಿಕ್ ಟಿವಿಬೆಳಗಾವಿ
Share This Article
Facebook Whatsapp Whatsapp Telegram

Cinema news

gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows
kiccha sudeep priya sudeep
ಕಿಚ್ಚನ ಪತ್ನಿಯ ಹುಟ್ಟುಹಬ್ಬ – ಹೊಸ ಪ್ರತಿಭೆಗಳಿಗೆ ಅವಕಾಶ ಘೋಷಣೆ
Cinema Latest Sandalwood Top Stories

You Might Also Like

iran protest 1
Latest

ಆರ್ಥಿಕ ಅಧಃಪತನ; ಇರಾನ್‌ನಲ್ಲಿ ಹಿಂಸಾಚಾರಕ್ಕೆ 35 ಬಲಿ – 1,200 ಮಂದಿ ಬಂಧನ

Public TV
By Public TV
5 hours ago
MB Patil
Districts

ಜ.9ರಂದು ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ: ಎಂ.ಬಿ ಪಾಟೀಲ್

Public TV
By Public TV
5 hours ago
tumakuru suicide
Crime

ತುಮಕೂರು| ಮಕ್ಕಳೊಂದಿಗೆ ಸಂಪಿಗೆ ಬಿದ್ದು ತಾಯಿ ಆತ್ಮಹತ್ಯೆ

Public TV
By Public TV
5 hours ago
03 4
Big Bulletin

ಬಿಗ್‌ ಬುಲೆಟಿನ್‌ 06 January 2026 ಭಾಗ-3

Public TV
By Public TV
5 hours ago
bolero accident chitradurga
Chitradurga

ಚಿತ್ರದುರ್ಗ| ಮರಕ್ಕೆ ಬೊಲೆರೊ ಡಿಕ್ಕಿ – ನಾಲ್ವರು ದುರ್ಮರಣ

Public TV
By Public TV
5 hours ago
01 4
Big Bulletin

ಬಿಗ್‌ ಬುಲೆಟಿನ್‌ 06 January 2026 ಭಾಗ-1

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?