ಬೆಳಗಾವಿ: ಕಾಂಗ್ರೆಸ್ ಹಲವಾರು ವರ್ಷಗಳಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಬೆಳಗಾವಿಯಯಲ್ಲಿ ಹತ್ತು ದಿನಗಳ ಅಧಿವೇಶನ ನಡೆದಿತ್ತು. ಕಾಂಗ್ರೆಸ್ ನವರು ಬೇಜವಾಬ್ದಾರಿಯಿಂದ ಸದನದ ಬಾವಿಗಿಳಿದು ಹಾಳು ಮಾಡಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲಿಲ್ಲ. ಕೈ ಪಕ್ಷಕ್ಕೆ ಅಭಿವೃದ್ಧಿ ಬೇಕಾಗಿಲ್ಲ ಎಂದು ಸಿಡಿದರು. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ
ಕಳೆದ ಹಲವಾರು ವರ್ಷಗಳಿಂದ ಉತ್ತರ ಕರ್ನಾಟಕ್ಕೆ ಅನ್ಯಾಯ ಮಾಡಿದೆ. ಅದನ್ನ ನಾವು ಬಿಚ್ಚಿಡುತ್ತೇವೆ ಎನ್ನುವ ಭಯದಿಂದ ಗದ್ದಲ ಮಾಡಿದರು. ಮಹಾದಾಯಿ ಯೋಜನೆ ಜಾರಿ ಮಾಡೋಕೆ ಎಲ್ಲ ರೀತಿ ತಯಾರಿ ಮಾಡಿದ್ದೇವೆ. ಈಗಾಗಲೇ ಸಮಗ್ರ ಯೋಜನಾ ವರದಿ(ಡಿಪಿಎಆರ್) ಮಾಡಿದ್ದೇವೆ. ಅದನ್ನ ಎದುರಿಸಿದೇ ಪಲಾಯನ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಕೊಡಗಿನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಹತ್ತು ದಿನಗಳಿಂದ ಸಿದ್ದರಾಮಯ್ಯನವರಿಗೆ ಅವಕಾಶ ನೀಡಿದ್ದು, ಅವರು ಪಲಾಯನ ಮಾಡಿದ್ದಾರೆ. ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆಗೆ ದಿನಾಲು ಅವಕಾಶ ನೀಡಿದ್ದಾರೆ. ಆದರೆ ಮಾತನಾಡಬೇಕಾದವರೇ ಮಾತನಾಡಿಲ್ಲ. ಕಾಂಗ್ರೆಸ್ ನವರು ಅಸಹಕಾರ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.