ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

Public TV
1 Min Read
Mallikarjun Kharge Advises DK Shivakumar and Siddaramaiah To Work Together and Win Karnataka Election Congress meeting 1

ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟ(Panchamasali Reservation) ವಿಚಾರದಲ್ಲಿ ಕಾಂಗ್ರೆಸ್(Congress) ಸ್ಪಷ್ಟ ನಿಲುವು ಪ್ರಕಟಿಸಿಲ್ಲ. ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಣಿದು ಸರ್ಕಾರ ಒಪ್ಪಿಗೆ ಸೂಚಿಸಿದರೆ ಮುಂದೇನು ಮಾಡಬೇಕು ಎಂದು ಚಿಂತನೆ ನಡೆಸುತ್ತಿದೆ.

ಎಸ್‍ಸಿ-ಎಸ್‍ಟಿ ಮೀಸಲು(SC- ST Reservation) ಅಸ್ತ್ರದ ಜೊತೆಗೆ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಬಳಕೆಗೆ ಕೈ ಪಾಳಯದ ಪ್ಲಾನ್ ಮಾಡಿಕೊಳ್ಳುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ ಪಂಚಮಸಾಲಿ ಸವಾಲು – ಬೇಡಿಕೆ ಏನು? ವಸ್ತುಸ್ಥಿತಿ ಏನಿದೆ? ಯಾವ ಜಿಲ್ಲೆಗಳಲ್ಲಿಎಷ್ಟಿದೆ ಪ್ರಭಾವ?

 
ಒಂದು ವೇಳೆ ಪಂಚಮಸಾಲಿ ಕೈ ತಪ್ಪಿದರೆ, ಒಳ ಮೀಸಲಾತಿ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಸದಾಶಿವ ಆಯೋಗದ ದಾಳ ಉರುಳಿಸಲು ಸದ್ದಿಲ್ಲದೆ ಸಿದ್ಧಮಾಡಿಕೊಳ್ಳುತ್ತಿದೆ. ಆ ಮೂಲಕ ದಲಿತಾಸ್ತ್ರದ ಮೂಲಕ ಬಿಜೆಪಿ ಸರ್ಕಾರವನ್ನು ಕಟ್ಟಿ ಹಾಕುವುದು ಕೈ ಪಾಳಯದ ಲೆಕ್ಕಾಚಾರ ಎನ್ನಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *