ರಜೆಗೆ ಬಂದ ಯೋಧ ಬೈಕ್ ಅಪಘಾತದಲ್ಲಿ ಸಾವು- ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

Public TV
1 Min Read
soldier2

ಚಿಕ್ಕೋಡಿ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧ ಬೈಕ್‌ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬಳ್ಳಿಗೆರೆ ಗ್ರಾಮದಲ್ಲಿ ನಡೆದಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

soldier1

ಅಥಣಿ ತಾಲೂಕಿನ ಬಳ್ಳಿಗೆರಿ ಗ್ರಾಮದ ನಿವಾಸಿ ಶಂಕರ ಮಹಾಲಿಂಗಪ್ಪ ಪಾಟೀಲ (32) ಯೋಧ ಮೃತಪಟ್ಟವರು. ಶುಕ್ರವಾರ ರಾತ್ರಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಕ್ರಾಸ್ ಹತ್ತಿರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಶನಿವಾರದಂದು ಸ್ವಗ್ರಾಮಕ್ಕೆ ಪ್ರಾರ್ಥಿವ ಶರೀರ ತರಾಲಾಯಿತು. ಗ್ರಾಮದ ಜನರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೆಳಗಾವಿ ಜಿಲ್ಲಾಡಳಿತ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಿತು. ಇದನ್ನೂ ಓದಿ: ವಾರದಲ್ಲಿ ಮೂರನೇ ಬಾರಿ ಗೌತಮ್‌ ಗಂಭೀರ್‌ಗೆ ಐಸಿಸ್‌ನಿಂದ ಕೊಲೆ ಬೆದರಿಕೆ

soldier2 1

ಕಳೆದ 12 ದಿನದ ಹಿಂದೆ ರಜೆ ತೆಗೆದುಕೊಂಡು ಸ್ವಗ್ರಾಮಕ್ಕೆ ಶಂಕರ ಆಗಮಿಸುತ್ತಿದ್ದರು. ಸಂಬಂಧಿಕರ ಮನೆಗೆ ಭೇಟಿ ನೀಡಿ ಬರುವಾಗ ಲೋಕಾಪುರ ಕ್ರಾಸ್ ಹತ್ತಿರ ಜೆಸಿಬಿ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಒಮಿಕ್ರಾನ್ ಆತಂಕ – ಮಾಸ್ಕ್ ಇಲ್ಲದವರಿಗೆ ಮೆಟ್ರೋಗೆ ನೋ ಎಂಟ್ರಿ

Share This Article
Leave a Comment

Leave a Reply

Your email address will not be published. Required fields are marked *