ಬೆಳಗಾವಿ: ರಾಜ್ಯದಲ್ಲಿ ಹೃದಯಾಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದೀಗ ರಜೆಗೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ (Belagavi) ನಗರದ ಅನಗೋಳದ ಬಜಾರ್ನಲ್ಲಿ ನಡೆದಿದೆ.
ಇಬ್ರಾಹಿಂ ದೇವಲಾಪುರ (37) ಮೃತ ಯೋಧ.ಇದನ್ನೂ ಓದಿ: ಉಗ್ರರಿಗೆ ನೆರವು ನೀಡಿದ್ದ ಕೇಸ್ – ಎಎಸ್ಐ ಚಾಂದ್ ಪಾಷಾ ವಿರುದ್ಧ ಇಲಾಖೆ ಹಂತದ ತನಿಖೆಗೆ ಆದೇಶ
ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ರಜೆಗೆಂದು ಊರಿಗೆ ಬಂದಿದ್ದರು. ಈ ವೇಳೆ ಅನಗೋಳದ ಬಜಾರ್ಗೆ ತೆರಳಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ.
ಎದೆನೋವಿನಿಂದ ಯೋಧ ಕುಸಿದು ಬೀಳುತ್ತಿರುವ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಅನಾಮಧೇಯ ಭಕ್ತನಿಂದ ಶಿರಡಿ ಸನ್ನಿಧಿಗೆ 59 ಲಕ್ಷದ ಚಿನ್ನದ ಕಿರೀಟ ಸೇರಿ 65 ಲಕ್ಷ ಮೌಲ್ಯದ ಆಭರಣ ದಾನ