ಬೆಳಗಾವಿ: SIR (Special Intensive Revision) ಕಾರ್ಯದ ಒತ್ತಡದ ನಡುವೆ ಬೆಳಗಾವಿ (Belagavi) ಜಿಲ್ಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಅಥಣಿ ಪಟ್ಟಣದ ನಿವಾಸಿ ಹಾಗೂ ರಾಯಬಾಗ ತಾಲೂಕಿನ ನಿಲಜಿ ಗ್ರಾಮದ ಪಡದಾಳೆ ತೋಟದ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕ ಪ್ರಕಾಶ್ ಕಾಂಬಳೆ ಮೃತಪಟ್ಟ ದುರ್ದೈವಿ.
ಪ್ರತಿದಿನ ಮನೆಗೆ ಬಂದ ಬಳಿಕವೂ ಕೆಲಸ ಬಹಳ ಇದೆ, ಬೇಗ ಮುಗಿಸಬೇಕು ಎಂದು ಪ್ರಕಾಶ್ ಹೇಳಿಕೊಳ್ಳುತ್ತಿದ್ದರು. ಕಳೆದ ಕೆಲವು ದಿನಗಳಿಂದ SIR ಕೆಲಸದ ಒತ್ತಡ ಹೆಚ್ಚಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದನ್ನೂ ಓದಿ: NEET ಪರೀಕ್ಷೆ ವಿಚಾರದಲ್ಲಿ ರಾಹುಲ್ ಗಾಂಧಿ ರಾಜಕೀಯ ಮಾಡುತ್ತಿದ್ದಾರೆ: ಸುಧಾಕರ್ ವಾಗ್ದಾಳಿ
ಪ್ರಕಾಶ್ ಅವರ ಪತ್ನಿ ಮಾಲಾ, ಕೆಲಸದ ಒತ್ತಡವೇ ನನ್ನ ಗಂಡನ ಸಾವಿಗೆ ಕಾರಣ. ಪ್ರತಿದಿನ ಕೆಲಸದ ಒತ್ತಡದ ಬಗ್ಗೆ ಅವರು ತುಂಬಾ ಆತಂಕದಲ್ಲಿದ್ದರು ಎಂದು ಆರೋಪಿಸಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ, ಬಿಪಿ ಲೋ (Low BP) ಆಗಿದ್ದ ಹಿನ್ನೆಲೆ ಪ್ರಕಾಶ್ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಸಾವಿಗೆ ಕೆಲಸದ ಒತ್ತಡವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಪ್ರಕಾಶ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಥಣಿ ಪಟ್ಟಣದ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಇದನ್ನೂ ಓದಿ: ಧುಮ್ಮಿಕ್ಕುತ್ತಿರುವ ʻಜೋಗದ ಸಿರಿʼಯನ್ನು ಕಣ್ತುಂಬಿಕೊಂಡ ಸಾವಿರಾರು ಪ್ರವಾಸಿಗರು
