ಬೆಳಗಾವಿ: ಉಕ್ರೇನ್ನಲ್ಲಿ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು ಯುದ್ಧ ಆರಂಭವಾದ ಹಿನ್ನೆಲೆ ಇಬ್ಬರು ಕುಟುಂಬಸ್ಥರ ಮನೆಯಲ್ಲಿ ಆತಂಕ ಮನೆಮಾಡಿದೆ. ಇಬ್ಬರು ವಿದ್ಯಾರ್ಥಿಗಳು ಕೂಡ ಸುರಕ್ಷಿತವಾಗಿದ್ದಾರೆ.
ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ನಿವಾಸಿ ಪ್ರಿಯಾ ನಿಡಗುಂದಿ ಹಾಗೂ ಗೋಕಾಕ್ ತಾಲೂಕಿನ ಘಟಪ್ರಭಾದ ನಿವಾಸಿ ಅಮೋಘಾ ಚೌಗಲಾ ಎಂಬ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ಅಗ್ನಿ ಅವಘಡ – ಕಟ್ಟಡದಿಂದ ಹಾರಿ ಜೀವ ಉಳಿಸಿಕೊಂಡ ತಾಯಿ, ಮಗಳು
ಸದ್ಯ ಉಕ್ರೇನ್ನಲ್ಲಿ ಯದ್ಧ ಆರಂಭವಾದ ಹಿನ್ನೆಲೆ ಕಾಲೇಜಿನ ವಸತಿ ನಿಲಯದಲ್ಲೇ ಇಬ್ಬರು ವಿದ್ಯಾರ್ಥಿಗಳು ಉಳಿದುಕೊಂಡಿದ್ದಾರೆ. ಉಕ್ರೇನ್ನಲ್ಲಿ ಯುದ್ಧ ಆರಂಭವಾಗಿದ್ದರಿಂದ ಇಬ್ಬರು ವಿದ್ಯಾರ್ಥಿಗಳ ಕುಟುಂಬಸ್ಥರ ಮನೆಯಲ್ಲಿ ಆತಂಕ ಮನೆಮಾಡಿದೆ. ಇದನ್ನೂ ಓದಿ: ಹರ್ಷನ ಹತ್ಯೆ- ಡೀಟೈಲ್ಸ್ ಎಲ್ಲ ಹೇಳೋಕೆ ಆಗಲ್ಲ: ಆರಗ ಜ್ಞಾನೇಂದ್ರ