Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬರಗಾಲ ಸೇರಿ ಸರ್ಕಾರದ 60 ತಪ್ಪುಗಳ ಕುರಿತು ಕಿವಿ ಹಿಂಡುವ ಕಾರ್ಯ; ಜೆಡಿಎಸ್ ಜೊತೆ ಒಂದಾಗಿ ಹೋರಾಟ: ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬರಗಾಲ ಸೇರಿ ಸರ್ಕಾರದ 60 ತಪ್ಪುಗಳ ಕುರಿತು ಕಿವಿ ಹಿಂಡುವ ಕಾರ್ಯ; ಜೆಡಿಎಸ್ ಜೊತೆ ಒಂದಾಗಿ ಹೋರಾಟ: ಆರ್.ಅಶೋಕ್

Bengaluru City

ಬರಗಾಲ ಸೇರಿ ಸರ್ಕಾರದ 60 ತಪ್ಪುಗಳ ಕುರಿತು ಕಿವಿ ಹಿಂಡುವ ಕಾರ್ಯ; ಜೆಡಿಎಸ್ ಜೊತೆ ಒಂದಾಗಿ ಹೋರಾಟ: ಆರ್.ಅಶೋಕ್

Public TV
Last updated: December 2, 2023 5:40 pm
Public TV
Share
2 Min Read
R.ASHOK
SHARE

ಬೆಂಗಳೂರು: ಬೆಳಗಾವಿ (Belagavi) ಅಧಿವೇಶನ (Winter Session) ಬಿಜೆಪಿ ಪಾಲಿಗೆ ಅತ್ಯಂತ ಪ್ರಮುಖವಾದುದು. ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ಕೇವಲ ಆರು ತಿಂಗಳಲ್ಲಿ 60 ತಪ್ಪುಗಳನ್ನು ಮಾಡಿದೆ. ಅಧಿವೇಶನದಲ್ಲಿ ಈ ಸಂಬಂಧ ಕಿವಿ ಹಿಂಡುವ ಕಾರ್ಯ ಕೈಗೆತ್ತಿಕೊಳ್ಳುತ್ತೇವೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಪ್ರಾರಂಭದಲ್ಲೇ ಟ್ರಾನ್ಸ್‌‌ಫರ್ ದಂಧೆಯ ಅಂಗಡಿಗಳನ್ನು ತೆರೆದಿದ್ದಾರೆ. ಆಡಳಿತವು ಭ್ರಷ್ಟಾಚಾರದ ಕೂಪವಾಗಿದೆ. ಬೆಂಗಳೂರಿನಲ್ಲಿ ದಾಳಿ ನಡೆಸಿದಾಗ ಸುಮಾರು 100 ಕೋಟಿಗೂ ಹೆಚ್ಚು ಕಳ್ಳಹಣ ಸಿಕ್ಕಿದ್ದು, ಇದು ಟ್ರಾನ್ಸ್‌ಫರ್‌ ದಂಧೆಯ ಸ್ಪಷ್ಟರೂಪ ಎಂದು ಆರೋಪಿಸಿದರು. ಇದನ್ನೂ ಓದಿ: ತೆಲಂಗಾಣ ಶಾಸಕರಿಗೆ ಮಟನ್, ಚಿಕನ್ ಬಿರಿಯಾನಿ ಬೇಕಾ ಅಂತ ವಿಚಾರಿಸಲು ಡಿಕೆಶಿ ತೆರಳಿದ್ದು: ಆರ್.ಅಶೋಕ್

SIDDU DKSHI

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ. ತಮಿಳುನಾಡಿನಲ್ಲಿ ಮಿತ್ರ ಸ್ಟಾಲಿನ್ ಇದ್ದಾರೆಂದು, ಅವರಿಗೆ ಸಹಾಯ ಮಾಡಲು ಹಳೆ ಮೈಸೂರಿನ ಭಾಗದ ಜನರಿಗೆ ಮೋಸ ಮಾಡಲಾಗಿದೆ. ಇತರ ಬಹಳಷ್ಟು ವಿಚಾರಗಳಲ್ಲಿ ಸರ್ಕಾರ ತಪ್ಪು ಮಾಡಿದೆ. ವಿರೋಧ ಪಕ್ಷದ ನಾಯಕನಾಗಿ ನಮ್ಮೆಲ್ಲ 66 ಜನ ಶಾಸಕರು, ಜೆಡಿಎಸ್‍ನ 19 ಜನರು ಸೇರಿ ನಿಲುವಳಿ ಸೂಚನೆ ಮಂಡಿಸುತ್ತೇವೆ ಎಂದರು.

ನಿನ್ನೆ ನಾನು, ನಮ್ಮ ರಾಜ್ಯಾಧ್ಯಕ್ಷರು ಮತ್ತು ಜೆಡಿಎಸ್‍ನ ಕುಮಾರಸ್ವಾಮಿ ಮತ್ತಿತರ ಪ್ರಮುಖರ ಜೊತೆ ಮಾತನಾಡಿದ್ದೇವೆ. ನಾವೆಲ್ಲರೂ ಸೇರಿ ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳಲ್ಲಿ ತೀವ್ರ ಬರಗಾಲ ಛಾಯೆ ಇದೆ. ಜೂನ್‍ನಲ್ಲಿ ಸಣ್ಣ ಮಳೆ, ಜುಲೈನಲ್ಲಿ ಮಳೆ ಇರಲಿಲ್ಲ. ಆಗಸ್ಟ್‌ನಲ್ಲಿ ಶೇ.73 ಮಳೆ ಕೊರತೆ ಆಗಿದೆ. ರಾಜ್ಯ ಸರ್ಕಾರ, ಸಚಿವರು ಯಾವುದೇ ಕ್ರಮ ಕೈಗೊಳ್ಳದೆ ವಿಧಾನಸೌಧದಲ್ಲಿ ಕುಳಿತು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ವಿಪಕ್ಷ ನಾಯಕ ಸ್ಥಾನಕ್ಕೆ ಆಕಾಂಕ್ಷಿಯಾಗಿರಲಿಲ್ಲ, ಹೈಕಮಾಂಡ್‌ಗೆ ತಿಳಿಸಿದ್ದೆ: ಬೊಮ್ಮಾಯಿ

bjp jds congress

ಒಂದು ನಯಾಪೈಸೆ ಬಿಡುಗಡೆ ಮಾಡಿಲ್ಲ;
ಮಾತೆತ್ತಿದರೆ ಕೇಂದ್ರ ಸರ್ಕಾರ ಎನ್ನುತ್ತಿದ್ದಾರೆ. ಬರ ಸಂಬಂಧ ನಿಲುವಳಿ ಸೂಚನೆ ಮಂಡಿಸುತ್ತೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಮೊದಲು ಶಿವಮೊಗ್ಗ, ಕೋಲಾರದ ಸಮಸ್ಯೆ ಇತ್ತು. ಬೆಂಗಳೂರಿನಲ್ಲಿ ನಿನ್ನೆ ಶಾಲಾ ಮಕ್ಕಳು ಭಯಭೀತರಾಗಿ, ಪೋಷಕರೂ ಓಡಿ ಹೋಗುವಂತಾಗಿತ್ತು. ಈ ಸರ್ಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ವಿಫಲವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸಚಿವ ಜಮೀರ್ ಅಹ್ಮದ್ ಅವರು ತೆಲಂಗಾಣದಲ್ಲಿ ಬಿಜೆಪಿಯ (BJP) ಹಿಂದೂ ಶಾಸಕರು ಮುಸ್ಲಿಂ ಸ್ಪೀಕರ್‌ಗೆ ದಿನಂಪ್ರತಿ ಸಲಾಂ ಹೊಡೆಯಬೇಕಿದೆ ಎಂಬಂತೆ ಮಾತನಾಡಿದ್ದಾರೆ. ಇದು ಸಂವಿಧಾನವಿರೋಧಿ ಹೇಳಿಕೆ. ಇದನ್ನು ನಾವು ಪ್ರಶ್ನಿಸುತ್ತೇವೆ. ಶಿಕ್ಷಣ ವ್ಯವಸ್ಥೆಯಡಿ ರಾಜಕೀಯ ಮಾಡಿದ್ದನ್ನು ಪ್ರಶ್ನಿಸುತ್ತೇವೆ. ಎನ್‍ಇಪಿ ಅಡಿಯಲ್ಲಿ ತಪ್ಪು ಕಂಡುಹಿಡಿಯುವುದನ್ನು ಪ್ರಶ್ನೆ ಮಾಡುತ್ತೇವೆ. ಒಕ್ಕಲಿಗ ಸಮುದಾಯ, ಲಿಂಗಾಯತ ಸಮುದಾಯ ಮೊದಲಾದವರ ವಿರೋಧದ ನಡುವೆ ಕಾಂತರಾಜ್ ವರದಿ ಅನುಷ್ಠಾನಕ್ಕೆ ಮುಂದಾದುದನ್ನು ಚರ್ಚೆಗೆ ಕೈಗೆತ್ತಿಕೊಳ್ಳಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯ ರಾಜಕೀಯ ಒತ್ತಡದ ನಡುವೆ ಕ್ಷೇತ್ರಕ್ಕೆ ಟೈಂ ಕೊಡಲು ಆಗ್ತಿಲ್ಲ: ಡಿಕೆಶಿ

ನೀರಾವರಿ ಯೋಜನೆಗಳ ವಿಚಾರ, ಅನುಷ್ಠಾನದಲ್ಲಿ ವಿಫಲತೆ, ಬಜೆಟ್‍ನಲ್ಲಿ ನೀರಾವರಿಗೆ ಮೋಸ ಮಾಡಿದ್ದನ್ನು ತೆಗೆದುಕೊಳ್ಳುತ್ತೇವೆ. ಪ್ರಮುಖವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಆಗದಿರುವುದು, ನೀರಾವರಿ ಯೋಜನೆಗಳು, ಗ್ಯಾರಂಟಿ ವೈಫಲ್ಯಗಳನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ವಿವರ ನೀಡಿದರು.

TAGGED:bjpcongressjdsr ashokwinter sessionಆರ್‌.ಅಶೋಕ್‌ಕಾಂಗ್ರೆಸ್ಚಳಿಗಾಲದ ಅಧಿವೇಶನಜೆಡಿಎಸ್ಬಿಜೆಪಿ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

son kills father over property disputes in bengaluru
Bengaluru City

ಆಸ್ತಿಗಾಗಿ ವೃದ್ಧ ತಂದೆಯನ್ನು ಇರಿದು ಕೊಂದ ಪಾಪಿ ಮಗ

Public TV
By Public TV
5 minutes ago
mysuru Snehamayi Krishna
Latest

ಮುಡಾ ದೂರುದಾರ ಸ್ನೇಹಮಯಿ ಕೃಷ್ಣಗೆ ಆಮಿಷ?- ಮಾಜಿ ಆಯುಕ್ತ ವಿರುದ್ಧ ಗಂಭೀರ ಆರೋಪ

Public TV
By Public TV
9 minutes ago
india tanker ships
Latest

ಇರಾನ್‌ಗೆ ಸಂಬಂಧಿಸಿದ 3 ಅಮೆರಿಕ ನಿಷೇಧಿತ ಟ್ಯಾಂಕರ್‌ ವಶಕ್ಕೆ ಪಡೆದ ಭಾರತ

Public TV
By Public TV
1 hour ago
GBA Palns To Auction Property Those Who Not Paid Property Tax
Bengaluru City

ನೋಟಿಸ್ ಕೊಟ್ರು ನೋ ರೆಸ್ಪಾನ್ಸ್ – ಆಸ್ತಿ ತೆರಿಗೆ ಪಾವತಿಸದವರ ಆಸ್ತಿ ಹರಾಜಿಗೆ ಮುಂದಾದ ಜಿಬಿಎ

Public TV
By Public TV
2 hours ago
Kolar Private Bus Accident
Crime

ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ

Public TV
By Public TV
2 hours ago
social media ban
Latest

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ ಆಗುತ್ತಾ?- ಭಾರತದಲ್ಲಿ ಇದು ಸಾಧ್ಯವೇ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?