Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ; ಆಡಳಿತ ಪಕ್ಷ v/s ವಿಪಕ್ಷಗಳ ಮಧ್ಯೆ ಫೈಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ; ಆಡಳಿತ ಪಕ್ಷ v/s ವಿಪಕ್ಷಗಳ ಮಧ್ಯೆ ಫೈಟ್

Belgaum

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ; ಆಡಳಿತ ಪಕ್ಷ v/s ವಿಪಕ್ಷಗಳ ಮಧ್ಯೆ ಫೈಟ್

Public TV
Last updated: December 8, 2025 7:46 am
Public TV
Share
2 Min Read
belagavi suvarna soudha
SHARE

– ಸರ್ಕಾರಕ್ಕೆ ಕುರ್ಚಿ ಕದನ ಮುಚ್ಚಿಕೊಳ್ಳುವ ಟೆನ್ಶನ್
– ವಿಪಕ್ಷಗಳಿಗೆ ಅವಿಶ್ವಾಸ ನಿರ್ಣಯ ಮಂಡಿಸುವ ಪ್ಲ್ಯಾನ್

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ (Winter Session) ಆರಂಭವಾಗಲಿದೆ. ಅಧಿವೇಶನಕ್ಕೆ ಕುಂದಾನಗರಿ ಸಜ್ಜಾಗಿದೆ. ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ಡಿಸೆಂಬರ್ 19 ವರೆಗೆ 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, 21ಕ್ಕೂ ಹೆಚ್ಚು ವಿಧೇಯಕಗಳ ಮಂಡನೆ ಸಾಧ್ಯತೆ ಇದೆ.

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ-ಜೆಡಿಎಸ್ ದೋಸ್ತಿಗಳು ಸಜ್ಜಾಗಿವೆ. ವಿಪಕ್ಷಗಳ ಅಸ್ತçಗಳನ್ನು ಎದುರಿಸಲು ಸರ್ಕಾರ ಕೂಡ ರೆಡಿಯಾಗಿದೆ. ಸಿಎಂ ಕುರ್ಚಿಗಾಗಿ ರಾಜ್ಯ ಸರ್ಕಾರದಲ್ಲಿ ಹಗ್ಗ ಜಗ್ಗಾಟ ನಡೆಯುತ್ತಿರುವ ಹಿನ್ನೆಲೆ ಅಧಿವೇಶನದಲ್ಲಿ ಅವಿಶ್ವಾಸ ನಿಲುವಳಿ ಮಂಡನೆಗೆ ವಿಪಕ್ಷ ಬಿಜೆಪಿ ಚಿಂತಿಸಿತ್ತು. ಆದರೆ, ಈಗ ತನ್ನ ನಿರ್ಧಾರದಿಂದ ಕಮಲಪಡೆ ಹಿಂದೆ ಸರಿದಿದೆ. ಇದನ್ನೂ ಓದಿ: ಏನಿದು ಸಿಮ್ ಬೈಂಡಿಂಗ್? ಇನ್ಮುಂದೆ ಮೊಬೈಲ್‌ನಿಂದ ಸಿಮ್ ತೆಗೆದ್ರೆ ವಾಟ್ಸಪ್ ಬಂದ್!

ಬದಲಾದ ರಾಜಕೀಯ ಸನ್ನಿವೇಶ, ಸರ್ಕಾರದ ವಿವಾದಾತ್ಮಕ ನಡೆಗಳು ಮತ್ತು ಉತ್ತರ ಕರ್ನಾಟಕದ ಜನರ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಈ ಅಧಿವೇಶನ ವಿಶೇಷ ಗಮನ ಸೆಳೆಯುತ್ತಿದೆ. ಅಧಿವೇಶನದ ಮೊದಲ ದಿನದ ಕಲಾಪ ಸಂತಾಪ ಸೂಚನೆಗೆ ಮಾತ್ರ ಸೀಮಿತವಾಗಲಿದೆ. ಸಂತಾಪದ ಬಳಿಕ ಕಲಾಪವನ್ನು ಮುಂದೂಡಲು ಸ್ಪೀಕರ್ ತೀರ್ಮಾನಿಸಿದ್ದಾರೆ. ಬಿಜೆಪಿ-ಜೆಡಿಎಸ್ ಪಕ್ಷಗಳು ಈಗಾಗಲೇ ಈಗ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧವಾಗಿವೆ. ಹಂತಹಂತವಾಗಿ ಮಹತ್ವದ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತೀವ್ರ ಒತ್ತಡಕ್ಕೆ ಸಿಲುಕಿಸುವ ಯೋಜನೆ ರೂಪಿಸಲಾಗಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳೇ ಪ್ರಮುಖ ಅಸ್ತ್ರವಾಗಲಿವೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ನೀಡಿದ್ದ ಭರವಸೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸರ್ಕಾರದಿಂದ ಮಾಹಿತಿ ಕೋರಲಿವೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕರಲ್ಲೇ ಮುಂದುವರಿದ ಬಣಗಾರಿಕೆ, ದಿಲ್ಲಿ ಯಾತ್ರೆ, ನಾಯಕತ್ವ ಬದಲಾವಣೆ ಚರ್ಚೆ, ಬ್ರೇಕ್‌ಫಾಸ್ಟ್-ಲಂಚ್-ಡಿನ್ನರ್ ಸಭೆಗಳ ಪ್ರಸ್ತಾಪ, ಇವೆಲ್ಲವೂ ಸರ್ಕಾರಕ್ಕೆ ಮುಜುಗರ ಉಂಟು ಮಾಡಲಿವೆ. ಪ್ರತಿಪಕ್ಷಗಳು ಈ ಒಳಗಿನ ಗೊಂದಲವನ್ನೂ ಆಯುಧವಾಗಿ ಬಳಸಿಕೊಳ್ಳಲಿವೆ. ಇದನ್ನೂ ಓದಿ: ಕೆಎಸ್‌ಸಿಎ ಚುನಾವಣೆ ಫಲಿತಾಂಶ ಪ್ರಕಟ – ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆಗಳ ಬಿಸಿ
ಬೆಳಗಾವಿಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಮೆಕ್ಕೆಜೋಳ, ಕಬ್ಬಿನ ಬೆಲೆ ನಿಗದಿ, ಹೆಸರು ಕಾಳು ಬೆಲೆ ಕುಸಿತವಾಗಿರುವುದು ರೈತರನ್ನು ಕಂಗೆಡಿಸಿದೆ. ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕವಾಗಿ ಶಮನವಾಗಿದ್ದರೂ, ಬೇಡಿಕೆ ಇನ್ನೂ ಪೂರ್ಣವಾಗಿ ಈಡೇರಿಲ್ಲ. ಹೀಗಾಗಿ, ಬಾಗಲಕೋಟೆ ಹಾಗೂ ಇತರ ಜಿಲ್ಲೆಗಳ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ನೇಮಕಾತಿಗಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇತ್ತೀಚೆಗೆ ಉದ್ಯೋಗ ಆಕಾಂಕ್ಷಿಗಳು ಹುಬ್ಬಳ್ಳಿ ಧಾರವಾಡದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ಅದರ ಪರಿಣಾಮ ಮತ್ತೆ ಬೆಳಗಾವಿಯಲ್ಲೂ ಪ್ರತಿಭಟನೆಯಾಗುವ ಸಾಧ್ಯತೆ ಇದೆ. ಇನ್ನು ಒಳಮೀಸಲಾತಿಯ ಗೊಂದಲಗಳು ಇನ್ನೂ ಜೀವಂತವಾಗಿವೆ. ಹೀಗಾಗಿ, ಕೆಲವು ಪರಿಶಿಷ್ಟ ಸಮುದಾಯದ ಸಂಘಟನೆಗಳ ಪ್ರತಿಭಟನೆಯೂ ನಡೆಯುವ ಸಾಧ್ಯತೆ ಇದೆ. ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿಗಳ ದಿನಗೂಲಿ ನೌಕರರು ವೇತನ ಪರಿಷ್ಕರಣೆ ವೇತನ ಪಾವತಿಯಂತಹ ಸಮಸ್ಯೆಗಳಿಗಾಗಿ ಪ್ರತಿಭಟನೆ ನಡೆಸೋ ಸಾಧ್ಯತೆ ಇದೆ. ಇನ್ನು ಮಹಾರಾಷ್ಟ್ರ ಬೆಂಬಲಿತ ಸಂಘಟನೆಗಳು ಮತ್ತೊಮ್ಮೆ ತಗಾದೆ ತೆಗೆಯುವ ಆತಂಕವೂ ಇದೆ.

TAGGED:belagavi sessionbjpcongressjdssessionಕಾಂಗ್ರೆಸ್ಜೆಡಿಎಸ್ಬಿಜೆಪಿಬೆಳಗಾವಿ ಅಧಿವೇಶನ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

HM Revanna
Bengaluru City

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Public TV
By Public TV
1 minute ago
Stamp vendor arrested Bengaluru Bettegowda
Crime

ನಕಲಿ ಪೊಲೀಸರನ್ನು ಕಳುಹಿಸಿ ಸ್ನೇಹಿತನ ಮನೆ ರಾಬರಿ – ಸ್ಟ್ಯಾಂಪ್‌ ವೆಂಡರ್ ಅರೆಸ್ಟ್

Public TV
By Public TV
29 minutes ago
Manjamma Jogathi nari narayani
Bengaluru City

ಮಂಜಮ್ಮ ಜೋಗತಿಗೆ ನಾರಿ ನಾರಾಯಣಿ ಗೌರವ

Public TV
By Public TV
45 minutes ago
Cylinder Price Hike Congress Protest In Bengaluru
Bengaluru City

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Public TV
By Public TV
50 minutes ago
Mala Vijay Makhija nari narayani award
Bengaluru City

ಆಕಾರ್ ಅಡ್ವರ್ಟೈಸಿಂಗ್‌ ಎಂಡಿ ಮಾಲಾ ಮಖೀಜಾಗೆ ನಾರಿ ನಾರಾಯಣಿ ಗೌರವ

Public TV
By Public TV
1 hour ago
Mamata Banerjee Droupadi Murmu
Latest

ರಾಷ್ಟ್ರಪತಿಗೆ ನೀರಿಲ್ಲದ ಶೌಚಾಲಯ ಸ್ಥಾಪಿಸಿದ್ದಕ್ಕೆ ಕೆಂಡಾಮಂಡಲ – ದೀದಿ ಸರ್ಕಾರದಿಂದ ವಿವರಣೆ ಕೋರಿದ ಕೇಂದ್ರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?