ಬೆಳಗಾವಿ: ನೇಪಾಳದಲ್ಲಿ (Nepal) ಹೋಟೆಲ್ ಕೆಲಸಕ್ಕೆ ತೆರಳಿದ್ದ ಬೆಳಗಾವಿ (Belagavi) ಯುವಕ ತನ್ನ ರೂಮ್ಮೇಟ್ನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾನೆ.
ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ. ಈತ ನೇಪಾಳದ ಹೋಟೆಲ್ ಕೆಲಸಕ್ಕೆ ತೆರಳಿದ್ದ. ಜೊತೆಗಿದ್ದ ರೂಮ್ಮೇಟ್ ಆತನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ:ಗಂಡನ ಮನೆಯವರ ಸಾಲದ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ
ಸಾಯಿಲ್ ಶವವನ್ನು ಭಾರತ ತರುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪೊಲೀಸರ ಮೂಲಕ ಈ ಬಗ್ಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಕುಟುಂಬಸ್ಥರು ಬೇಡಿಕೊಂಡಿದ್ದಾರೆ.
ಕೆಲಸ ಅರಿಸಿ ಹೋಗಿದ್ದವನನ್ನ ಭೀಕರವಾಗಿ ಕೊಲೆಯಾಗಿದ್ದು, ಆತನ ದುರಂತ ಅಂತ್ಯಕ್ಕೆ ಕುಟುಂಬಸ್ಥರು ಹಾಗೂ ಸ್ಥಳೀಯರು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದವಳನ್ನ ರಹಸ್ಯವಾಗಿಟ್ಟಿದ್ದ ಪತಿ – ಮನನೊಂದು ನವವಿವಾಹಿತೆ ಆತ್ಮಹತ್ಯೆ
