ಧಾರವಾಡ: ಹಲವು ವರ್ಷಗಳಿಂದ ರಸ್ತೆ, ಚರಂಡಿ ಹಾಗೂ ಚರಂಡಿಗೆ ಸೇತುವೆ ಇಲ್ಲದೇ ಶಹರದ ಹೊರವಲಯಲ್ಲಿರುವವ ಜನರ ಕನಸು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದಿಂದ ನನಸಾಗಿದೆ.
ಗೌಡರ ಕಾಲೋನಿಯಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಕುಟುಂಬದ ಸದಸ್ಯರು ರಸ್ತೆಗೆ ಸರಿಯಾಗಿ ಸಂಪರ್ಕ ಇಲ್ಲದೇ ಪರದಾಡುತ್ತಿದ್ದರು. ಮಳೆ ಬಂತೆಂದರೆ ಜನರು ಓಡಾಡಲು ಆಗದೇ ಮನೆ ರಸ್ತೆಗಳಲ್ಲಿ ನೀರು ತುಂಬಿ ಓಡಾಡಲು ಹರಸಾಹಸ ಪಡುತ್ತಿದ್ದರು.
ಇಲ್ಲಿನ ಸ್ಥಿತಿಯ ಬಗ್ಗೆ ಗ್ರಾಮಸ್ಥರು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಗ್ರಾಮಸ್ಥರು ದಿಕ್ಕುತೋಚದೇ ತಮ್ಮ ಗ್ರಾಮದ ಸಮಸ್ಯೆಯನ್ನು ಪರಿಹರಿಸಿಕೊಡಿ ಎಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದಲ್ಲಿ ತಮ್ಮ ಆಳಲನ್ನು ತೊಡಿಕೊಂಡಿದ್ದರು. ಗ್ರಾಮದ ಸಮಸ್ಯೆ ಪ್ರಸಾರಗೊಂಡ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಅರವಿಂದ ಬೆಲ್ಲದ್ ಅವರನ್ನ ಸಂಪರ್ಕಿಸಿದಾಗ ಸಮಸ್ಯೆಯನ್ನು ಬಗೆ ಹರಿಸಿಕೊಡುವುದಾಗಿ ಭರವಸೆ ನೀಡಿದ್ದರು.
ಅರವಿಂದ ಬೆಲ್ಲದ ನೀಡಿದ ಭರವಸೆಯಂತೆ ತಮ್ಮ ಅನುದಾನದಲ್ಲಿ 16 ಲಕ್ಷ ರೂ. ನೀಡಿ ರಸ್ತೆ ಮಾಡಿಸಿದ್ದಾರೆ. ಸ್ಥಳೀಯ ಪಾಲಿಕೆ ಸದಸ್ಯ ಬಲರಾಮ್ ಅವರು 25 ಲಕ್ಷ ರೂ. ಅನುದಾನದಲ್ಲಿ ಚರಂಡಿ ಮಾಡಿಸಿದ್ದಾರೆ. ಇನ್ನು ದೊಡ್ಡ ಚರಂಡಿ ನಿರ್ಮಾಣಕ್ಕೆ 40 ಲಕ್ಷ ರೂ. ಅನುದಾನ ಬೇಕಿದ್ದು, ಈ ಬಾರಿ ಬರುವ ಅನುದಾನದಲ್ಲಿ ಆ ಕೆಲಸ ಕೂಡ ಮಾಡುವ ಭರವಸೆ ನೀಡಿದ್ದಾರೆ.
ಈ ಗ್ರಾಮದಲ್ಲಿ ಸುಸಜ್ಜಾತವಾಗಿ ರಸ್ತೆ, ಚರಂಡಿ ನಿರ್ಮಾಣ ಮಾಡಲಾಗಿದ್ದು. ಇಲ್ಲಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಪ್ರತಿಫಲವಾಗಿ ಇಲ್ಲಿನ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಧಾರವಾಡ ಜಿಲ್ಲೆ ಶಹರದ ಹೊರವಲಯಲ್ಲಿರೋ ಗೌಡರ ಕಾಲೋನಿಯ ಸಮಸ್ಯೆಗೆ ಪರಿಹಾರ ಸಿಕ್ಕಿರೋದು ನಮ್ಮ ಪ್ರಯತ್ನಕ್ಕೆ ಪ್ರತಿಫಲ ದೊರೆತಿದೆ.
https://www.youtube.com/watch?v=er12muixrJ0
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv