Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
BELAKU

ಬೆಳಕಿಗಾಗಿ ಹಂಬಲಿಸುತ್ತಿರೋ ಯಕ್ಷಗಾನ ಕಲಾವಿದನ ಕುಟುಂಬಕ್ಕೆ ಸಹಾಯ ಮಾಡಿ ಪ್ಲೀಸ್

Public TV
Last updated: March 10, 2018 8:17 pm
Public TV
Share
2 Min Read
KWR BELAKU 1
SHARE

ಕಾರವಾರ: ಕಲಾವಿದರ ಬದುಕೇ ಹಾಗೆ, ತನ್ನ ಜೀವನವನ್ನೇ ಧಾರೆಯೆರೆದು ಕಲಾಪೋಷಣೆಗೆ ನಿಲ್ಲುವ ಇವರು ತಮ್ಮ ಬದುಕನ್ನೇ ಕತ್ತಲಾಗಿಸಿಕೊಂಡು ಕಲಾ ಆರಾಧನೆ ಮಾಡುತ್ತಾರೆ.

ಹೊನ್ನಾವರ ತಾಲೂಕಿನ ನಿವಾಸಿಯಾಗಿರುವ ಮಂಜುನಾಥ್ ಭಂಡಾರಿ ಮೂರು ತಲೆಮಾರುಗಳಿಂದ ಯಕ್ಷಗಾನದ ಹಿಮ್ಮೇಳಕ್ಕೆ ಜೀವ ತುಂಬಿ ಇದಕ್ಕಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಆದ್ರೆ ಮಂಜುನಾಥ್ ಅವರ ಬಾಳಲ್ಲಿ ಬರ ಸಿಡಿಲಿನಂತೆ ಅನಾರೋಗ್ಯ ಆವರಿಸಿದೆ. ಒಂಬತ್ತು ವರ್ಷಗಳು ಕಳೆದರೂ ಈ ಕೂಪದಿಂದ ಹೊರಬರಲಾಗದೇ ಇಡೀ ಕುಟುಂಬ ಬಡತನ ಬದುಕು ಸಾಗಿಸುತ್ತಿದ್ದು ಬೆಳಕಿಗಾಗಿ ಹಂಬಲಿಸುತ್ತಿದೆ.

ಮೃದಂಗ, ಚಂಡೆ ವಾದಕರಾಗಿ ಇದರ ತಯಾರಿಕೆಯನ್ನು ಸಹ ಮಾಡುತ್ತಿರುವ ಈ ಕಲೆ ಮುತ್ತಜ್ಜನಿಂದ ಬಳುವಳಿಯಾಗಿ ಬಂದಿದೆ. ಮಂಜುನಾಥರ ತಂದೆ ಪ್ರಭಾಕರ್ ಪಾಂಡುರಂಗ ಭಂಡಾರಿ ಕೂಡ ಕರಾವಳಿ ಭಾಗದಲ್ಲಿ ಪ್ರಸಿದ್ಧ ಮೃದಂಗ ವಾದಕರಾಗಿದ್ದು, 2002ರಲ್ಲಿ ಅಂದಿನ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಸಹ ನೀಡಿ ಸನ್ಮಾನಿಸಿತ್ತು.

KWR BELAKU 2

ಮಂಜುನಾಥ್ ಭಂಡಾರಿಯವರು ಮೃದಂಗ, ಚಂಡೆ ವಾದನದ ಜೊತೆಗೆ ಮಣ್ಣಿನ ಕಲಾಕೃತಿ ರಚನೆಯಲ್ಲಿಯೂ ಸಿದ್ಧಹಸ್ತರು. ಹೀಗಾಗಿ ಅನೇಕ ಸನ್ಮಾನಗಳಿಗೆ ಭಾಜನರಾಗಿದ್ದಾರೆ. ಇನ್ನು ತನ್ನ ಮಡದಿ ಶಾರದಾ, ತಂದೆ ಪಾಂಡುರಂಗ ಭಂಡಾರಿ, ಇಬ್ಬರು ಹೆಣ್ಣುಮಕ್ಕಳಾದ ಮಧುರ, ಮಾನಸಾ ಎಂಬವರೊಂದಿಗೆ ಕಲಾರಾಧನೆ ಮೂಲಕ ನೆಮ್ಮದಿ ಜೀವನ ನಡೆಸುತ್ತಿದ್ದರು. ಆದ್ರೆ ಈಗ ಇವರಿಗೆ ವಾತ ಹಾಗೂ ಮೂಳೆ ಸಮಸ್ಯೆ ಎದುರಾಗಿ ತನ್ನ ದೇಹದ ಶಕ್ತಿ ಕಳೆದುಕೊಳ್ಳುವ ಜೊತೆಗೆ ಕೈಗಳ ಮೂಳೆ ಬೆಳೆದು ಸ್ವಾಧೀನ ಇಲ್ಲದಂತಾಗಿ ಇಡೀ ಕುಟುಂಬದ ಜವಾಬ್ದಾರಿ ಹೊತ್ತ ಇವರು ದಿನದ ತುತ್ತಿಗೂ ಕಷ್ಟಪಡುವಂತಾಗಿದೆ.

ಚಿಕಿತ್ಸೆಗಾಗಿ ಕೂಡಿಟ್ಟ ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡಿ ಬಲಗೈಗೆ ರಾಡ್ ಹಾಕುವ ಮೂಲಕ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದ್ರೆ ಗುಣಮುಖವಾಗುವ ಬದಲು ಕೈಯಲ್ಲಿದ್ದ ಹಣ ಖಾಲಿಯಾಗಿ ಇತ್ತ ಮೃದಂಗ, ಚಂಡೆಯ ಬಾರ್ ಕಟ್ಟಲೂ ಶಕ್ತನಾಗದೇ ಈ ಕೆಲಸವನ್ನೇ ಬಿಡುವಂತಾಯ್ತು. ಮಂಜುನಾಥ್ ಅವರ ಕಷ್ಟಕ್ಕೆ ಯಕ್ಷಾಭಿಮಾನಿಗಳು ಧನ ಸಹಾಯ ಮಾಡಿ ಮತ್ತಷ್ಟು ಚಿಕಿತ್ಸೆಗೆ ಸಹಕರಿಸಿದ್ರು. ಇದರಿಂದ ಸ್ವಲ್ಪ ಮಟ್ಟಿಗೆ ಆರೋಗ್ಯ ಸುಧಾರಿಸಿದೆ. ಆದರೆ ಬೆಳದು ನಿಂತ ಹಿರಿಯ ಮಗಳು ಮಧುರಾ ಅವರಿವರ ಸಹಾಯದಿಂದ ಬಿಎಡ್ ಮಾಡಿ ಎಂಎ ಮಾಡುತ್ತಿದ್ದಾರೆ. ಎರಡನೇ ಮಗಳು ಮಾನಸ ಅಂತಿಮ ಬಿಕಾಂ ಓದುತ್ತಿದ್ದು, ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಹಣ ಹೊಂದಿಸಲು ಕಷ್ಟಪಡುತ್ತಿದ್ದು ಬೆಳಕು ಕಾರ್ಯಕ್ರಮದ ಮೂಲಕ ಸಹಾಯ ಬೇಡಿದ್ದಾರೆ.

Belaku KWR

ಮಂಜುನಾಥ್ ಭಂಡಾರಿ ಕಳೆದ ಒಂಬತ್ತು ವರ್ಷಗಳಿಂದ ಅಕಾಲಿಕ ರೋಗದಿಂದಾಗಿ ಮೃದಂಗ, ಚಂಡೆ ತೆಯಾರಿಕೆಯನ್ನು ಮಾಡಲಾಗದೇ ಜೀವನಕ್ಕೆ ಆಧಾರವಾಗಿದ್ದ ಕಸುಬನ್ನು ಬಿಟ್ಟು ಪಾಶ್ರ್ವ ವಾಯು ಪೀಡಿತ ತಂದೆ, ಇಬ್ಬರ ಮಕ್ಕಳ ಶಿಕ್ಷಣ ನೋಡಿಕೊಳ್ಳಲು ಪರದಾಡುತ್ತಿದ್ದಾರೆ. ಇತ್ತ ಅವರ ಚಿಕಿತ್ಸೆ ಜೊತೆಯಲ್ಲಿ ಮಕ್ಕಳ ಓದಿಗೆ ಸಹಾಯ ಮಾಡಿದ್ದಲ್ಲಿ ಅವರ ಉದ್ಯೋಗದಿಂದ ಜೀವನ ನಡೆಸಬಹುದಾಗಿದ್ದು ಕಷ್ಟಗಳು ದೂರವಾಗುತ್ತವೆ ಎಂಬವುದು ಅಭಿಮಾನಿಗಳ ಹಂಬಲ.

ಮೂರು ತಲೆಮಾರುಗಳಿಂದ ಯಕ್ಷಗಾನ ಲೋಕಕ್ಕೆ ತನ್ನದೇ ಆದ ಸೇವೆಯನ್ನು ಈ ಕುಟುಂಬ ನೀಡುತ್ತಾ ಬಂದಿದೆ. ಇವರ ಈ ಸೇವೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ಸರ್ಕಾರ ನೀಡಿದೆ. ಒಂಬತ್ತು ವರ್ಷದ ವನವಾಸದಲ್ಲಿ ಅಭಿಮಾನಿಗಳ ಹೊರತಾಗಿ ಸರ್ಕಾರ ಮಾತ್ರ ಈ ಕುಟುಂಬದ ಸಹಾಯಕ್ಕೆ ಬರಲಿಲ್ಲ. ತಮ್ಮ ಆರೋಗ್ಯ, ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಕ್ಕೆ ಯಾರಾದರೂ ಸಹಾಯ ಮಾಡಬಹುದು ಎನ್ನುವ ನಿರೀಕ್ಷೆಯಲ್ಲಿ ಮಂಜುನಾಥ್ ಭಂಡಾರಿ ಇದ್ದಾರೆ.

 

https://youtu.be/0MfO9F_5xyg

TAGGED:artistbelakudiseaseEconomic ProblemeducationhonnavarkarwarManjunath Bhandari.Public TVYakshaganaಆರ್ಥಿಕ ಸಮಸ್ಯೆಕಲಾವಿದಕಾರವಾರಪಬ್ಲಿಕ್ ಟಿವಿಬೆಳಕುಮಂಜುನಾಥ್ ಭಂಡಾರಿ.ಯಕ್ಷಗಾನರೋಗಶಿಕ್ಷಣಹೊನ್ನಾವರ
Share This Article
Facebook Whatsapp Whatsapp Telegram

You Might Also Like

Firozpur
Latest

ಅರ್ಧಶತಕ ಗಳಿಸುವ ಮುನ್ನವೇ ಬಂದ ಜವರಾಯ – ಸಿಕ್ಸರ್ ಹೊಡೆದ ಹತ್ತೇ ಸೆಕೆಂಡ್‌ನಲ್ಲಿ ಹಾರಿತು ಪ್ರಾಣಪಕ್ಷಿ

Public TV
By Public TV
10 minutes ago
Mobile video recording
Crime

ಪ್ರಾಧ್ಯಾಪಕಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಮದುವೆಯಾಗುವಂತೆ ಟಾರ್ಚರ್‌!

Public TV
By Public TV
36 minutes ago
Pension
Bengaluru City

ಸುಳ್ಳು ಮಾಹಿತಿ ನೀಡಿ ಪಿಂಚಣಿ ಪಡೆಯೋರಿಗೆ ಶಾಕ್ – 23 ಲಕ್ಷ ಪಿಂಚಣಿದಾರರ ಮೇಲೆ ಕಂದಾಯ ಇಲಾಖೆ ಅನುಮಾನ

Public TV
By Public TV
57 minutes ago
Operation Sindoor
Latest

3 ರಫೇಲ್‌ ಸೇರಿ 5 ಯುದ್ಧ ವಿಮಾನಗಳನ್ನ ಪಾಕ್‌ ಹೊಡೆದಿದೆ – ಐಎಎಫ್‌ ಅಧಿಕಾರಿ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವಾಗ್ದಾಳಿ

Public TV
By Public TV
1 hour ago
Sub inspector killed after being hit by lorry in Bengaluru
Bengaluru City

ಗಾಂಜಾ ಆರೋಪಿಗಳನ್ನು ಕರೆತರುತ್ತಿದ್ದ ಸಬ್‌ ಇನ್ಸ್‌ಪೆಕ್ಟರ್‌ಗೆ ಲಾರಿ ಡಿಕ್ಕಿಯಾಗಿ ಸಾವು – ಪ್ರಕರಣದ ಸುತ್ತ ಹಲವು ಅನುಮಾನ

Public TV
By Public TV
2 hours ago
Heer Express teaser
Bollywood

ಹೀರ್ ಎಕ್ಸ್‌ಪ್ರೆಸ್ ಟೀಸರ್‌ಗೆ ಭಾರೀ ಮೆಚ್ಚುಗೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?